ಮಂಗಳೂರು : ಆಸ್ಕರ್ ಫರ್ನಾಂಡಿಸ್ ಆರೋಗ್ಯ ವಿಚಾರಿಸಿದ ಎಂ.ಬಿ ಪಾಟೀಲ್
Team Udayavani, Jul 21, 2021, 3:28 PM IST
ಮಂಗಳೂರು : ಕಾಂಗ್ರೆಸ್ ಹಿರಿಯ ಮುಖಂಡ ಆಸ್ಕರ್ ಫರ್ನಾಂಡಿಸ್ ಆಸ್ಪತ್ರೆಗೆ ದಾಖಲಾಗಿರುವ ಹಿನ್ನೆಲೆಯಲ್ಲಿ ಮಾಜಿ ಸಚಿವ ಎಂ.ಬಿ.ಪಾಟೀಲ್ ಮಂಗಳೂರಿನ ಯೆನೆಪೋಯಾ ಆಸ್ಪತ್ರೆಗೆ ಭೇಟಿ ನೀಡಿ ಆಸ್ಕರ್ ಫರ್ನಾಂಡಿಸ್ ಅವರ ಆರೋಗ್ಯ ವಿಚಾರಿಸಿದ್ದಾರೆ.
ಮನೆಯಲ್ಲಿ ಜಾರಿ ಬಿದ್ದು ಗಾಯಗೊಂಡಿದ್ದ ಆಸ್ಕರ್ ಫರ್ನಾಂಡಿಸ್ ಅವರಿಗೆ ಮೆದುಳಿಗೆ ಏಟು ಬಿದ್ದು ಸದ್ಯ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದಾರೆ.ಆಸ್ಕರ್ ಭೇಟಿ ಬಳಿಕ ಮಾತನಾಡಿದ ಎಂ ಬಿ ಪಾಟೀಲ್, ಅವರಿಗೆ ಸದ್ಯ ಪರಿಣಿತ ತಜ್ಞ ವೈದ್ಯರ ತಂಡ ಚಿಕಿತ್ಸೆ ಕೊಡ್ತಿದೆ. ಮಣಿಪಾಲ್ ವೈದ್ಯರು ಸೇರಿದಂತೆ ಬೇರೆ ಬೇರೆ ತಜ್ಞ ವೈದ್ಯರು ಚಿಕಿತ್ಸೆ ಕೊಡ್ತಿದ್ದಾರೆ. ಸೋನಿಯಾ ಗಾಂಧಿ, ರಾಹುಲ್, ಪ್ರಿಯಾಂಕ ಆಸ್ಕರ್ ಕುಟುಂಬದ ಜೊತೆ ಮಾತನಾಡಿದ್ದಾರೆ. ಪೇಜಾವರ ಸ್ವಾಮೀಜಿಗಳು ಕೂಡ ಅವರ ಆರೋಗ್ಯ ವಿಚಾರಿಸಿದ್ದಾರೆ ಎಂದರು.
ಆಸ್ಕರ್ ಅವರು ಕೆಪಿಸಿಸಿ ಅಧ್ಯಕ್ಷರಾಗಿದ್ದಾಗ ನನ್ನ ತಂದೆ ಉಪಾಧ್ಯಕ್ಷರಾಗಿದ್ರು. ನಮ್ಮ ತಂದೆಯವರ ಸ್ವಭಾವ ಮತ್ತು ಆಸ್ಕರ್ ಅವರ ಸ್ವಭಾವ ಒಂದೇ ಆಗಿತ್ತು. ಹೀಗಾಗಿ ನನ್ನ ಮೇಲೂ ವಿಶೇಷ ಪ್ರೀತಿ ಇದ್ದ ಕಾರಣ ಈ ಸ್ಥಾನಕ್ಕೇರಲು ಸಹಾಯ ಮಾಡಿದ್ದರು. ಅವರ ಆರೋಗ್ಯದ ವಿಚಾರದಲ್ಲಿ ಪ್ರಾರ್ಥಿಸ್ತೇವೆ, ಅವರು ಜಂಟಲ್ ಮೆನ್, ಬಹಳ ಒಳ್ಳೆಯ ಮನುಷ್ಯ. ಟೆಲಿ ಮೆಡಿಸಿನ್ ಸಂಬಂಧವೂ ಎಲ್ಲಾ ವೈದ್ಯರ ಜೊತೆ ಮಾತುಕತೆ ನಡೀತಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ದೇಶ ಒಡೆಯುವ ಮಾನಸಿಕತೆ ಕಾಂಗ್ರೆಸ್ನದ್ದು: ಮೀನಾಕ್ಷಿ ಲೇಖಿ
Lok Sabha Elections; ಕಾಂಗ್ರೆಸ್ಗೆ ಉತ್ತಮ ಅವಕಾಶ: ದಿನೇಶ್ ಗುಂಡೂರಾವ್
Mangaluru ಪೆಟ್ರೋಲ್, ಡೀಸೆಲ್ ತುಟ್ಟಿ : ಪುಷ್ಪಾ ಅಮರನಾಥ್
Congress ಆಳ್ವಿಕೆಯಲ್ಲಿ ಹಿಂದುಗಳಿಗೆ ಉಳಿಗಾಲ ಇಲ್ಲ : ಯಶ್ಪಾಲ್
Lok Sabha Election ಫಲಿತಾಂಶದ ಬೆನ್ನಲ್ಲೇ ಮುಖ್ಯಮಂತ್ರಿ ಕುರ್ಚಿ ಅಲುಗಾಡಲಿದೆ: ಡಿ.ವಿ.