ಮಂಗಳೂರು: ಸಾವರ್ಕರ್ ಫೋಟೋ ವಿಚಾರದಲ್ಲಿ ವಿದ್ಯಾರ್ಥಿಗಳ ಗುಂಪು ಘರ್ಷಣೆ
ಗಾಯಗೊಂಡ ವಿದ್ಯಾರ್ಥಿಗಳು ಆಸ್ಪತ್ರೆಗೆ ದಾಖಲು
Team Udayavani, Jun 10, 2022, 4:24 PM IST
ಮಂಗಳೂರು: ತರಗತಿಯಲ್ಲಿ ಸಾವರ್ಕರ್ ಫೋಟೋ ಹಾಕಿರುವ ವಿಚಾರಕ್ಕೆ ಸಂಬಂಧಿಸಿ ಮಂಗಳೂರು ವಿವಿ ಘಟಕ ಕಾಲೇಜಿನಲ್ಲಿ ವಿದ್ಯಾರ್ಥಿಗಳ ಎರಡು ಗುಂಪುಗಳು ಪರಸ್ಪರ ಹಲ್ಲೆ ನಡೆಸಿದ ಘಟನೆ ಶುಕ್ರವಾರ ನಡೆದಿದೆ.
ಮಧ್ಯಾಹ್ನ ಭೋಜನ ವಿರಾಮದ ವೇಳೆ ಈ ಘಟನೆ ನಡೆದಿದ್ದು, ಲಭ್ಯ ಮಾಹಿತಿಯಂತೆ ಕೆಲವು ವಿದ್ಯಾರ್ಥಿಗಳು ಕೆಲ ದಿನ ಹಿಂದೆ ತರಗತಿಯಲ್ಲಿ ಸಾವರ್ಕರ್ ಫೊಟೊ ಹಾಕಿದ್ದನ್ನು ಆಕ್ಷೇಪಿಸಿದ್ದಾರೆ. ಇಂದು ಈ ವಿಚಾರವಾಗಿ ಎರಡು ಗುಂಪಿನ ವಿದ್ಯಾರ್ಥಿಗಳ ನಡುವೆ ಮಾತಿಗೆ ಮಾತು ಬೆಳೆದಿದ್ದು ಕೈ ಕೈ ಮಿಲಾಯಿಸಿಕೊಳ್ಳುವ ಹಂತಕ್ಕೆ ತಲಪಿದೆ.
ಈ ವೇಳೆ ಕೆಲವು ವಿದ್ಯಾರ್ಥಿಗಳು ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ. ಸ್ಥಳಕ್ಕೆ ಮಂಗಳೂರು ಪೊಲೀಸ್ ಕಮಿಷನರ್ ಶಶಿಕುಮಾರ್ ಭೇಟಿ ನೀಡಿದ್ದಾರೆ.
ಇದನ್ನೂ ಓದಿ:ಬೆಂಗಳೂರು: ವಿವಾಹ ಪ್ರಸ್ತಾಪ ನಿರಾಕರಿಸಿದ ವಿಚ್ಛೇದಿತೆಯ ಮೇಲೆ ಆ್ಯಸಿಡ್ ದಾಳಿ
ಕೆಲ ದಿನ ಹಿಂದೆ ತರಗತಿಯಲ್ಲಿ ಸಾವರ್ಕರ್ ಫೊಟೊವನ್ನು ವಿದ್ಯಾರ್ಥಿಗಳು ಹಾಕಿದ್ದರು. ಬಳಿಕ ಅದನ್ನು ಪ್ರಾಂಶುಪಾಲರು ತೆಗೆಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್
ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ
ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ
ಕಾಂಗ್ರೆಸ್ ನವರು ಕೇಸರಿ ಶಾಲು ಹಾಕಿದಾಕ್ಷಣ ಮನಸ್ಥಿತಿ ಬದಲಾಗಲ್ಲ… ಶೆಟ್ಟರ್ ಆರೋಪ
2014 ರಿಂದಲೇ ಜೆಡಿಎಸ್ ಬಿಜೆಪಿ ಮೈತ್ರಿಯಲ್ಲಿವೆ ಇದು ಹೊಸದೇನಲ್ಲ… HDK