ಭಾರತ್ ಬಂದ್: ಮಂಗಳೂರಿನಲ್ಲಿ ಬಸ್, ಹೋಟೆಲ್ ಗೆ ಕಲ್ಲು ತೂರಾಟ
Team Udayavani, Sep 10, 2018, 8:57 AM IST
ಮಂಗಳೂರು: ಭಾರತ್ ಬಂದ್ ಗೆ ಉತ್ತರ ಕರ್ನಾಟಕ ಸೇರಿದಂತೆ ಮಂಗಳೂರು, ಉಡುಪಿ, ಕುಂದಾಪುರದಲ್ಲೂ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಖಾಸಗಿ ಹಾಗೂ ಸರ್ಕಾರಿ ಬಸ್ ಸಂಪೂರ್ಣ ಸ್ಥಗಿತಗೊಂಡಿದ್ದರಿಂದ ಪ್ರಯಾಣಿಕರು ಪರದಾಡುವಂತಾಗಿದೆ. ಮತ್ತೊಂದೆಡೆ ಮಂಗಳೂರಿನಲ್ಲಿ ಬಸ್ ಹಾಗೂ ಹೋಟೆಲ್ ಮೇಲೆ ಕಲ್ಲುತೂರಾಟ ನಡೆಸಿದ ಘಟನೆ ಸೋಮವಾರ ನಡೆದಿದೆ.
ಜ್ಯೋತಿ ಸರ್ಕಲ್ ಹಾಗೂ ಕುಲಶೇಖರದಲ್ಲಿ ಟಯರ್ ಗೆ ಬೆಂಕಿ ಹಚ್ಚಿರುವ ಘಟನೆ ನಡೆದಿದೆ. ಬಲ್ಮಠ ಸಮೀಪ ಬಸ್ ಗೆ ಕಲ್ಲುತೂರಾಟ ನಡೆಸಿರುವ ಬಗ್ಗೆ ವರದಿಯಾಗಿದೆ.
ಏತನ್ಮಧ್ಯೆ ಹೆಲ್ಮೆಟ್ ಧರಿಸಿ ಬೈಕ್ ನಲ್ಲಿ ಬಂದ ದುಷ್ಕರ್ಮಿಯೊಬ್ಬ ಕದ್ರಿಯ ಶಿವಭಾಗ್ ರೆಸ್ಟೋರೆಂಟ್ ಮೇಲೆ ಕಲ್ಲುತೂರಾಟ ನಡೆಸಿದ್ದು, ರೆಸ್ಟೋರೆಂಟ್ ನ ಕಿಟಕಿ ಗಾಜು ಪುಡಿ,ಪುಡಿಯಾಗಿದೆ. ಈ ಬಗ್ಗೆ ಪೊಲೀಸರಿಗೆ ದೂರು ನೀಡಿರುವುದಾಗಿ ರೆಸ್ಟೋರೆಂಟ್ ಮಾಲಕರು ತಿಳಿಸಿದ್ದಾರೆ.
ಮಂಗಳೂರಿನಲ್ಲಿ ಬಹುತೇಕ ಅಂಗಡಿ, ಮುಂಗಟ್ಟುಗಳು ಬಂದ್ ಆಗಿದ್ದು, ಸಂಚಾರ ಬಿಕೋ ಎನ್ನುತ್ತಿದೆ. ಬೆಂಗಳೂರು ಸೇರಿದಂತೆ ದೂರ ಪ್ರಯಾಣದ ಬಸ್ ಗಳು ನಗರಕ್ಕೆ ಆಗಮಿಸುತ್ತಿವೆ ಎಂದು ವರದಿ ತಿಳಿಸಿದೆ.
ದಕ್ಷಿಣ ಕನ್ನಡ ಜಿಲ್ಲೆ ಬಂಟ್ವಾಳದಲ್ಲಿ ಕೆಎಸ್ ಆರ್ ಟಿಸಿ ಮೇಲೆ ಕಲ್ಲುತೂರಾಟ ನಡೆಸಿರುವ ಬಗ್ಗೆ ವರದಿಯಾಗಿದೆ. ಕೆಲವೆಡೆ ಬಲವಂತದಿಂದ ಬಂದ್ ಮಾಡಿಸುತ್ತಿರುವ ಬಗ್ಗೆ ದೂರು ಕೇಳಿ ಬಂದಿದೆ.
Ad
ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ, ಜಯನಗರ ಬೆಂಗಳೂರು, ಮೋ- 8884889444
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಬೆಳಗಾವಿ ನಮ್ಮದು, ನೀವೊಬ್ಬರು ಮುಖ್ಯಮಂತ್ರಿ ಎಂದು ಮರೆಯಬೇಡಿ; ಮಹಾ ಸಿಎಂ ಗೆ ಸಿದ್ದರಾಮಯ್ಯ
ಮಹಾರಾಷ್ಟ್ರದಲ್ಲಿ ಸಾವಿರ ಮುಖ್ಯಮಂತ್ರಿ ಬಂದರೂ ಬೆಳಗಾವಿ ಕರ್ನಾಟದಲ್ಲೇ ಇರುತ್ತದೆ: ಸವದಿ
ದೇಶದ ಏಕತೆಗೆ ಮಾರಕ: ಉದ್ಧವ್ ಠಾಕ್ರೆ ಮಾತಿಗೆ ಯಡಿಯೂರಪ್ಪ ಖಂಡನೆ
ಕನ್ನಡ ಬಳಸದ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮಕ್ಕೆ ಮುಂದಾದ ಪ್ರಾಧಿಕಾರ
ಚನ್ನಪಟ್ಟಣ ಬೊಂಬೆ, ಕಿನ್ನಾಳ ಆಟಿಕೆ ವಿದೇಶಕ್ಕೆ ರಫ್ತು
MUST WATCH
KBCಯಲ್ಲಿ 12.5 ಲಕ್ಷ ಗೆದ್ದು ಬಡ ಮಕ್ಕಳ ಆಶಾಕಿರಣವಾದ ರವಿ ಕಟಪಾಡಿ | Udayavani
Whatsapp ಅನ್ನು ಓವರ್ ಟೇಕ್ ಮಾಡಿದ ಸಿಗ್ನಲ್!!??
ದ.ಕ ಜಿಲ್ಲೆಯಲ್ಲಿ ಕೋವಿಡ್ ಲಸಿಕೆ ವಿತರಣೆ ಅಭಿಯಾನಕ್ಕೆ ಕೋಟ ಶ್ರೀನಿವಾಸ ಪೂಜಾರಿ ಚಾಲನೆ
ಉಡುಪಿ ಜಿಲ್ಲಾಸ್ಪತ್ರೆಯಲ್ಲಿ ಕೋವಿಡ್ 19 ಲಸಿಕೆ ಅಭಿಯಾನ; ಪ್ರಥಮ ಡೋಸ್ ನೀಡಿ ಚಾಲನೆ
ಉಡುಪಿಯಲ್ಲಿ ಕೋರೋನಾ ಲಸಿಕೆ ಪಡೆದ ಮೊದಲ ವ್ಯಕ್ತಿಯ ಮಾತು
ಹೊಸ ಸೇರ್ಪಡೆ
ಬೆಳಗಾವಿ ನಮ್ಮದು, ನೀವೊಬ್ಬರು ಮುಖ್ಯಮಂತ್ರಿ ಎಂದು ಮರೆಯಬೇಡಿ; ಮಹಾ ಸಿಎಂ ಗೆ ಸಿದ್ದರಾಮಯ್ಯ
ಸಿಎಂಗೆ ಪತ್ರ ಬರೆದಿಟ್ಟು ಅರಣ್ಯ ಇಲಾಖೆಯ ಅರೆಕಾಲಿಕ ನೌಕರ ಕಚೇರಿಯಲ್ಲಿ ನೇಣಿಗೆ ಶರಣು
2ಲಕ್ಷಕ್ಕೂ ಅಧಿಕ ಮಂದಿಗೆ ಲಸಿಕೆ, 447 ಫಲಾನುಭವಿಗಳಲ್ಲಿ ಅಡ್ಡಪರಿಣಾಮ ಪತ್ತೆ: ಕೇಂದ್ರ
ಮಹಾರಾಷ್ಟ್ರದಲ್ಲಿ ಸಾವಿರ ಮುಖ್ಯಮಂತ್ರಿ ಬಂದರೂ ಬೆಳಗಾವಿ ಕರ್ನಾಟದಲ್ಲೇ ಇರುತ್ತದೆ: ಸವದಿ
ದೇಶದ ಏಕತೆಗೆ ಮಾರಕ: ಉದ್ಧವ್ ಠಾಕ್ರೆ ಮಾತಿಗೆ ಯಡಿಯೂರಪ್ಪ ಖಂಡನೆ