ಬೆಂಗಳೂರಿನಲ್ಲಿ ಮ್ಯಾನ್ಹೋಲ್ ದುರಂತ;3 ಕಾರ್ಮಿಕರು ಬಲಿ
Team Udayavani, Jan 7, 2018, 3:34 PM IST
ಬೆಂಗಳೂರು: ನಗರದಲ್ಲಿ ಭಾನುವಾರ ಮ್ಯಾನ್ಹೋಲ್ ದುರಂತವೊಂದು ನಡೆದಿದ್ದು ಸೋಮಸಂದ್ರ ಪಾಳ್ಯದಲ್ಲಿ ಅಪಾರ್ಟ್ಮೆಂಟ್ವೊಂದರ ಒಳಚರಂಡಿ ನೀರು ಸ್ವಚ್ಛತಾ ಘಟಕ ಸ್ವತ್ಛತೆಗೆ ಇಳಿದಿದ್ದ ಮೂವರು ಕಾರ್ಮಿಕರು ಉಸಿರುಗಟ್ಟಿ ದಾರುಣವಾಗಿ ಸಾವನ್ನಪ್ಪಿದ್ದಾರೆ.
ಅಪಾರ್ಟ್ಮೆಂಟ್ ಪಕ್ಕದಲ್ಲಿರುವ ಅಪಾರ್ಟ್ಮೆಂಟ್ನ ಎಸ್ಟಿಪಿಗೆ ಇಳಿದ್ದಿದ್ದ ಕೂಲಿ ಕಾರ್ಮಿಕರು 10 ಅಡಿ ಆಳದಲ್ಲಿ ಸಿಲುಕಿ ಉಸಿರುಗಟ್ಟಿ ಹೊರ ಬರಲಾರದೆ ದಾರುಣವಾಗಿ ಸಾವನ್ನಪ್ಪಿದ್ದಾರೆ.
ಕಾರ್ಮಿಕರು ಸಿಲುಕಿರುವುದನ್ನು ಗಮನಿಸಿ ಕೂಡಲೇ ಅಗ್ನಿ ಶಾಮಕದಳದ ಸಿಬಂದಿಗಳನ್ನು ಸ್ಥಳಕ್ಕೆ ಕರೆಸಿಕೊಳ್ಳಲಾಗಿತ್ತು. ಸಿಬಂದಿಗಳು ಹರಸಾಹಸ ಪಟ್ಟು ಮೂವರನ್ನುಮೇಲೆಕ್ಕೆತ್ತಿದ್ದು ಅದಾಗಲೇ ಓರ್ವ ಮೃತಪಟ್ಟಿದ್ದರು.
ಇನ್ನಿಬ್ಬರು ಉಸಿರು ಇದ್ದಿದ್ದು ಅವರನ್ನು ಸೇಂಟ್ ಜಾನ್ಸ್ ಆಸ್ಪತ್ರೆಗೆ ದಾಖಲು ಮಾಡಲಾಯಿತು ಆದರೆ ಇಬ್ಬರೂ ಕೊನೆಯುಸಿರೆಳೆದಿರುವುದಾಗಿ ಆಸ್ಪತ್ರೆಯ ಮೂಲಗಳು ತಿಳಿಸಿವೆ.
ಮೃತ ದುರ್ದೈವಿಗಳು ತುಮಕೂರು ಮೂಲದ ಮಾದೇಗೌಡಮತ್ತು ಕೋಲಾರ ಮೂಲದ ನಾರಾಯಣ ಸ್ವಾಮಿ ಎಂದು ತಿಳಿದು ಬಂದಿದೆ. ಇನ್ನೋರ್ವನ ಗುರುತು ಇನ್ನಷ್ಟೆ ತಿಳಿದು ಬರಬೇಕಿದೆ.
ದುರ್ಘಟನೆ ನಡೆಸ ಸ್ಥಳಕ್ಕೆ ಬೆಂಗಳೂರು ನಗರ ಉಸ್ತುವಾರಿ ಸಚಿವ ಕೆ.ಜೆ.ಜಾರ್ಜ್, ಬಿಬಿಎಂಪಿ ಮೇಯರ್ ಸಂಪತ್ ರಾಜ್ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಪೊಲೀಸರು ಸ್ಥಳಕ್ಕಾಗಮಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಹೆಚ್ಚಿನ ವಿವರ ನಿರೀಕ್ಷಿಸಲಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
MUST WATCH
ಹೊಸ ಸೇರ್ಪಡೆ
ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ