ಪ್ರಣಾಳಿಕೆಯ ಯೋಜನೆಗಳನ್ನು ಜಾರಿಗೆ ತರಲು ಕಷ್ಟವಾಗಿದೆ: ಗೃಹ ಸಚಿವ ಜಿ.ಪರಮೇಶ್ವರ್
Team Udayavani, Jun 17, 2023, 12:42 PM IST
ಬೆಂಗಳೂರು: ನಾವು ಚುನಾವಣೆವಗೂ ಮೊದಲು ಪ್ರಣಾಳಿಕೆಯನ್ನು ಘೋಷಿಸಿದ್ದೆವು. ಪಕ್ಷದ ಪ್ರಣಾಳಿಕೆಯಲ್ಲಿ ಹಲವು ಯೋಜನೆಗಳನ್ನು ಪ್ರಸ್ತಾಪಿಸಿದ್ದೆವು. ಆದರೆ ಈಗ ಯೋಜನೆಗಳ ಜಾರಿ ಕಷ್ಟವಾಗಿದೆ ಎಂದು ಗೃಹ ಸಚಿವ ಜಿ.ಪರಮೇಶ್ವರ್ ಹೇಳಿದರು.
ಕನ್ನಡ ಸಾಹಿತ್ಯ ಪರಿಷತ್ ನಲ್ಲಿ ನಡೆದ ಚಾವುಂಡರಾಯ ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಏನೇ ಆದರೂ ನುಡಿದಂತೆ ನಡೆದುಕೊಳ್ಳುತ್ತೇವೆ. ಗ್ಯಾರಂಟಿಗಳನ್ನು ಜಾರಿಗೊಳಿಸಿಯೇ ತೀರುತ್ತೇವೆ. ಈ ವಿಚಾರದಲ್ಲಿ ಪಲಾಯನ ಮಾಡುವುದಿಲ್ಲ ಎಂದರು.
ಇದನ್ನೂ ಓದಿ:‘ಧೋನಿ ನನ್ನ ಅನುಮತಿ ಕೇಳಿದ್ದರು…’ CSK ತಂಡದಿಂದ ಹೊರಗುಳಿದ ಬಗ್ಗೆ ಗುಟ್ಟು ಬಿಚ್ಚಿಟ್ಟ ರೈನಾ
ನೂತನ ಸಚಿವರಿಗೆ ಪಾಠ: ಕಾರ್ಯಕ್ರಮಕ್ಕೆ ತಡವಾಗಿ ಆಗಮಿಸಿದ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವ ಶಿವರಾಜ್ ತಂಗಡಗಿ ಅವರಿಗೆ ಪರಮೇಶ್ವರ್ ಸಮಯದ ಪಾಠ ಮಾಡಿದರು.
“ಯಾಕಪ್ಪಾ ಇಷ್ಟು ತಡವಾಗಿ ಬರುತ್ತೀಯಾ? ಕಾರ್ಯಕ್ರಮಗಳಿಗೆ ಸರಿಯಾದ ಸಮಯಕ್ಕೆ ಬರಬೇಕು. ಇಲ್ಲದೇ ಹೋದರೆ ಜನರು ಸಚಿವರ ಬಗ್ಗೆ ಮಾತನ್ನಾಡಿಕೊಳ್ಳುತ್ತಾರೆ. ಸಚಿವರೇ ತಡವಾಗಿ ಬರುತ್ತಾರೆಂದು ಮಾತನ್ನಾಡುತ್ತಾರೆ” ಎಂದ ಹೇಳಿದರು. ಇದಕ್ಕೆ ಶಿವರಾಜ ತಂಗಡಗಿ ನಗುತ್ತಲೇ ತಲೆಯಾಡಿಸಿ ವೇದಿಕೆಯಲ್ಲಿ ಬಂದು ಕುಳಿತುಕೊಂಡರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ
Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ
Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್ ಹೇಳಿಕೆ
ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…
Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ವೇ ? ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ
MUST WATCH
ಹೊಸ ಸೇರ್ಪಡೆ
Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ
Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್ಗೆ 48 ಗಂಟೆ ಪ್ರಚಾರ ನಿಷೇಧ
Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ
Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್ ಹೇಳಿಕೆ
ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…