ಸಿದ್ದರಾಮಯ್ಯ ಭೇಟಿ ಮಾಡಿದ ಎ.ಮಂಜು ಕಾಂಗ್ರೆಸ್ ಸೇರ್ಪಡೆ ಸಾಧ್ಯತೆ
Team Udayavani, Jan 1, 2022, 6:20 AM IST
ಬೆಂಗಳೂರು:ಮಾಜಿ ಸಚಿವ ಎ.ಮಂಜು ಶುಕ್ರವಾರ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಚರ್ಚಿಸಿರುವುದು ಕುತೂಹಲ ಮೂಡಿಸಿದೆ.
ಕಳೆದ ಲೋಕಸಭೆ ಚುನಾವಣೆ ಸಂದರ್ಭದಲ್ಲಿ ಕಾಂಗ್ರೆಸ್ ಸೇರಿ ಬಿಜೆಪಿ ಸೇರಿದ್ದ ಎ.ಮಂಜು ಮತ್ತೆ ಕಾಂಗ್ರೆಸ್ ಸೇರ್ಪಡೆಗೆ ಒಲವು ತೋರಿದ್ದು, ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದ್ದಾರೆ ಎಂದು ಹೇಳಲಾಗಿದೆ.
ಎ.ಮಂಜು ಅವರ ಸೇರ್ಪಡೆಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಒಪ್ಪಿಗೆ ನೀಡಿದ್ದಾರೆ ಎಂದು ತಿಳಿದು ಬಂದಿದೆ. ಇತ್ತೀಚೆಗೆ ನಡೆದ ವಿಧಾನಪರಿಷತ್ ಚುನಾವಣೆಯಲ್ಲಿ ಎ.ಮಂಜು ಅವರ ಪುತ್ರ ಮಂಥರ್ಗೌಡ ಅವರಿಗೆ ಕೊಡಗು ಕ್ಷೇತ್ರದಿಂದ ಕಾಂಗ್ರೆಸ್ ಟಿಕೆಟ್ ನೀಡಲಾಗಿತ್ತು. ನಂತರ ಮಂಜು ಬಿಜೆಪಿ ಚಟುವಟಿಕೆಗಳಿಂದ ದೂರವೇ ಉಳಿದಿದ್ದರು.
ಇದನ್ನೂ ಓದಿ:ಮಹೀಂದ್ರಾ ಜೈಲೋ ವಾಹನವನ್ನು ಕಚ್ಚಿ ಎಳೆದ ಹುಲಿ- ವಿಡಿಯೋ ವೈರಲ್