Gruha Jyoti ಉಚಿತ ವಿದ್ಯುತ್ ಗೆ ಹಲವು ಷರತ್ತು; ಸೌಲಭ್ಯ ಪಡೆಯಲು ಅರ್ಜಿ ಸಲ್ಲಿಕೆ ಕಡ್ಡಾಯ


Team Udayavani, Jun 5, 2023, 6:22 PM IST

ಉಚಿತ ವಿದ್ಯುತ್ ಗೆ ಹಲವು ಷರತ್ತು; ಸೌಲಭ್ಯ ಪಡೆಯಲು ಅರ್ಜಿ ಸಲ್ಲಿಕೆ ಕಡ್ಡಾಯ

ಬೆಂಗಳೂರು: ನೂತನ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರವು ತನ್ನ ಗ್ಯಾರಂಟಿ ಯೋಜನೆಯ ಅಂಗವಾಗಿ ಉಚಿತ ವಿದ್ಯುತ್ ನೀಡುವ ‘ಗೃಹ ಜ್ಯೋತಿ’ ಯೋಜನೆಗೆ ಈಗಾಗಲೇ ಅನುಮೋದನೆ ನೀಡಿದೆ. ಇದೀಗ ಯೋಜನೆ ಸಂಬಂಧ ಷರತ್ತು ಮತ್ತು ನಿಬಂಧನೆಗಳ ಕುರಿತು ಆದೇಶ ಹೊರಡಿಸಿದೆ.

ಗೃಹ ಜ್ಯೋತಿ ಯೋಜನೆಯಡಿ ಸೌಲಭ್ಯ ಪಡೆಯಲು ಇಚ್ಛಿಸುವ ಗ್ರಾಹಕರು ಸೇವಾ ಸಿಂಧು ಪೋರ್ಟಲ್ ಮೂಲಕ ಅರ್ಜಿ ಸಲ್ಲಿಸಬೇಕು ಎಂದು ಸೂಚಿಸಲಾಗಿದೆ.

ಗೃಹ ಜ್ಯೋತಿ ಯೋಜನೆಯಡಿ ರಾಜ್ಯದ ಪ್ರತಿ ಮನೆಗೆ ಪ್ರತಿ ತಿಂಗಳಿಗೆ ಗರಿಷ್ಠ 200 ಯುನಿಟ್ ವರೆಗಿನ ಬಳಕೆಯ ಮಿತಿಯಲ್ಲಿ ಪ್ರತಿ ಗ್ರಾಹಕರ ಮಾಸಿಕ ಸರಾಸರಿ ಬಳಕೆಯ ಯುನಿಟ್ ಗಳ ಮೇಲೆ ಶೇ.10 ರಷ್ಟು ಹೆಚ್ಚಿನ ಬಳಕೆ ಮಿತಿಯನ್ನು ಅನುಮತಿಸಲಾಗಿದೆ.

ಇದನ್ನೂ ಓದಿ:ಮಹಿಳೆಯರ ಉಚಿತ ಪ್ರಯಾಣಕ್ಕೆ ‘Shakti Smart Card’ ಕಡ್ಡಾಯ: ಮಾರ್ಗಸೂಚಿ ಪ್ರಕಟಿಸಿದ ಸರ್ಕಾರ

ಈ ಯೋಜನೆಯು ಜುಲೈ ತಿಂಗಳ ವಿದ್ಯುತ್ ಬಳಕೆಗೆ ಆಗಸ್ಟ್ ತಿಂಗಳಿನಲ್ಲಿ ನೀಡುವ ಬಿಲ್ಲಿಗೆ ಅನ್ವಯವಾಗುತ್ತದೆ.

ನಿಯಮಗಳು

200 ಯುನಿಟ್ ಗಳ ಬಳಕೆಯನ್ನು ಮೀರಿದ ಗ್ರಾಹಕರು ಪೂರ್ಣ ವಿದ್ಯುತ್ ಬಿಲ್ಲನ್ನು  ಪಾವತಿಸಬೇಕು.

ಈ ಯೋಜನೆಯು ಗೃಹ ಬಳಕೆಯ ವಿದ್ಯುತ್ ಸಂಪರ್ಕಗಳಿಗೆ ಮಾತ್ರ ಅನ್ವಯವಾಗುತ್ತದೆ. ವಾಣಿಜ್ಯ ಉದ್ದೇಶಗಳಿಗೆ ವಿದ್ಯುತ್ ಬಳಸಿದ್ದಲ್ಲಿ ಅನ್ವಯವಾಗುವುದಿಲ್ಲ.

ಪ್ರತಿ ತಿಂಗಳ ಮೀಟರ್ ರೀಡಿಂಗ್ ಮಾಡಿದಾಗ ಒಟ್ಟು ವಿದ್ಯುತ್ ಬಳಕೆಯ ಪ್ರಮಾಣಕ್ಕೆ ಬಿಲ್ಲನ್ನು ನಮೂದಿಸಲಾಗುತ್ತದೆ.

ಬಳಕೆದಾರನ ಅರ್ಹ ಮೊತ್ತವನ್ನು ಬಿಲ್ ನಲ್ಲಿ ಕಡಿತಗೊಳಿಸಿ, ಉಳಿದ ಮೊತ್ತವನ್ನು ಗ್ರಾಹಕರಿಗೆ net bill ನೀಡಲಾಗುತ್ತದೆ ಹಾಗೂ ಗ್ರಾಹಕರು ಈ ಬಿಲ್ ಪಾವತಿಸಬೇಕು.

ಅರ್ಹ ಯುನಿಟ್/ ಮೊತ್ತಕ್ಕಿಂತ ಒಳಗೆ ಬಿಲ್ ಆಗಿದ್ದಲ್ಲಿ ಅಂತಹ ಗ್ರಾಹಕರಿಗೆ ಶೂನ್ಯ ಬಿಲ್ ನೀಡಲಾಗುತ್ತದೆ.

ಯೋಜನೆಯಡಿ ಸೌಲಭ್ಯ ಪಡೆಯಲು ಇಚ್ಛಿಸುವ ಗ್ರಾಹಕರು ಸೇವಾ ಸಿಂಧು ಪೋರ್ಟಲ್ ಮೂಲಕ ಅರ್ಜಿ ಸಲ್ಲಿಸಬೇಕು.

ಪ್ರತಿ ಫಲಾನುಭವಿಯು ತನ್ನ customer ID/ Account ID ಕಡ್ಡಾಯವಾಗಿ ಆಧಾರ್ ಗೆ ಜೋಡಣೆ ಮಾಡಬೇಕು.

ಪ್ರಸ್ತುತ ಜಾರಿಯಲ್ಲಿರುವ ಭಾಗ್ಯ ಜ್ಯೋತಿ/ ಕುಟೀರ ಜ್ಯೋತಿ ಯೋಜನೆ ಮತ್ತು ಅಮೃತ ಜ್ಯೋತಿ ಯೋಜನೆಯ ಫಲಾನುಭವಿಗಳಿಗೂ ಈ ಯೋಜನೆಯಲ್ಲಿ ಸೇರಬಹುದು.

2023ರ ಜೂನ್ 20 ಅಂತ್ಯಕ್ಕೆ (ಜೂನ್ ನಲ್ಲಿ ಬಳಸಿದ ವಿದ್ಯುತ್ ಗೆ ಜುಲೈನಲ್ಲಿ ನೀಡುವ ವಿದ್ಯುತ್ ಬಿಲ್ ಸೇರಿದಂತೆ) ಬಾಕಿ ಇರುವ ವಿದ್ಯುತ್ ಶುಲ್ಕವನ್ನು ಮೂರು ತಿಂಗಳೊಳಗೆ ಪಾವತಿಸಬೇಕು. ಅವಧಿಯೊಳಗೆ ಪಾವತಿ ಮಾಡದಿದ್ದಲ್ಲಿ ಅಂತವರ ವಿದ್ಯುತ್ ಸಂಪರ್ಕ ಕಡಿತ ಮಾಡಲಾಗುತ್ತದೆ.

ಗೃಹ ವಿದ್ಯುತ್ ಗ್ರಾಹಕರ ಸ್ಥಾವರಗಳಿಗೆ ಮಾಪಕ ಅಳವಡಿಸುವುದು  ಹಾಗೂ ಮಾಪಕ ಓದುವುದು ಕಡ್ಡಾಯವಾಗಿರುತ್ತದೆ.

ಗೃಹ ಬಳಕೆಯ ಹೆಸರಿನಲ್ಲಿ ಒಂದಕ್ಕಿಂತ ಹೆಚ್ಚು ಮೀಟರ್ ಇದ್ದಲ್ಲಿ ಒಂದು ಸ್ಥಾವರಕ್ಕೆ ಮಾತ್ರ ಈ ಯೋಜನೆಯಡಿ ಸೌಲಭ್ಯಕ್ಕೆ ಅರ್ಹರಾಗಿರುತ್ತಾರೆ.

ಟಾಪ್ ನ್ಯೂಸ್

1-saasd

Tamil Nadu : ನೀಲಗಿರಿಯಲ್ಲಿ ಪ್ರವಾಸಿಗರ ಬಸ್ ಕಮರಿಗೆ ಬಿದ್ದು 8 ಮಂದಿ ಮೃತ್ಯು

1-sasa

Asian Games ಅಭಿಯಾನ ದುರಂತದಲ್ಲಿ ಕೊನೆ; ಜಾರಿ ಬಿದ್ದ ಮೀರಾಬಾಯಿ ಚಾನು

accident

Holehonnuru ; ಭೀಕರ ರಸ್ತೆ ಅಪಘಾತದಲ್ಲಿ ಮೂವರ ದುರ್ಮರಣ

1-asdasd

Asian Games ಪುರುಷರ ಹಾಕಿ: 10-2ರಿಂದ ಪಾಕಿಸ್ಥಾನವನ್ನು ಮಣಿಸಿದ ಭಾರತ

1-dadas

Kushtagi : ವೈಯಕ್ತಿಕ ಸಿಟ್ಟಿಗೆ ಸ್ನೇಹಿತನ ಹತ್ಯೆಗೈದ ಇಬ್ಬರ ಬಂಧನ

Shamanuru Shivashankarappa

Lingayat ಅಧಿಕಾರಿಗಳಿಗೆ ಅನ್ಯಾಯ ಹೇಳಿಕೆಗೆ ಬದ್ಧ: ಶಾಮನೂರು ಪುನರುಚ್ಚಾರ

1-sasa-sa

Hirekerur ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿ ಲೋಕಾಯುಕ್ತ ಬಲೆಗೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

WHATSAPP

WhatsApp, Telegram ಆ್ಯಪ್‌ ವಂಚನೆ ಜಾಲ ಬಯಲಿಗೆ

pregnancy

Health: ನೂತನ ಗರ್ಭನಿರೋಧಕ ವಿಧಾನ ಅನುಷ್ಠಾನ

SAVADI

BSY ಜೈಲಿಗೆ ಹೋಗಲು ಎಚ್ಡಿಕೆ ಕಾರಣ: ಸವದಿ

sthiraasthi

Karnataka: ಸ್ಥಿರಾಸ್ತಿಗಳ ಮಾರ್ಗಸೂಚಿ ದರ ಪರಿಷ್ಕರಣೆ

accident

Holehonnuru ; ಭೀಕರ ರಸ್ತೆ ಅಪಘಾತದಲ್ಲಿ ಮೂವರ ದುರ್ಮರಣ

MUST WATCH

udayavani youtube

ಸಾಗರದಾಳದಲ್ಲಿ ಕಣ್ಮರೆಯಾಗಿದ್ದ 8 ನೇ ಖಂಡ ಪತ್ತೆ

udayavani youtube

ಕುದುಕುಳ್ಳಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ

udayavani youtube

ಕ್ಷಮೆ ಕೇಳಿದ ಶಿವಣ್ಣ

udayavani youtube

ಅಕ್ವಾಟಿಕ್ಸ್ ಗ್ಯಾಲರಿ ನೋಡಿ ಕಣ್ತುಂಬಿಕೊಂಡ ಪ್ರಧಾನಿ ಮೋದಿ

udayavani youtube

ಬೆಂಗಳೂರಿನಲ್ಲಿ ನಡೆಯಿತು ತುಳುನಾಡ ಸಂಸ್ಕೃತಿ ಬಿಂಬಿಸುವ ಅಷ್ಟಮಿದ ಐಸಿರ

ಹೊಸ ಸೇರ್ಪಡೆ

power lines

Uppur: ವಿದ್ಯುತ್‌ ತಂತಿ ಸ್ಪರ್ಶಿಸಿ ಮೀನುಗಾರ ಸಾವು

arrest

Theft: ಇಬ್ಬರ ಸೆರೆ; ಚಿನ್ನಾಭರಣ ವಶ

taalamaddale

Yakshagana: ಅರ್ಥಗಾರಿಕೆ ಮತ್ತು ಸಮಕಾಲೀನತೆ

ASIAN GAMES LOGO

Asian Games: ಹಿರಿಯ ಅನುಭವಿಗಳಿಗೆ ಮಿಂಚಲು ಕೊನೆಯ ಅವಕಾಶ

MOTHER CHILD

Article: ಮರಳಿ ಸಿಗದ ಅಮ್ಮನೂ, ಮಮತಾಮಯಿ ಕಂದನೂ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.