ವಯನಾಡಿನಲ್ಲಿ ನಕ್ಸಲ್ ಹತ್ಯೆ; ಚಾಮರಾಜನಗರದಲ್ಲಿ ಕಟ್ಟೆಚ್ಚರ
Team Udayavani, Mar 7, 2019, 2:44 PM IST
ಚಾಮರಾಜನಗರ : ಕೇರಳದ ವಯನಾಡಿನ ಖಾಸಗಿ ರೆಸಾರ್ಟ್ವೊಂದರಲ್ಲಿ ಬುಧವಾರ ರಾತ್ರಿ ಗುಂಡಿನ ಕಾಳಗದಲ್ಲಿ ನಕ್ಸಲನೊಬ್ಬನನ್ನು ಎನ್ಕೌಂಟರ್ ಮಾಡಲಾಗಿದ್ದು, ಆ ಹಿನ್ನಲೆಯಲ್ಲಿ ಗಡಿ ಪ್ರದೇಶವಾದ ಗುಂಡ್ಲುಪೇಟೆಯಲ್ಲಿ ಪೊಲೀಸ್ ಕಟ್ಟೆಚ್ಚರ ವಹಿಸಲಾಗಿದೆ.
ಚಾಮರಾಜನಗರದ ಗಡಿ ಪ್ರದೇಶ ಮೂಲೆಹೊಳೆ ಚೆಕ್ ಪೋಸ್ಟ್ನಲ್ಲಿ ನಕ್ಸಲ್ ನಿಗ್ರಹ ಪಡೆ ಮತ್ತು ಪೊಲೀಸರು ಕಟ್ಟೆಚ್ಚರ ವಹಿಸಿದ್ದು, ವಾಹನಗಳ ತಪಾಸಣೆಯನ್ನು ನಡೆಸುತ್ತಿದ್ದಾರೆ.
ವೈಥಿರಿ ಎಂಬಲ್ಲಿ ರೆಸಾರ್ಟ್ಗೆ ಆಗಮಿಸಿದ ಐವರು ನಕ್ಸಲರು ಸಿಬಂದಿಗಳೊಂದಿಗೆ ಆಹಾರ ನೀಡುವಂತೆ ಜಗಳಕ್ಕಿಳಿದಿದ್ದಾರೆ. ಆ ಬಳಿಕ ಸ್ಥಳಕ್ಕಾಗಮಿಸಿದ ನಕ್ಸಲ್ ನಿಗ್ರಹ ಪಡೆಯ ಪೊಲೀಸರು ಗುಂಡು ಹಾರಿಸಿ ಓರ್ವನನ್ನು ಹತ್ಯೆಗೈದಿದ್ದಾರೆ.
ಹತ್ಯೆಗೀಡಾದ ನಕ್ಸಲ್ ಸಿ.ಪಿ.ಜಲೀಲ್ ಎನ್ನುವವನಾಗಿದ್ದು, ಬಂಧನಕ್ಕೊಳಗಾಗಿರುವ ಸಿ.ಪಿ.ಇಸ್ಮಾಯಿಲ್ ಸಹೋದರ. 2016ರಲ್ಲಿ ನಕ್ಸಲ್ ನಾಯಕ ಮುರಳಿ ಕನ್ನಂಬಳ್ಳಿ ಯೊಂದಿಗೆ ಇಸ್ಮಾಯಿಲ್ನನ್ನು ಪುಣೆಯಲ್ಲಿ ಬಂಧಿಸಲಾಗಿತ್ತು.ಇಸ್ಮಾಯಿಲ್ ಇನ್ನೂ ನ್ಯಾಯಾಂಗ ಬಂಧನದಲ್ಲಿದ್ದಾನೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Election; ಡಿ.ಕೆ.ಶಿವಕುಮಾರ್, ಪ್ರಿಯಾಂಕ್ ಖರ್ಗೆ ವಿರುದ್ಧ ಬಿಜೆಪಿ ದೂರು
Kalaburagi; ಕಾಂಗ್ರೆಸ್ ಸರಕಾರ ರೈತರಿಗೆ ಭಿಕ್ಷುಕರಂತೆ 2ಸಾವಿರ ಪರಿಹಾರ ನೀಡಿದೆ: ವಿಜಯೇಂದ್ರ
LokSabha Election; ಕಾಂಗ್ರೆಸ್ ಪರ ನಟ ದರ್ಶನ್ ಪ್ರಚಾರಕ್ಕೆ ಕುಮಾರಸ್ವಾಮಿ ಪ್ರತಿಕ್ರಿಯೆ
Nomination: ಸರಳ ರೀತಿಯಲ್ಲಿ ನಾಮಪತ್ರ ಸಲ್ಲಿಸಿದ ಪ್ರಿಯಂಕಾ ಜಾರಕಿಹೊಳಿ
Election Campaign: ಕಾಂಗ್ರೆಸ್ನಲ್ಲಿಲ್ಲ ಮೋದಿಗೆ ಸಮಾನ ನಾಯಕತ್ವ: ಗಾಯಿತ್ರಿ ಸಿದ್ದೇಶ್ವರ
MUST WATCH
ಹೊಸ ಸೇರ್ಪಡೆ
Beltangady: ಮನೆ ಮಾಲಕಿ ಮೇಲೆ ಸಾಕು ನಾಯಿ ದಾಳಿ
ಸೂಪರ್ ಸ್ಟಾರ್ ಮೋಹನ್ ಲಾಲ್ ಭೇಟಿಯಾದ ರಿಷಬ್: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!
Cricket; ಪಾಕ್ ವಿರುದ್ಧದ ಟೆಸ್ಟ್ ಸರಣಿ ಆಡಲು ರೋಹಿತ್ ಇಂಗಿತ; ಕ್ಯಾಪ್ಟನ್ ಹೇಳಿದ್ದೇನು?
Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!
Election; ಡಿ.ಕೆ.ಶಿವಕುಮಾರ್, ಪ್ರಿಯಾಂಕ್ ಖರ್ಗೆ ವಿರುದ್ಧ ಬಿಜೆಪಿ ದೂರು