
ಮಾ.8: ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಗಳ ಸಭೆ
Team Udayavani, Mar 2, 2023, 6:43 AM IST

ಬೆಂಗಳೂರು: ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಗಳ ಸಂಖ್ಯೆ ಹೆಚ್ಚಿರುವ ಹಾಗೂ ತೀವ್ರ ಗೊಂದಲದಲ್ಲಿರುವ 75 ರಿಂದ 80 ಕ್ಷೇತ್ರಗಳ ಆಕಾಂಕ್ಷಿಗಳು ಹಾಗೂ ಸ್ಥಳೀಯ ಮುಖಂಡರ ಸಭೆ ಮಾ. 8ಕ್ಕೆ ನಡೆಯಲಿದೆ.
ಬೆಂಗಳೂರು ಹೊರವಲಯದ ರೆಸಾರ್ಟೊಂದರಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ವಿಪಕ್ಷ ನಾಯಕ ಸಿದ್ದರಾಮಯ್ಯ ಹಾಗೂ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸುಜೇìವಾಲ ಅವರ ಸಮ್ಮುಖದಲ್ಲಿ ಸಭೆ ನಡೆಯಲಿದೆ.
ತೀವ್ರ ಕಗ್ಗಂಟಾಗಿರುವ ಕ್ಷೇತ್ರಗಳ ಟಿಕೆಟ್ ಆಕಾಂಕ್ಷಿಗಳನ್ನು ಸಭೆಗಳನ್ನು ಆಹ್ವಾನಿಸಲಾಗಿದೆ. ಕೆಲವು ಕ್ಷೇತ್ರಗಳಲ್ಲಿ ಎರಡರಿಂದ ಮೂವರು ಪ್ರಬಲ ಆಕಾಂಕ್ಷಿಗಳಿರುವುದು ಕಾಂಗ್ರೆಸ್ ನಾಯಕರಿಗೆ ಟಿಕೆಟ್ ಆಯ್ಕೆ ಕಷ್ಟವಾಗಿದೆ. ಹಲವು ಕ್ಷೇತ್ರಗಳಲ್ಲಿ ಟಿಕೆಟ್ ಆಕಾಂಕ್ಷಿಗಳು ಪ್ರತ್ಯೇಕವಾಗಿ ಪ್ರಚಾರ ನಿರತವಾಗಿರುವುದು ಸ್ಥಳೀಯವಾಗಿ ಗೊಂದಲ ಮೂಡಿಸಿದೆ. ಹೀಗಾಗಿ ಗೊಂದಲ ಇತ್ಯರ್ಥಪಡಿಸಿ ಒಗ್ಗಟ್ಟಿನ ಮಂತ್ರ ಪಠಿಸಲು ಸಭೆ ಕರೆಯಲಾಗಿದೆ.
ಈಗಾಗಲೇ 130ರಿಂದ 150 ಕ್ಷೇತ್ರಗಳ ಅಭ್ಯರ್ಥಿಗಳ ಪಟ್ಟಿಯನ್ನು ಅಂತಿಮಗೊಳಿಸಿರುವ ಸ್ಕ್ರೀನಿಂಗ್ ಕಮಿಟಿಯು ಉಳಿದ ಕ್ಷೇತ್ರಗಳ ಅಭ್ಯರ್ಥಿಗಳ ಆಯ್ಕೆಯನ್ನು 2ನೇ ಹಂತದಲ್ಲಿ ಪೂರ್ಣಗೊಳಿಸಲು ತೀರ್ಮಾನಿಸಿದೆ. ಅದಕ್ಕೂ ಮುನ್ನ ಟಿಕೆಟ್ ಆಕಾಂಕ್ಷಿಗಳ ನಡುವಿನ ಗೊಂದಲ, ಮನಸ್ತಾಪವನ್ನು ಬಗೆಹರಿಸಲಾಗುವುದು.
ಸಿಇಸಿ ರಚನೆ ನಿರೀಕ್ಷೆ
ಕೆಲವೇ ದಿನಗಳಲ್ಲಿ ಕೇಂದ್ರ ಚುನಾವಣ ಸಮಿತಿ ರಚನೆಯಾಗುವ ನಿರೀಕ್ಷೆ ಇದೆ. ಬಹುತೇಕ ಈ ವಾರದಲ್ಲಿ ಈ ಸಮಿತಿ ರಚನೆಯಾದರೆ ಅನಂತರ ಸಭೆಯ ದಿನಾಂಕ ನಿಗದಿಯಾಗಲಿದೆ. ಈಗಾಗಲೇ ಸ್ಕ್ರೀನಿಂಗ್ ಕಮಿಟಿ ಶಿಫಾರಸು ಮಾಡಿರುವ ಅಭ್ಯರ್ಥಿಗಳ ಪಟ್ಟಿ ಬಗ್ಗೆ ಈ ಸಮಿತಿ ಚರ್ಚಿಸಿ ಅಂತಿಮವಾಗಿ ಆಯ್ಕೆ ಪಟ್ಟಿ ಪ್ರಕಟಿಸಲಿದೆ.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Karnataka Bandh: ಕಾವೇರಿಗಾಗಿ ಜನಾಕ್ರೋಶ, ಹಲವೆಡೆ ಪ್ರತಿಭಟನೆ; ಬಿಗಿ ಪೊಲೀಸ್ ಭದ್ರತೆ

Congress ಜಗದೀಶ್ ಶೆಟ್ಟರ್ಗೆ ಆಪರೇಷನ್ ಹಸ್ತದ ಹೊಣೆ

Tomorrow ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ದಿಲ್ಲಿಗೆ ?

JDS ಫ್ಯಾಮಿಲಿ ಟ್ರಸ್ಟ್; ಸಿಎಂ ಇಬ್ರಾಹಿಂ “ಭೂಗತ’: ಲಕ್ಷ್ಮಣ್ ವ್ಯಂಗ್ಯ

Cauvery issueತಮಿಳುನಾಡು ಸಿಎಂ ಭೇಟಿಗೆ 48 ತಾಸು ಕಾದು ಬರಿಗೈಯಲ್ಲಿ ಮರಳಿದ ಲೆಹರ್ ಸಿಂಗ್!
MUST WATCH
ಹೊಸ ಸೇರ್ಪಡೆ

Karnataka Bandh; ‘ನೀರು ನಿಲ್ಲಿಸದಿದ್ದರೆ ಡ್ಯಾಂ ಒಡೆಯುತ್ತೇವೆ’; ರಾಮನಗರದಲ್ಲಿ ಪ್ರತಿಭಟನೆ

Karnataka Bandh; ಚಿಕ್ಕಮಗಳೂರಿನಲ್ಲಿ ವ್ಯಾಪಕ ಬೆಂಬಲ; ಪ್ರತಿಕೃತಿ ದಹಿಸಿ ಪ್ರತಿಭಟನೆ

Canada; ಭಾರತದೊಂದಿಗೆ ಸ್ನೇಹಕ್ಕೆ ಸದಾ ಬದ್ಧ: ಬಿಕ್ಕಟ್ಟಿನ ನಡುವೆ ಟ್ರುಡೊ

Baana Daariyalli movie review; ಗಣೇಶ್- ಗುಬ್ಬಿ ಚಿತ್ರ ಹೇಗಿದೆ?

Asian Games: ವಿಶ್ವದಾಖಲೆಯೊಂದಿಗೆ ಮತ್ತೊಂದು ಚಿನ್ನಕ್ಕೆ ಗುರಿಯಿಟ್ಟ ಭಾರತದ ಶೂಟಿಂಗ್ ತಂಡ