ಕೇಂದ್ರದ ಜೆಮ್‌ ಮೂಲಕ ಮಹಿಳಾ ಉತ್ಪಾದಕರಿಗೆ ಮಾರುಕಟ್ಟೆ

ಮಹಿಳಾ ಮೋರ್ಚಾದಿಂದ ಪ್ರತಿ ವಿಧಾನಸಭಾ ಕ್ಷೇತ್ರದಲ್ಲಿ ಕನಿಷ್ಠ 1 ಸಾವಿರ ಉತ್ಪಾದಕರ ನೋಂದಣಿ ನಿರ್ಧಾರ

Team Udayavani, Jan 6, 2022, 8:00 AM IST

ಕೇಂದ್ರದ ಜೆಮ್‌ ಮೂಲಕ ಮಹಿಳಾ ಉತ್ಪಾದಕರಿಗೆ ಮಾರುಕಟ್ಟೆ

ಬೆಂಗಳೂರು: ಮಹಿಳೆಯರು ಮನೆಯಲ್ಲಿ ಕುಳಿತು ತಯಾರಿಸಿರುವ ಉತ್ಪನ್ನಗಳನ್ನು ನೇರವಾಗಿಯೇ ಜೆಮ್‌ ಪೋರ್ಟಲ್‌ ಮೂಲಕ ಕೇಂದ್ರ ಸರಕಾರವೇ ಖರೀದಿಸಿ ಮಹಿಳೆಯರಿಗೆ ಮಾರುಕಟ್ಟೆ ಒದಗಿಸುತ್ತಿದ್ದು, ರಾಜ್ಯದಲ್ಲಿ ಪ್ರತಿ ವಿಧಾನಸಭಾ ಕ್ಷೇತ್ರದಲ್ಲಿ ಕನಿಷ್ಠ ಒಂದು ಸಾವಿರ ಮಹಿಳಾ ಉತ್ಪಾದಕರನ್ನು ಜೆಮ್‌ ( ಗೌರ್ನಮೆಂಟ್‌ ಇ ಮಾರ್ಕೆಟಿಂಗ್‌) ಗೆ ಸೇರಿಸಲು ತೀರ್ಮಾನಿಸಿದೆ.

ಕೇಂದ್ರ ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆಯ ಮೂಲಕ ಈ ಯೋಜನೆ ಜಾರಿಗೆ ತರಲಾಗಿದ್ದು, ಮಹಿಳೆಯರು ಮನೆಯಲ್ಲಿಯೇ ಕುಳಿತು ತಯಾರಿಸುವ ಕರ ಕುಶಲ ವಸ್ತುಗಳು, ಗಾರ್ಮೆಂಟ್ಸ್‌, ಆಹಾರ ಪದಾರ್ಥಗಳು, ಸ್ಟೇಶನರಿ ವಸ್ತುಗಳು ಸಹಿತ ಮಹಿಳಾ ಸ್ವ ಸಹಾಯ ಗುಂಪುಗಳು, ಸ್ವಯಂ ಸೇವಾ ಸಂಸ್ಥೆಗಳು ಹಾಗೂ ಮಹಿಳೆಯರು ವೈಯಕ್ತಿಕವಾಗಿಯೂ ತಯಾರಿಸುವ ಉತ್ಪನ್ನಗಳನ್ನು ನೇರವಾಗಿ ಜೆಮ್‌ ಮೂಲಕ ಖರೀದಿಸಲಿದೆ.

ಕೇಂದ್ರ ಸರಕಾರ ಜಾರಿಗೆ ತಂದಿರುವ ಈ ಯೋಜನೆಯನ್ನು ಬಿಜೆಪಿ ಮಹಿಳಾ ಮೋರ್ಚಾ ಮೂಲಕ ಜನರಿಗೆ ಮಹಿಳೆಯರಿಗೆ ತಲುಪಿಸಿ, ಅವರನ್ನು ಈ ಯೋಜನೆ ವ್ಯಾಪ್ತಿಗೆ ತರಲು ಕೇಂದ್ರ ಮುಂದಾಗಿದೆ. ಈ ಯೋಜನೆ ಮೂಲಕ ಮಹಿಳೆಯರ ಸ್ವಯಂ ಉದ್ಯೋಗ ಪ್ರೋತ್ಸಾಹಿಸಿ ಅವರ ಉತ್ಪನ್ನಗಳಿಗೆ ಮಾರುಕಟ್ಟೆ ಒದಗಿಸಿಕೊಡಲು ಪ್ರಯತ್ನ ನಡೆಸಿದೆ.

ರಾಜ್ಯ ಮಹಿಳಾ ಮೋರ್ಚಾ ವತಿಯಿಂದ ಯೋಜನೆ ಅನುಷ್ಠಾನಕ್ಕಾಗಿ ರಾಜ್ಯ ಮಟ್ಟದಲ್ಲಿ ಕಾರ್ಯಾಗಾರ ಹಮ್ಮಿಕೊಳ್ಳಲಾಗಿದ್ದು, ಪ್ರತಿ ಜಿಲ್ಲೆಯಿಂದ ಇಬ್ಬರು ಮಹಿಳಾ ಮೋರ್ಚಾ ಕಾರ್ಯಕರ್ತರನ್ನು ಕರೆದು ಈ ಯೋಜನೆಯನ್ನು ಮಹಿಳಾ ಉತ್ಪಾದಕರಿಗೆ ತಲುಪಿಸುವ ಕುರಿತು ತರಬೇತಿ ನೀಡಲಾಗಿದೆ.

ಇದನ್ನೂ ಓದಿ:ಗ್ರಾಮೀಣಾಭಿವೃದ್ಧಿಯ ಸಂಕಲ್ಪ  ಸಾಕಾರವೇ ಗುರಿ

ಎರಡು ತಿಂಗಳ ಗುರಿ
ಈಗಾಗಲೇ ತರಬೇತಿ ಪಡೆದಿರುವ ಜಿಲ್ಲಾ ಮಟ್ಟದ ಕಾರ್ಯಕರ್ತರು ತಮ್ಮ ಜಿಲ್ಲೆಯಲ್ಲಿ ಪಕ್ಷದ ಮಹಿಳಾ ಕಾರ್ಯಕರ್ತರಿಗೆ ತರಬೇತಿ ನೀಡಿ, ಅವರು ಪ್ರತಿ ವಿಧಾನಸಭಾ ಕ್ಷೇತ್ರದಲ್ಲಿ ವಿವಿಧ ಉತ್ಪನ್ನ ತಯಾರಿಸುವ ಮಹಿಳೆಯರನ್ನು ಹುಡುಕಿ ಜೆಮ್‌ ಪೋರ್ಟಲ್‌ನಲ್ಲಿ ನೋಂದಣಿ ಮಾಡಿಸುವ ಗುರಿ ಹೊಂದಲಾಗಿದೆ.

ಕೇಂದ್ರದಿಂದ ನೇರ ಖರೀದಿ
ಮಹಿಳೆಯರು ಉತ್ಪನ್ನಗಳನ್ನು ಜೆಮ್‌ ಪೋರ್ಟಲ್‌ ಮೂಲಕ ಅಪ್‌ಲೋಡ್‌ ಮಾಡಿದ ಮೇಲೆ ಕೇಂದ್ರ ಸರಕಾರದ ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ ಮೂಲಕ ಉತ್ಪನ್ನಗಳ ಗುಣಮಟ್ಟ ಪರಿಶೀಲನೆ ನಡೆಸಿ, ಒಪ್ಪಿಗೆಯಾದರೆ ಕೇಂದ್ರ ಸರಕಾರವೇ ನೇರವಾಗಿ ಖರೀದಿಸುತ್ತದೆ. ಒಂದೇ ಬಗೆಯ ಉತ್ಪನ್ನಗಳನ್ನು ಹಲವರು ಮಾಡಿದ್ದರೆ, ಯಾರು ಕಡಿಮೆ ಬೆಲೆಗೆ ಕೋಟ್‌ ಮಾಡಿರುತ್ತಾರೊ ಅಂಥವರ ಉತ್ಪನ್ನವನ್ನು ಕೇಂದ್ರ ಖರೀದಿ ಮಾಡುತ್ತದೆ. ಪೋರ್ಟಲ್‌ ಮೂಲಕ ನಿರಂತರವಾಗಿ ಉತ್ಪನ್ನಗಳನ್ನು ಮಾರಾಟ ಮಾಡುವ ಮಹಿಳೆಯರು ಹಾಗೂ ಸ್ವಸಹಾಯ ಗುಂಪು ಮತ್ತು ಎನ್‌ಜಿಒಗಳಿಗೆ ಕೇಂದ್ರ ಸರ್ಕಾರವೇ ಕಡಿಮೆ ಬಡ್ಡಿ ದರದಲ್ಲಿ ಸಾಲವನ್ನೂ ನೀಡುತ್ತದೆ.

ಮಹಿಳೆಯರ ಸ್ವಯಂ ಉದ್ಯೋಗಕ್ಕೆ ಪ್ರೋತ್ಸಾಹ ನೀಡಿ, ಮಾರುಕಟ್ಟೆ ಒದಗಿಸಿ, ಕೇಂದ್ರದ ಯೋಜನೆಯನ್ನು ಜನರಿಗೆ ತಲುಪಿಸುವುದರ ಜೊತೆಗೆ ಮುಂದಿನ ಚುನಾವಣೆಗೆ ಗ್ರಾಮೀಣ ಮಟ್ಟದಲ್ಲಿ ಮಹಿಳಾ ಮತದಾರರನ್ನು ಭದ್ರಪಡಿಸಿಕೊಳ್ಳಲು ಬಿಜೆಪಿ ಪ್ರಯತ್ನ ನಡೆಸುತ್ತಿದೆ.

ಏನು ಮಾಡಬೇಕು ?
ಮಹಿಳೆಯರು ತಾವು ಮನೆಯಲ್ಲಿ ತಯಾರಿಸುವ ಆಹಾರ ಉತ್ಪನ್ನಗಳು, ಗಾರ್ಮೆಂಟ್ಸ್‌, ಕರ ಕುಶಲ ವಸ್ತುಗಳನ್ನು ಕೇಂದ್ರ ಸರಕಾರದ ಜೆಮ್‌ ಪೋರ್ಟಲ್‌ನಲ್ಲಿ ತಮ್ಮ ಹೆಸರು, ವಿಳಾಸದೊಂದಿಗೆ ಉತ್ಪನ್ನದ ಫೋಟೋಗಳನ್ನು ಅಪ್‌ಲೋಡ್‌ ಮಾಡಬೇಕು.

ಕೇಂದ್ರ ಸರ್ಕಾರದ ಜೆಮ್‌ ಪೋರ್ಟಲ್‌ ಮೂಲಕ ಮಹಿಳಾ ಉತ್ಪಾದಕರಿಗೆ ಮಾರುಕಟ್ಟೆ ಒದಗಿಸಲಾಗುತ್ತಿದೆ. ರಾಜ್ಯದಲ್ಲಿಯೂ ಪ್ರತಿ ವಿಧಾನಸಭಾ ಕ್ಷೇತ್ರದಲ್ಲಿ ಕನಿಷ್ಠ 1 ಸಾವಿರ ಉತ್ಪಾದಕರನ್ನು ಈ ಯೋಜನೆ ವ್ಯಾಪ್ತಿಗೆ ತರಲು ಪ್ರಯತ್ನ ನಡೆಸಲಾಗುತ್ತಿದೆ.
– ಗೀತಾ ವಿವೇಕಾನಂದ, ರಾಜ್ಯ ಬಿಜೆಪಿ ಮಹಿಳಾ ಮೋರ್ಚಾ ಅಧ್ಯಕ್ಷೆ.

ಟಾಪ್ ನ್ಯೂಸ್

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

4

IPL: ಆಟ ಮೆರೆದಾಟ; ಬ್ಯಾಟಿಂಗ್‌ ಅಷ್ಟೇ ಕ್ರಿಕೆಟ್ಟಾ?

2

Bengaluru: ಬಿಸಿಲು; ಹೋಟೆಲ್‌ ವ್ಯಾಪಾರ ಶೇ.30 ಕುಸಿತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗ್ಯಾರಂಟಿಗಳಿಂದ ಜನ ಭ್ರಷ್ಟರಾಗುತ್ತಾರೆ ಎನ್ನಲಾಗದು: ಹೈಕೋರ್ಟ್‌ ತೀರ್ಪು

ಗ್ಯಾರಂಟಿಗಳಿಂದ ಜನ ಭ್ರಷ್ಟರಾಗುತ್ತಾರೆ ಎನ್ನಲಾಗದು: ಹೈಕೋರ್ಟ್‌ ತೀರ್ಪು

ಅಂತೂ ಬಂತು ಬರ ಪರಿಹಾರ: ರಾಜ್ಯಕ್ಕೆ 3,454 ಕೋ.ರೂ. ಬರ ಪರಿಹಾರ ಬಿಡುಗಡೆ

ಅಂತೂ ಬಂತು ಬರ ಪರಿಹಾರ: ರಾಜ್ಯಕ್ಕೆ 3,454 ಕೋ.ರೂ. ಬರ ಪರಿಹಾರ ಬಿಡುಗಡೆ

Hassan ವೀಡಿಯೋ ಪ್ರಕರಣ ಎಸ್‌ಐಟಿ ತನಿಖೆಗೆ

Drought Relief: ಕಾಂಗ್ರೆಸ್‌-ಬಿಜೆಪಿ ಬರ ಪರಿಹಾರ ಜಟಾಪಟಿ

Drought Relief: ಕಾಂಗ್ರೆಸ್‌-ಬಿಜೆಪಿ ಬರ ಪರಿಹಾರ ಜಟಾಪಟಿ

Drought Relief: ಎಕ್ಸ್‌ (ಟ್ವಿಟರ್‌)ನಲ್ಲೂ ಕಾಂಗ್ರೆಸ್‌-ಬಿಜೆಪಿ ವಾಕ್ಸಮರ

Drought Relief: ಎಕ್ಸ್‌ (ಟ್ವಿಟರ್‌)ನಲ್ಲೂ ಕಾಂಗ್ರೆಸ್‌-ಬಿಜೆಪಿ ವಾಕ್ಸಮರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.