ಮಸೀದಿ ಅಧ್ಯಕ್ಷ ಅಯುಬ್ ಹತ್ಯೆ: ಮಸೀದಿ ಅಧ್ಯಕ್ಷ ಸ್ಥಾನ, ಆಸ್ತಿ ವಿಚಾರಕ್ಕೆ ಕೃತ್ಯ
Team Udayavani, Jul 15, 2022, 11:36 AM IST
ಬೆಂಗಳೂರು: ಸಹೋದರನ ಪುತ್ರನಿಂದಲೇ ಚಾಕು ಇರಿತಕ್ಕೊಳಗಾದ ಮಾಜಿ ಕಾರ್ಪೋರೇಟರ್ ಪತಿ ಅಯೂಬ್ ಖಾನ್ ಚಿಕಿತ್ಸೆ ಫಲಕಾರಿಯಾಗದೆ ಗುರುವಾರ ಮೃತಪಟ್ಟಿದ್ದಾರೆ.
ಈ ಸಂಬಂಧ ಅಯುಬ್ ಖಾನ್ ಸಹೋದರ(ಅಣ್ಣ) ಪ್ಯಾರುಖಾನ್ ಪುತ್ರ ಮತ್ತಿನ್ ಖಾನ್ (25) ಎಂಬಾತನನ್ನು ಬಂಧಿಸಲಾಗಿದೆ.
ಅಯುಬ್ ಖಾನ್ ಪತ್ನಿ ನಾಜಿಮಾ ಖಾನಂ ಈ ಹಿಂದೆ ಬಿಬಿಎಂಪಿ ಸದಸ್ಯರಾಗಿದ್ದರು. ಜತೆಗೆ ಅಯುಬ್ ಖಾನ್ ಟಿಪ್ಪು ನಗರದ ಖುದಾದತ್ ಮಸೀದಿಗೆ 15 ವರ್ಷಗಳಿಂದ ಅಧ್ಯಕ್ಷರಾಗಿದ್ದು, ಮುಂದಿನ ವರ್ಷ ಅವರ ಪುತ್ರ ಸಿದ್ದಿಕ್ ಖಾನ್ನನ್ನು ಮುಖ್ಯಸ್ಥನನ್ನಾಗಿ ಮಾಡಲು ಸಿದ್ಧತೆ ನಡೆಸಿದ್ದರು. ಈ ವಿಚಾರ ತಿಳಿದ ಮತ್ತಿನ್ ಖಾನ್, 6 ತಿಂಗಳ ಹಿಂದೆ ತನ್ನನ್ನು ಮಸೀದಿ ಮುಖ್ಯಸ್ಥನನ್ನಾಗಿ ಮಾಡುವಂತೆ ಚಾಕು ಹಿಡಿದು ಗಲಾಟೆ ಮಾಡಿದ್ದ. ಆದರೆ, ಯಾವುದೇ ದೂರು ನೀಡಿರಲಿಲ್ಲ. ಈ ಮಧ್ಯೆ ಬುಧವಾರ ರಾತ್ರಿ 8 ಗಂಟೆ ಸುಮಾರಿಗೆ ಆರೋಪಿ ಮನೆ ಬಳಿ ಬಂದು ಗಲಾಟೆ ತೆಗೆದು ಅಯುಬ್ ಖಾನ್ನ ಹೊಟ್ಟೆಗೆ ಇರಿದಿದ್ದಾನೆ. ಈ ಸಂಬಂಧ ಗಂಭೀರವಾಗಿ ಗಾಯಗೊಂಡಿದ್ದ ಅಯುಬ್ ಖಾನ್ನನ್ನು ಆಸ್ಪ ತ್ರೆಗೆ ಕರೆದೊಯ್ಯಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಗುರುವಾರ ಮೃತಪಟ್ಟಿದ್ದಾರೆ.
ಇದನ್ನೂ ಓದಿ:ಚಾಲಕನ ಬಳಿ ಹಣವಿಲ್ಲವೆಂದು ವಾಹನ ಸುಟ್ಟು ಹಾಕಿ ವಿಕೃತಿ ಮೆರದ ಪುಂಡರು
ಆರೋಪಿ ಮತ್ತಿನ್ ಖಾನ್ ನನ್ನು ಬಂಧಿಸಲಾಗಿದೆ. ಪ್ರಾಥಮಿಕ ವಿಚಾರಣೆಯಲ್ಲಿ ಮಸೀದಿ ಅಧ್ಯಕ್ಷ ಸ್ಥಾನ ಮತ್ತು ಆಸ್ತಿ ವಿಚಾರಕ್ಕೆ ಕೃತ್ಯ ನಡೆದಿದೆ ಎಂದು ಪೊಲೀಸರು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election: ‘ಬಿವೈಆರ್ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’
ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ
Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ
Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್ಪಿ
Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ
MUST WATCH
ಹೊಸ ಸೇರ್ಪಡೆ
Lok Sabha Election: ‘ಬಿವೈಆರ್ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’
ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ
Kushtagi: ನಿರೀಕ್ಷಿತ ಫಲಿತಾಂಶ ಬಾರದ ಹಿನ್ನೆಲೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ
Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು
Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್