ಮಾಸ್ಕ್ ನಿರ್ಲಕ್ಷ್ಯ  ಸಾಬೀತು; ಶೇ.35ರಷ್ಟು ಜನರಿಂದಷ್ಟೇ ಮಾಸ್ಕ್ ಧಾರಣೆ

ಬೆಂಗಳೂರು, ಮೈಸೂರು ಅತ್ಯಂತ ಕಳಪೆ

Team Udayavani, Jan 24, 2022, 7:05 AM IST

ಮಾಸ್ಕ್ ನಿರ್ಲಕ್ಷ್ಯ  ಸಾಬೀತು; ಶೇ.35ರಷ್ಟು ಜನರಿಂದಷ್ಟೇ ಮಾಸ್ಕ್ ಧಾರಣೆ

ಮಾಸ್ಕ್ ಧಾರಣೆ ಬಗ್ಗೆ ಆಯ್ದ ಕಾಲೇಜುಗಳ ವಿದ್ಯಾರ್ಥಿಗಳ ಸಹಯೋಗದೊಂದಿಗೆ “ಉದಯವಾಣಿ’ ವಿವಿಧ ಮಹಾನಗರಗಳಲ್ಲಿ ಕೈಗೊಂಡ ಮೆಗಾ ಸರ್ವೆಯಲ್ಲಿ ಹಲವು ಆತಂಕಕಾರಿ ಮಾಹಿತಿ ಹೊರಬಿದ್ದಿದ್ದು, ಕರಾವಳಿ ಸುದ್ದಿ ಸಮಾಧಾನ ತಂದಿದೆ.

ಬೆಂಗಳೂರು: ಕೊರೊನಾ ವಿರುದ್ಧ ಹೋರಾಡಲು ಮಾಸ್ಕ್ ಬ್ರಹ್ಮಾಸ್ತ್ರ ಎಂದು ಜಗತ್ತಿನ ತಜ್ಞರು ಮತ್ತೆ ಮತ್ತೆ ಸಾರುತ್ತಿ ದ್ದರೂ ರಾಜ್ಯದಲ್ಲಿ ನಿರ್ಲಕ್ಷ್ಯ ಇರುವುದು “ಉದಯವಾಣಿ’ ಕೈಗೊಂಡ ಸಹಾ ಸಮೀಕ್ಷೆಯಲ್ಲಿ ಬಹಿರಂಗವಾಗಿದೆ. ಮಾಸ್ಕ್  ಧಾರಣೆ ಯಲ್ಲಿ ಕರುನಾಡು ಜಸ್ಟ್‌ಪಾಸ್‌!

ಪ್ರಸ್ತುತ ರಾಜ್ಯದ ಶೇ.35.45ರಷ್ಟು ಜನರಷ್ಟೇ ಮಾಸ್ಕ್ ಧರಿಸುತ್ತಿದ್ದಾರೆ. “ಉದಯವಾಣಿ’ಯು ರಾಜ್ಯದ 12 ಮಹಾ ನಗರಗಳ 120ಕ್ಕೂ ಅಧಿಕ ತಾಣಗಳಲ್ಲಿ ಸಮೀಕ್ಷೆ ನಡೆಸಿದ್ದು, 7,128 ಮಂದಿ ಭಾಗಿಯಾಗಿದ್ದರು. 105 ವಿದ್ಯಾರ್ಥಿಗಳ ತಂಡ ಇಡೀ ದಿನ ಸಾರ್ವಜನಿಕ ಪ್ರದೇಶಗಳಲ್ಲಿದ್ದು ಈ ಸರ್ವೆ ಕೈಗೊಂಡಿದ್ದರು.

ಸರ್ವೆಯಲ್ಲಿ ಕಂಡಿದ್ದೇನು?
ಕೊರೊನಾ ನಿಯಮ ಉಲ್ಲಂ  ಸಿದ ಮಹಾ ನಗರ ಪೈಕಿ ಬೆಂಗಳೂರು ಮುಂಚೂಣಿ. ಇಲ್ಲಿ ಮಾಸ್ಕ್ ಧರಿಸಿದವರು ಶೇ.18! ಅನಂತರದ ಸ್ಥಾನಗಳನ್ನು ಮೈಸೂರು (ಶೇ.29) ಮತ್ತು ಬಳ್ಳಾರಿ (ಶೇ.30) ಪಡೆದಿವೆ. ಮಾಸ್ಕ್ಗೆ ಹೆಚ್ಚು ಮರ್ಯಾದೆ ಕೊಟ್ಟಿದ್ದು ಮಲೆನಾಡು ಮತ್ತು ಕರಾವಳಿ ಭಾಗ. ಪರಿಪೂರ್ಣ ಮಾಸ್ಕ್ಧಾರಣೆ ಪೈಕಿ ಶಿವಮೊಗ್ಗ ಶೇ.48.57 ಅಂಕಗಳಿಂದ ಪ್ರಥಮ, ಉಡುಪಿ (ಶೇ.43) ದ್ವಿತೀಯ, ಮಂಗ ಳೂರು (ಶೇ.40) ತೃತೀಯ ಸ್ಥಾನದಲ್ಲಿದೆ.

ದಂಡನಾಯಕ ನಾನೇ…
ಹುಬ್ಬಳ್ಳಿಯ ಜನಸಂದಣಿ ತಾಣಗಳಲ್ಲಿ ದಂಡ ತೆತ್ತವರ ಸಂಖ್ಯೆ ಹೆಚ್ಚಿತ್ತು. ಮಾಸ್ಕ್ ಧರಿಸದವರಿಂದ ಇಲ್ಲಿ ನಿತ್ಯ ಸರಾಸರಿ 50 ಸಾ. ರೂ. ದಂಡ ಸಂಗ್ರಹಿಸ ಲಾ ಗುತ್ತಿತ್ತು. ಉಡುಪಿ, ಮಂಗಳೂರಿನ ವಿವಿಧೆಡೆ ದಂಡ ವಿಧಿಸುವ ಸಿಬಂದಿ ಎದುರೇ ಕೋವಿಡ್‌ ನಿಯಮಗಳು ಉಲ್ಲಂಘನೆಯಾಗುತ್ತಿದ್ದವು.

ಸುಶಿಕ್ಷಿತರಿಂದಲೇ ನಿರ್ಲಕ್ಷ್ಯ
ವಿಚಾರವಂತರ ನೆಲ ಎನ್ನಿಸಿಕೊಂಡ ಮೈಸೂರು, “ವಿದ್ಯಾಕಾಶಿ’ ಗರಿ ಮುಡಿದ ಧಾರವಾಡದಲ್ಲೂ ಮಾಸ್ಕ್ ಇಲ್ಲದ ಮುಖಗಳೇ ಹೆಚ್ಚು ಕಾಣುತ್ತಿದ್ದವು. ಕಲಿತವರು, ಯುವಕರು ಹೆಚ್ಚಿರುವ ಕೆಲವು ಕಾಲೇಜು ಆವರಣಗಳಲ್ಲಿ ಮಾಸ್ಕ್ ಸಂಸ್ಕೃತಿಯೇ ನಾಪತ್ತೆ ಆಗಿತ್ತು. ಕೊರೊನಾ ಮಾರ್ಗಸೂಚಿ ಪಾಲಿಸಿ ಆದರ್ಶವಾಗಬೇಕಿದ್ದ ಅಧಿಕಾರಿಗಳೇ ಬೇಜವಾಬ್ದಾರಿತನ ಪ್ರದರ್ಶಿಸುತ್ತಿದ್ದ ದೃಶ್ಯ ಎಲ್ಲೆಡೆ ಇತ್ತು.

ಇದೇನು ಭಂಡತನ!
ಸಮೀಕ್ಷೆಯಲ್ಲಿ ಅಸಹಜ ಸಂಗತಿಗಳೇ ರಾರಾಜಿಸಿದ್ದವು. ವಿಜಯಪುರ ಸಹಿತ ಹಲವೆಡೆ ಮಾಸ್ಕ್ನ್ನು ಗಲ್ಲ ಮತ್ತು ಕೊರಳಲ್ಲಿ ಧರಿಸಿಕೊಂಡದ್ದು ಹೆಚ್ಚಾಗಿ ಕಂಡು ಬಂತು. ಇಡೀ ರಾಜ್ಯದಲ್ಲಿ ಅರೆಬರೆ ಮಾಸ್ಕ್ನ ಟ್ರೆಂಡ್‌ ಶೇ.30.34ರಷ್ಟಿದೆ. ಶಿವಮೊಗ್ಗದ ಜನಸಂದಣಿ ಪ್ರದೇಶಗಳಲ್ಲಿ ಕೆಲವರ ಅಂಗಿ- ಪ್ಯಾಂಟ್‌ ಜೇಬಿನೊಳ ಗಿಂದ ಮಾಸ್ಕ್ ಇಣುಕುತ್ತಿತ್ತು. “ಮಾಸ್ಕ್ ಹಾಕ್ಕೊಳಿÅà’ ಎಂದು ಗದರಿಸುತ್ತಿದ್ದ ತುಮಕೂರಿನ ಪೊಲೀಸ್‌ ಸಿಬಂದಿಯೇ ಅರೆಬರೆ ಮಾಸ್ಕ್ನಲ್ಲಿದ್ದರು! ಕಲಬುರಗಿ, ಮಂಗಳೂರಿನ ಕೆಲವೆಡೆ ಸೀನುವಾಗ ಮಾಸ್ಕ್ ತೆಗೆಯುತ್ತಿದ್ದರು!

ಉದಯವಾಣಿ ಕಾಳಜಿ
1. ಸರಕಾರ ನಿಯಮ ಸಡಿಲಗೊಳಿಸುವುದು ಕೇವಲ ಆರ್ಥಿಕ ಚಟುವಟಿಕೆಯ ಉತ್ತೇಜನ ಕ್ಕಷ್ಟೇ. ಕೋವಿಡ್‌ ನಿಯಮ ಉಲ್ಲಂಘನೆಗಲ್ಲ.
2.ಕೊರೊನಾ ಅಲೆ ತಗ್ಗುವವರೆಗೂ ಮಾಸ್ಕ್ ಧರಿಸುವುದು ನಮಗೇ ಕ್ಷೇಮ.
3.ಮೂಗು, ಬಾಯಿ ಮುಚ್ಚುವಂತೆ ಮಾಸ್ಕ್ ಧರಿ ಸಿದರಷ್ಟೇ ಪ್ರಯೋ ಜನ.
4.ಜನದಟ್ಟಣೆ ಇರುವ ಕಡೆಗಳಲ್ಲಿ ಸಾಮಾಜಿಕ ಅಂತರ ಪಾಲನೆ ಮುಖ್ಯ.
5. “ನಮ್ಮಿಂದ ಇನ್ನೊಬ್ಬರಿಗೆ ತೊಂದರೆ ಆಗದಿರಲಿ’ ಎಂಬ ಕಾಳಜಿ ನಮ್ಮೊಳಗಿರಲಿ.

ಟಾಪ್ ನ್ಯೂಸ್

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯಿತಿ ಸಿದ್ದೇಶ್ವರ

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

15-uv-fusion

Time management: ತಂತ್ರಜ್ಞಾನ ಯುಗದಲ್ಲಿ ಸಮಯ ನಿರ್ವಹಣೆ ಮುಖ್ಯ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

14-fusion

Women: ಸ್ತ್ರೀ ಎಂದರೆ ಅಷ್ಟೇ ಸಾಕೇ

13-

Woman: ಸದಾಕಾಲ ಸಾಧಕಿ ಹೆಣ್ಣು

12-

Sirsi Festival: ನಾವು ಬಂದೇವ ಶಿರಸಿ ಜಾತ್ರೆ ನೋಡಲಿಕ್ಕೆ !

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.