ಮಾತಾ ಮಾಣಿಕೇಶ್ವರಿ ಅಂತ್ಯಸಂಸ್ಕಾರ ಇಂದು
Team Udayavani, Mar 9, 2020, 3:04 AM IST
ಸೇಡಂ: ಯಾನಾಗುಂದಿಯ ಮಾಣಿಕ್ಯಗಿರಿ ಬೆಟ್ಟದಲ್ಲಿ ಶನಿವಾರ ಲಿಂಗೈಕ್ಯರಾದ ಮಾತಾ ಮಾಣಿಕೇಶ್ವರಿ ಅಮ್ಮನವರ ಅಂತ್ಯಸಂಸ್ಕಾರ ಸೋಮವಾರ ಮಧ್ಯಾಹ್ನ 3 ಗಂಟೆಗೆ ಜರುಗಲಿದ್ದು, ದರ್ಶನ ಪಡೆಯಲು ದೇಶದ ವಿವಿಧ ಮೂಲೆಗಳಿಂದ ಲಕ್ಷಾಂತರ ಭಕ್ತರು ಆಗಮಿಸುತ್ತಿದ್ದಾರೆ.
ಮಾತಾ ಮಾಣಿಕೇಶ್ವರಿ ಅಮ್ಮನವರು ಲಿಂಗೈಕ್ಯರಾದ ಸುದ್ದಿ ತಿಳಿಯುತ್ತಲೇ ಜಾಗೃತ ಗೊಂಡ ಪೊಲೀಸ್ ಇಲಾಖೆ, ಭದ್ರತೆಗೆ ಸುಮಾರು 1,500 ಸಿಬ್ಬಂದಿಯನ್ನು ನೇಮಿಸಿದೆ. ಮಾಣಿಕ್ಯಗಿರಿಯಲ್ಲೀಗ ಶಿವನಾಮ ಸ್ಮರಣೆ, ಜಪ-ತಪ, ಆರಾಧನೆ ನಡೆಯುತ್ತಿದ್ದು, ಅಹಿಂಸೆಯೇ ಪರಮ ಧರ್ಮ ಎಂದು ಸಾರಿ, ಸಾರಿ ಹೇಳಿದ ಮಾತಾ ಮಾಣಿಕೇಶ್ವರಿ ಅಮ್ಮನವರನ್ನು ಕಂಡು ಭಕ್ತರು ದುಃಖತಪ್ತರಾಗಿದ್ದಾರೆ.
ಮಂಗಳವಾರ ನಡೆಸಲು ಉದ್ದೇಶಿಸಲಾಗಿದ್ದ ಅಂತ್ಯಸಂಸ್ಕಾರವನ್ನು ಸೋಮವಾರ ಮಧ್ಯಾಹ್ನ 3 ಗಂಟೆಗೆ ಯಾನಾಗುಂದಿಯ ಅಮ್ಮನವರು ಸೂಚಿತ ಗುಹೆಯ ಹೊರಭಾಗದ ದೇವಾಲಯದಲ್ಲಿ ಅದ್ವೆ„ತ ಸಿದ್ಧಾಂತದಡಿ ಸಕಲ ವಿಧಿವಿಧಾನಗಳ ಮೂಲಕ ಆಶ್ರಮದ 108 ಶಾಖೆಗಳ ಮುಖ್ಯ ಆಚಾರ್ಯರ ನೇತೃತ್ವದಲ್ಲಿ ನಡೆಸಲು ನಿರ್ಧರಿಸಲಾಗಿದೆ ಎಂದು ಟ್ರಸ್ಟ್ನ ಸಿದ್ರಾಮಪ್ಪ ಸಣ್ಣೂರು ತಿಳಿಸಿದ್ದಾರೆ.
ಉತ್ತರಾಧಿಕಾರಿ ನೇಮಕ ಇಲ್ಲ: ಮೂಲಗಳ ಪ್ರಕಾರ ಅಮ್ಮನವರ ಸಮಾಧಿ ಮಂದಿರವೇ ಭಕ್ತ ಸಮೂಹಕ್ಕೆ ಏಕಮೇವ ದ್ವಿತೀಯ ಎನ್ನಲಾಗಿದೆ. ಶ್ರೀಶೈಲದಲ್ಲಿ ನೆಲೆಸಿರುವ ಮಲ್ಲಿಕಾರ್ಜುನಸ್ವಾಮಿ ಆರಾಧನೆಯಲ್ಲೇ ತಮ್ಮ ಇಡೀ ಜೀವನ ಸವೆಸಿದ ಮಾತಾ ಮಾಣಿಕೇಶ್ವರಿ ನೆಲೆಸಿದ ಕ್ಷೇತ್ರ ಎರಡನೇ ಶ್ರೀಶೈಲವಾಗಲಿದೆ ಎನ್ನಲಾಗಿದೆ.
ಈ ಹಿನ್ನೆಲೆಯಲ್ಲಿ ಉತ್ತರಾ ಧಿಕಾರಿ ನೇಮಕ ಇಲ್ಲ ಎಂದು ಮೂಲಗಳು ತಿಳಿಸಿವೆ. ಈ ಮಧ್ಯೆ, ಯಾದಗಿರಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚವ್ಹಾಣ, ಸಂಸದ ಉಮೇಶ ಜಾಧವ ಸೇರಿದಂತೆ ವಿವಿಧ ಕ್ಷೇತ್ರಗಳ ಗಣ್ಯರು ಆಗಮಿಸಿ ಮಾತೆಯ ಅಂತಿಮ ದರ್ಶನ ಪಡೆದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PSI re-examination: ಪಿಎಸ್ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ
Lok sabha polls: ಸುರೇಶ್ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್ ದಾಸ್
Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್
Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್
Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್’ ಎಂದ ಬಿಜೆಪಿಗರು!
MUST WATCH
ಹೊಸ ಸೇರ್ಪಡೆ
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ
Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು
Politics: ಚಿತ್ರದುರ್ಗ ರಾಜಕೀಯ ನಿರಾಶ್ರಿತರ ಕೇಂದ್ರವೇ?: ರಘುಚಂದನ್
PSI re-examination: ಪಿಎಸ್ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ