ನಾಳೆ ಕೂಡಲ ಸಂಗಮದಲ್ಲಿ ಮಾತೆ ಮಹಾದೇವಿ ಅಂತ್ಯಕ್ರಿಯೆ
Team Udayavani, Mar 15, 2019, 12:30 AM IST
ಬೆಂಗಳೂರು: ಬಹು ಅಂಗಾಂಗ ವೈಫಲ್ಯ ದಿಂದ ಬಳಲುತ್ತಿದ್ದ ಕೂಡಲಸಂಗಮದ ಬಸವಧರ್ಮ ಪೀಠದ ಅಧ್ಯಕ್ಷೆ ಮಾತೆ ಮಹಾದೇವಿ (74) ಅವರು ಗುರುವಾರ ಹೃದಯಾ ಘಾತದಿಂದ ಲಿಂಗೈಕ್ಯ ರಾಗಿದ್ದಾರೆ.
ಮಾತೆ ಮಹಾದೇವಿ ಅವರಿಗೆ ಮೂತ್ರಪಿಂಡ ಹಾಗೂ ಶ್ವಾಸಕೋಶ ತೊಂದರೆಯಿಂದಾಗಿ ಮಾ.9ರಂದು ಬೆಂಗಳೂರಿನ ಹಳೇ ವಿಮಾನ ನಿಲ್ದಾಣ ರಸ್ತೆಯ ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿತ್ತು.ಬಹು ಅಂಗಾಂಗ ವೈಫಲ್ಯದೊಂದಿಗೆ ರಕ್ತ ಸೋಂಕು ಸಮಸ್ಯೆಯೂ ಕಾಣಿಸಿಕೊಂಡ ಪರಿಣಾಮ ಅವರನ್ನು ತೀವ್ರ ನಿಗಾ ಘಟಕ ದಲ್ಲಿರಿಸಿ ಚಿಕಿತ್ಸೆ ಮುಂದುವರಿಸಲಾಗಿತ್ತು. ಗುರುವಾರ ಸಂಜೆ 4.45ಕ್ಕೆ ಹೃದಯಾ ಘಾತದಿಂದ ಇಹಲೋಹ ತ್ಯಜಿಸಿದ್ದಾರೆ. ಕುಗ್ರಾಮದಲ್ಲಿ ಜನಿಸಿ ಜಗದ್ಗುರು ವಾದರು: ಚಿತ್ರದುರ್ಗ ತಾಲೂಕಿನ ಕುಗ್ರಾಮ ಸಾಸಲಹಟ್ಟಿ ಮಾತೆ ಮಹಾ ದೇವಿಯವರ ಹುಟ್ಟೂರು. 1946ರ ಮಾ. 13ರಂದು ಡಾ| ಎಸ್.ಆರ್. ಬಸಪ್ಪ ಹಾಗೂ ಗಂಗಮ್ಮನವರ ಪುತ್ರಿಯಾಗಿ ಜನಿಸಿದ ಮಾತೆ ಮಹಾದೇವಿ ಪೂರ್ವಾಶ್ರಮದ ಹೆಸರು ರತ್ನ ಎಂದಾಗಿತ್ತು.
ತಂದೆ ಬಸಪ್ಪ ಸರ್ಕಾರಿ ವೈದ್ಯರಾಗಿ ಸೇವೆ ಸಲ್ಲಿಸುತ್ತಿದ್ದಾಗ ಅಕಾಲಿಕ ಮರಣಕ್ಕೆತುತ್ತಾದರು. ಆಗ ಇವರ ಆಸರೆಗೆ
ಬಂದಿದ್ದು ತಾತ, ಖ್ಯಾತ ವಕೀಲ ಬಿ.ಟಿ.ಶಿವನ್ ಮತ್ತು ತಂದೆಯ ಸಹೋದರಿ ಈರಮ್ಮ. ಇವರ ನೆರಳಿನಲ್ಲಿ ಚಿತ್ರದುರ್ಗದ ಸರ್ಕಾರಿ ವಿಜ್ಞಾನ ಕಾಲೇಜಿನಲ್ಲಿ ಪಿಯುಸಿ, ಬಿಎಸ್ಸಿ ವ್ಯಾಸಂಗ ಮಾಡಿದರು. ಬಿಎಸ್ಸಿ ಮುಗಿಯುತ್ತಿದ್ದಂತೆ ಸಾಮಾಜಿಕ ಕಾದಂಬರಿ “ಹೆಪ್ಪಿಟ್ಟ ಹಾಲು’ ಕೃತಿ ರಚಿಸಿದರು. ಬಿಎಸ್ಸಿ ಮುಗಿಸಿ ಎಂಎ ಓದಲು ವಿವಿಗೆ ತೆರಳಿದಾಗ ಇವರು ಬರೆದ ಕಾದಂಬರಿ “ಹೆಪ್ಪಿಟ್ಟ ಹಾಲು’ ಎಂಎ ವಿದ್ಯಾರ್ಥಿಗಳಿಗೆ ಪಠ್ಯವಾಯಿತು.
1965ರ ಆ. 19 ರಿಂದ ಬಸವ ಧರ್ಮ ಪ್ರಚಾರ ಆರಂಭಿಸಿದ ಎರಡೇ ದಿನದಲ್ಲಿ ಲಿಂಗಾನಂದ ಸ್ವಾಮಿಗಳಿಂದ ಇಷ್ಟಲಿಂಗದೀಕ್ಷೆ ಪಡೆದರು. ಧರ್ಮ ಪ್ರಚಾರ ಅನುಕೂಲಕ್ಕಾಗಿ 1968 ಏ.13ರಂದು ವೀರ ವೈರಾಗ್ಯ ನಿಧಿ ಅಕ್ಕಮಹಾದೇವಿ ಜಯಂತಿ ದಿನ ಧಾರವಾಡದಲ್ಲಿ ಅಕ್ಕಮಹಾದೇವಿ ಆಶ್ರಮ ಸ್ಥಾಪಿಸಿದರು.
ಐತಿಹಾಸಿಕ ಅಕ್ಕ ಮಹಾದೇವಿ ಅನುಭವ ಪೀಠವೆಂಬ ವಿಶ್ವದ ಮೊಟ್ಟ ಮೊದಲ ಮಹಿಳಾ ಜಗದ್ಗುರು ಪೀಠ ಸ್ಥಾಪಿಸಿ ಅದರ ಪ್ರಥಮ ಪೀಠಾಧ್ಯಕ್ಷರಾಗಿ ಪ್ರತಿಜ್ಞಾ ವಿ ಧಿ ಸ್ವೀಕರಿಸಿದರು. 1977ರಲ್ಲಿ ವಿಶ್ವ ಕಲ್ಯಾಣ ಮಿಷನ್ (ಟ್ರಸ್ಟ್ ), ಬೆಂಗಳೂರಿನ ಕುಂಬಳಗೋಡಿನಲ್ಲಿ 1978ರಲ್ಲಿ ಬಸವ ಗಂಗೋತ್ರಿ ಆಶ್ರಮ, 2002ರಲ್ಲಿ ಬಸವಕಲ್ಯಾಣದಲ್ಲಿ ಅಲ್ಲಮಪ್ರಭು ಶೂನ್ಯಪೀಠ ಸ್ಥಾಪಿಸಿ 12ನೇ ಶತಮಾನದ ಶೂನ್ಯಪೀಠ ಪರಂಪರೆಯನ್ನು ಮುಂದುವರಿಸಿಕೊಂಡು ಬಂದಿದ್ದರು.
ಕೂಡಲಸಂಗಮದಲ್ಲಿ ನಾಳೆ ಅಂತ್ಯಕ್ರಿಯೆ
ಬಾಗಲಕೋಟೆ: ಮಾತೆ ಮಹಾದೇವಿ ಅವರ ಅಂತ್ಯಕ್ರಿಯೆ ಮಾ.16ರಂದು ಕೂಡಲಸಂಗಮದಲ್ಲಿ ನಡೆಯಲಿದೆ. ಎರಡು ದಿನ ಮಾತಾಜಿಯವರ ಪಾರ್ಥಿವ ಶರೀರ ದರ್ಶನ ವ್ಯವಸ್ಥೆ ಮಾಡಲಾಗಿದೆ. ಮಾ.15ರ ಬೆಳಗ್ಗೆ 11ರವರೆಗೆ ಬೆಂಗಳೂರಿನ ರಾಜಾಜಿನಗರದ ಬಸವ ಮಂಟಪದಲ್ಲಿ, ಅಲ್ಲಿಂದ ಮಾತಾಜಿಯವರ ಜನ್ಮಸ್ಥಳ ಸಾಸಲಹಟ್ಟಿಯಲ್ಲಿ ಭಕ್ತರ ದರ್ಶನಕ್ಕೆ ವ್ಯವಸ್ಥೆ ಮಾಡಲಾಗುವುದು.
ಬಳಿಕ ರಾತ್ರಿ ಲಿಂಗಾಯತ ಧರ್ಮ ಕ್ಷೇತ್ರ ಕೂಡಲಸಂಗಮಕ್ಕೆ ಪಾರ್ಥಿವ ಶರೀರವನ್ನು ತೆಗೆದುಕೊಂಡು ಹೋಗಲಾಗುತ್ತಿದ್ದು, ಅಲ್ಲಿ ಮಾ. 16ರವರೆಗೆ ಭಕ್ತರ ದರ್ಶನಕ್ಕೆ ಅನುವು ಮಾಡಿಕೊಡಲಾಗುವುದು. ಮಾ.16ರಂದೇ ಕೂಡಲಸಂಗಮದಲ್ಲಿ ನಾಡಿನ ಸಕಲ ಬಸವ ಪರಂಪರೆಯ ಜಂಗಮ ಮೂರ್ತಿಗಳು, ಬಸವ ಭಕ್ತರ ಉಪಸ್ಥಿತಿಯಲ್ಲಿ ಲಿಂಗಾಯತ ಧರ್ಮದ ಪದ್ಧತಿಯಂತೆ ಅಂತಿಮ ಕ್ರಿಯಾ ವಿಧಿ ವಿಧಾನ ನಡೆಯಲಿದೆ ಎಂದು ಬಸವ ಧರ್ಮ ಪೀಠದ ಪ್ರಕಟಣೆ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…
MUST WATCH
ಹೊಸ ಸೇರ್ಪಡೆ
WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್ ಮೆಟ್ಟಿಲೇರಿದ ಪ್ರಕರಣ, ಏನಿದು?
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ