ಸೈಕಲ್‌ ರವಿ ಜತೆ ಮಾಜಿ ಸಚಿವರ ನಂಟು ಮಾಹಿತಿ 


Team Udayavani, Jul 18, 2018, 6:00 AM IST

31.jpg

ಬೆಂಗಳೂರು: ಕುಖ್ಯಾತ ರೌಡಿ ಶೀಟರ್‌ ಸೈಕಲ್‌ ರವಿ ಹಾಗೂ ಮಾಜಿ ಸಚಿವ ಎಂ.ಬಿ.ಪಾಟೀಲ್‌ ನಡುವೆ ದೂರವಾಣಿ ಕರೆಗಳ ವಿನಿಮಯ ಆಗಿದೆ ಎಂಬ ಸುದ್ದಿ ಮಂಗಳವಾರ ದಿನವಿಡೀ ಪೊಲೀಸ್‌ ಇಲಾಖೆಗೆ ತಲೆನೋವು ತಂದಿತ್ತು. ಪ್ರಸ್ತುತ ನ್ಯಾಯಾಂಗ ಬಂಧನದಲ್ಲಿರುವ ಸೈಕಲ್‌ ರವಿ ವಿಚಾರಣೆ ಸಂದರ್ಭದಲ್ಲಿ ಸಂಗ್ರಹಿಸಲಾಗಿದ್ದ ಕಾಲ್‌ ರೆಕಾರ್ಡ್‌ನಲ್ಲಿ ಎಂ.ಬಿ.ಪಾಟೀಲ್‌ ಅವರದು ಎಂದು ಹೇಳಲಾದ 7760977777 ಸಂಖ್ಯೆಗೆ ಸೈಕಲ್‌ ರವಿ ಬಳಸಿದ್ದ ಎನ್ನಲಾದ 9741199999 ಸಂಖ್ಯೆಯಿಂದ ಹಲವು ಬಾರಿ ಕರೆ ಮಾಡಲಾಗಿತ್ತು ಎಂಬುದು ಸಿಸಿಬಿ ಸಿಡಿಆರ್‌ನಲ್ಲಿ ಉಲ್ಲೇಖೀಸಿರುವುದು ರಾಜಕೀಯ ವಲಯದಲ್ಲೂ ಚರ್ಚೆಗೆ ಗ್ರಾಸವಾಗಿತ್ತು. 

ಆದರೆ, ವಿದ್ಯುನ್ಮಾನ ಮಾಧ್ಯಮಗಳಲ್ಲಿ ಈ ಕುರಿತು ಸುದ್ದಿ ಪ್ರಸಾರವಾಗುತ್ತಿದ್ದಂತೆ ಮಾಜಿ ಸಚಿವ ಎಂ.ಬಿ.ಪಾಟೀಲ್‌, ಮಾಧ್ಯಮಗಳಲ್ಲಿ ನನ್ನದು ಎಂದು ತೋರಿಸುತ್ತಿರುವ ಮೊಬೈಲ್‌ ಸಂಖ್ಯೆ ಕಾಂಗ್ರೆಸ್‌ ಪಕ್ಷದ ಕಾರ್ಯಕರ್ತ ಸಚ್ಚಿದಾನಂದ ಅವರಿಗೆ ಸೇರಿದ್ದು. ಸೈಕಲ್‌ ರವಿ ಯಾರು ಎಂಬುದು ನನಗೆ ಗೊತ್ತಿಲ್ಲ. ಸಿಸಿಬಿ ಪೊಲೀಸರಿಂದ ಮಾಹಿತಿ  ಪಡೆಯುತ್ತೇನೆಂದು ಹೇಳಿದ್ದಾರೆ. ನಗರ ಪೊಲೀಸ್‌ ಆಯುಕ್ತ ಟಿ.ಸುನಿಲ್‌ ಕುಮಾರ್‌ ಈ ಕುರಿತು ಪ್ರತಿಕ್ರಿಯಿಸಿ, ಸೈಕಲ್‌ ರವಿ ಎಂ.ಬಿ.ಪಾಟೀಲ್‌ ಅವರ ಜತೆ ದೂರವಾಣಿ ಸಂಭಾಷಣೆ ನಡೆಸಿದ್ದಾರೆಂಬ ಬಗ್ಗೆ ಮಾಹಿತಿ ಇಲ್ಲ. ಊಹಾಪೋಹ ಸುದ್ದಿಗಳಿಗೆ ಪ್ರತಿಕ್ರಿಯೆ ನೀಡಲ್ಲ ಎಂದು ತಿಳಿಸಿದರು.

ಕಾಲ್‌ ಡೀಟೇಲ್ಸ್‌ ರೆಕಾರ್ಡ್‌ನಲ್ಲಿ ಏನಿದೆ?: ಸೈಕಲ್‌ ರವಿ ಜತೆಗೆ ಎಂ.ಬಿ. ಪಾಟೀಲರದು ಎಂದು ಹೇಳಲಾದ ಮೊಬೈಲ್‌ ಸಂಖ್ಯೆಯಿಂದ 80ಕ್ಕೂ ಹೆಚ್ಚು ಬಾರಿ ದೂರವಾಣಿ ಸಂಪರ್ಕದಲ್ಲಿ ದ್ದರು, ಸಂದೇಶ ಗಳನ್ನು ಕಳುಹಿಸಿದ್ದರು. ಹಾಗೆಯೇ ಸೈಕಲ್‌ ರವಿ ಬಳಸಿದ್ದ ಫೋನ್‌ನಿಂದಲೂ ಎಂ.ಬಿ. ಪಾಟೀಲರದು ಎಂದು ಹೇಳಲಾದ ಮೊಬೈಲ್‌ ಸಂಖ್ಯೆಗೆ 24 ಬಾರಿ ಕರೆ ಮಾಡಲಾಗಿತ್ತು ಎಂದು ಹೇಳಲಾಗಿದೆ. ಸಿಸಿಬಿ ಮೂಲಗಳ ಪ್ರಕಾರ ಸೈಕಲ್‌ ರವಿ ಬಂಧನ ವೇಳೆ ಈತನಿಂದ ಸುಮಾರು ಹತ್ತಕ್ಕೂ ಅಧಿಕ ಮೊಬೈಲ್‌ಗ‌ಳನ್ನು ವಶಕ್ಕೆ ಪಡೆಯಲಾಗಿತ್ತು. ಈ ಎಲ್ಲ ಮೊಬೈಲ್‌ಗ‌ಳಲ್ಲಿ ಯಾವೆಲ್ಲ ಸಿಮ್‌ಕಾರ್ಡ್‌ಗಳು ಬಳಕೆ ಆಗಿವೆ ಎಂಬ ಮಾಹಿತಿ ಸಂಗ್ರಹಿಸಲಾಗಿತ್ತು. ಈ ವೇಳೆ ಸಿಕ್ಕ ಸಿಡಿಆರ್‌ನಲ್ಲಿ 7760977777 ಸಂಖ್ಯೆ ಎಂ.ಬಿ.ಪಾಟೀಲ್‌ರ ಸದಾಶಿವನಗರದ ನಿವಾಸದ ವಿಳಾಸದಲ್ಲಿದೆ. ಈ ಹಿನ್ನೆಲೆಯಲ್ಲಿ ಈ ನಂಬರ್‌ ಸಿಡಿಆರ್‌ ಪರಿಶೀಲಿಸಿದಾಗ ಸುಮಾರು 80ಕ್ಕೂ ಹೆಚ್ಚು ಬಾರಿ ಆ ಸಂಖ್ಯೆಯಿಂದ ಸೈಕಲ್‌ ರವಿಯನ್ನು ಸಂಪರ್ಕಿಸಿರುವ ಬಗ್ಗೆ ಮಾಹಿತಿ ದೊರಕಿದೆ ಎಂದು ಮೂಲಗಳು ತಿಳಿಸಿವೆ.

ಸೈಕಲ್‌ ರವಿಗೂ ನನಗೂ ಯಾವುದೇ ಸಂಬಂಧ ಇಲ್ಲ
ವಿಜಯಪುರ: ಸಮಾಜ ಬಾಹಿರ ಕೃತ್ಯದ ಆರೋಪ ಎದುರಿಸುತ್ತಿರುವ ರೌಡಿ ಶೀಟರ್‌ ಸೈಕಲ್‌ ರವಿ ಜತೆ ನನಗೆ ಯಾವುದೇ ಸಂಬಂಧವಿಲ್ಲ. ಹೀಗಿದ್ದರೂ ಕೆಲವು ಮಾಧ್ಯಮಗಳು ರೌಡಿಶೀಟರ್‌ ಜತೆ ಸಂಬಂಧವಿದೆ ಎಂದು ನನ್ನ ಚಾರಿತ್ರವಧೆ ಮಾಡುವ ವರದಿ ಪ್ರಕಟಿಸಿವೆ. ಅಂಥ
ಮಾಧ್ಯಮಗಳ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡುವುದಾಗಿ ಮಾಜಿ ಸಚಿವ ಹಾಗೂ ಶಾಸಕ ಡಾ.ಎಂ.ಬಿ. ಪಾಟೀಲ್‌ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿದ್ಯುನ್ಮಾನ ಹಾಗೂ ಕೆಲವು ಅಂತರ್ಜಾಲ ಮಾಧ್ಯಮಗಳು ನನ್ನ  ತೇಜೋವಧೆ ಮಾಡುವ ವರದಿ ಪ್ರಕಟಿಸಿವೆ. ಈ ಕುರಿತು ವರದಿ ಪ್ರಸಾರ ಮಾಡಿದ ಮಾಧ್ಯಮಗಳ ವಿರುದಟಛಿ ಮಾನನಷ್ಟ ಮೊಕದ್ದಮೆ ಹೂಡಲು ಮುಂದಾಗಿದ್ದು ಇದಕ್ಕಾಗಿ ಕಾನೂನು ಸಲಹೆಗಾರರೊಂದಿಗೆ ಸಮಾಲೋಚನೆ ನಡೆಸಿದ್ದೇನೆ ಎಂದರು. ರವಿ ಜತೆ ಸಂಭಾಷಣೆ ಮಾಡಿದ್ದಾಗಿ ಮೊಬೈಲ್‌ ನಂಬರ್‌ ಸಿಸಿಬಿ ಮೂಲಗಳಿಂದ ಪಡೆದುದಾಗಿ ಪ್ರಸಾರ ಮಾಡಿವೆ. ಆದರೆ ಆ ಮೊಬೈಲ್‌ ನಂಬರ್‌ ಮಂಡ್ಯದ ಕಾಂಗ್ರೆಸ್‌ ಯುವ ಮುಖಂಡ ಸಚ್ಚಿದಾನಂದಗೆ ಸೇರಿದ್ದಾಗಿದೆ. ಆದರೆ ಈ ನಂಬರ್‌ ರೌಡಿಶೀಟರ್‌ ಸೈಕಲ್‌ ರವಿಗೆ ಸೇರಿದ್ದು  ಎಂದು ಪ್ರಸಾರ ಮಾಡುವ ಮೂಲಕ ನನ್ನ ರಾಜಕೀಯ ವರ್ಚಸ್ಸಿಗೆ ಧಕ್ಕೆ ತರುವ ಕೃತ್ಯ ಎಸಗಿವೆ ಎಂದು ಹೇಳಿದರು.

ಟಾಪ್ ನ್ಯೂಸ್

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

30

CET Exam: ಮೊದಲ ದಿನ ಸುಸೂತ್ರವಾಗಿ ನಡೆದ ಸಿಇಟಿ

1-weqwewq

Belur: ದೈತ್ಯ ‘ಕರಡಿ’ ಆನೆ ಕೊನೆಗೂ ಸೆರೆ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

30

CET Exam: ಮೊದಲ ದಿನ ಸುಸೂತ್ರವಾಗಿ ನಡೆದ ಸಿಇಟಿ

1-wqeqwe

Maharashtra; ರತ್ನಾಗಿರಿ- ಸಿಂಧುದುರ್ಗದಲ್ಲಿ ರಾಣೆ vs ಠಾಕ್ರೆ ಕಾದಾಟ

1-HM

Mathura ನನ್ನನ್ನು ಗೋಪಿಕೆಯೆಂದು ಭಾವಿಸುವೆ: ಬಿಜೆಪಿ ಅಭ್ಯರ್ಥಿ ಹೇಮಾ

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.