ಎಂಬಿಪಿ ಪಾಟೀಲ್-ಮಾಧುಸ್ವಾಮಿ ವಾಗ್ವಾದ
Team Udayavani, Jul 20, 2019, 3:00 AM IST
ವಿಧಾನಸಭೆ: ಮುಂಬೈನಲ್ಲಿರುವ ಶಾಸಕರನ್ನು ವಾಪಸ್ ಕರೆ ತರುವ ವಿಷಯದಲ್ಲಿ ಗೃಹ ಸಚಿವ ಎಂ.ಬಿ.ಪಾಟೀಲ್ ಹಾಗೂ ಬಿಜೆಪಿ ಸದಸ್ಯ ಜೆ.ಸಿ.ಮಾಧುಸ್ವಾಮಿ ನಡುವೆ ಮಾತಿನ ಚಕಮಕಿ ನಡೆಯಿತು.
ಶ್ರೀಮಂತ ಪಾಟೀಲ್ ಅವರ ಬಗ್ಗೆ ಮಾಹಿತಿ ನೀಡುವಂತೆ ಸ್ಪೀಕರ್ ನೀಡಿದ್ದ ಸೂಚನೆಯ ಮೇರೆಗೆ ಸದನಕ್ಕೆ ಮಾಹಿತಿ ನೀಡಲು ಗೃಹ ಸಚಿವ ಎಂ.ಬಿ. ಪಾಟೀಲ್ ಸಮಯ ಕೇಳಿದ್ದರು. ಆ ಸಂದರ್ಭದಲ್ಲಿ ಜೆ.ಸಿ.ಮಾಧುಸ್ವಾಮಿ, ಮುಂಬೈನಲ್ಲಿನ ಶಾಸಕರನ್ನು ವಾಪಸ್ ಕರೆಸುವ ವಿಷಯದಲ್ಲಿ ಗೃಹ ಸಚಿವರು ಮಧ್ಯಸ್ಥಿಕೆ ವಹಿಸಲು ಬರುವುದಿಲ್ಲ ಎಂದು ಆಕ್ಷೇಪ ವ್ಯಕ್ತಪಡಿಸಿದರು.
ಆಗ ಅಸಮಾಧಾನಗೊಂಡ ಎಂ.ಬಿ.ಪಾಟೀಲ್, ಗೃಹ ಸಚಿವನಾಗಿ ಸ್ಪೀಕರ್ ಸೂಚನೆ ಮೇರೆಗೆ ಸದನಕ್ಕೆ ಮಾಹಿತಿ ನೀಡುವುದು ನನ್ನ ಜವಾಬ್ದಾರಿ. ಬೇರೆಯವರ ಮೇಲೆ ನಡೆಸಿದಂತೆ ನಿಮ್ಮ ಪಾಂಡಿತ್ಯ ನನ್ನ ಮೇಲೆ ನಡೆಯಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಈ ಸಂದರ್ಭ ಆಡಳಿತ ಪಕ್ಷದ ಸದಸ್ಯರು ಎಂ.ಬಿ.ಪಾಟೀಲ್ ಬೆಂಬಲಕ್ಕೆ ನಿಂತರು. ಬಿಜೆಪಿಯ ಸುರೇಶ್ ಕುಮಾರ್ ಮಾಧುಸ್ವಾಮಿ ಬೆಂಬಲಕ್ಕೆ ಬಂದರು. ಮಾತಿನ ಚಕಮಕಿ ನಡೆಯಿತು. ಸ್ಪೀಕರ್ ಮಧ್ಯೆ ಪ್ರವೇಶಿಸಿ ಗೊಂದಲಕ್ಕೆ ತೆರೆ ಎಳೆದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar; ಬಿರುಗಾಳಿ ಸಹಿತ ಭಾರಿ ಮಳೆ :ಸಿಡಿಲು ಬಡಿದು ರೈತ ಸಾವು
CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ
ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ
Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್ರಿಂದ ಪರಿಶೀಲನೆ
Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ
MUST WATCH
ಹೊಸ ಸೇರ್ಪಡೆ
Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮನೆ ರತ್ನಾಕರ್
BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ
Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!
Bidar; ಬಿರುಗಾಳಿ ಸಹಿತ ಭಾರಿ ಮಳೆ :ಸಿಡಿಲು ಬಡಿದು ರೈತ ಸಾವು
Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್