ಡ್ರಗ್ಸ್ ಮಾಫಿಯಾದಲ್ಲಿ ರಾಜಕಾರಣಿಗಳ ಮಕ್ಕಳಿದ್ದರೂ ಬೇಧಭಾವ ತೋರಿಸಬಾರದು: ಎಂ ಬಿ ಪಾಟೀಲ್
Team Udayavani, Sep 4, 2020, 1:21 PM IST
ಬೆಂಗಳೂರು: ಮಾದಕ ವಸ್ತು ಪೂರೈಕೆ ಮತ್ತು ಸೇವನೆ ಪ್ರಕರಣದಲ್ಲಿ ರಾಜಕಾರಣಿಗಳ ಮಕ್ಕಳು, ಶ್ರೀಮಂತರು ಇರಬಹುದು. ಹಾಗಂತ ಅವರಿಗೇನು ವಿಶೇಷ ರಿಯಾಯತಿ ಇದೆಯಾ. ಕಾನೂನು ಎಲ್ಲರಿಗೂ ಒಂದೇ. ಯಾರೇ ಇರಲಿ ಕ್ರಮ ಅನಿವಾರ್ಯವಾಗಬೇಕು. ಅವರು, ಇವರು ಎಂದು ಯಾವುದೇ ಬೇಧಭಾವ ಕೊಡಬಾರದು ಎಂದು ಮಾಜಿ ಗೃಹ ಸಚಿವ ಎಂ ಬಿ ಪಾಟೀಲ್ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾರ್ಕೋಟಿಕ್ಸ್ ಬಗ್ಗೆ ನಾನು ಹಲವು ಸಭೆ ನಡೆಸಿದ್ದೆ. ಹಿಂದೆ ಗೃಹ ಸಚಿವನಾಗಿದ್ದಾಗ ಅಧಿಕಾರಿಗಳ ಜೊತೆ ಸಭೆ ನಡೆಸಿದ್ದೆವು. ಈ ವಿಚಾರದಲ್ಲಿ ಕೇಂದ್ರ ಸರ್ಕಾರದ ಪಾತ್ರ ಕೂಡ ಮಹತ್ವ ಎಂದರು.
ಎಲ್ ಎಸ್ ಡಿ ಸೇರಿ ಸಿಂಥೆಟಿಕ್ ಡ್ರಗ್ಸ್ ಬಹಳ ಅಪಾಯಕಾರಿ. ಇವೆಲ್ಲವೂ ಬೇರೆ ರಾಷ್ಟ್ರಗಳಿಂದಲೇ ಬರುತ್ತವೆ. ಯಾವ ರೂಟ್ ನಿಂದ ಪೂರೈಕೆ ಮಾಡುತ್ತಾರೆ ಎನ್ನುವುದನ್ನು ಗಮನಿಸಬೇಕು. ನಮ್ಮ ಸರ್ಕಾರದ ಸಮಯದಲ್ಲಿ ಹೆಚ್ಚಿನ ಒತ್ತು ನೀಡಿದ್ದೆವು. ಅದರಲ್ಲೂ ಮಕ್ಕಳ ವಿಚಾರದಲ್ಲಿ ಹೆಚ್ಚು ಗಮನ ಹರಿಸಿದ್ದೆವು ಎಂದರು.
ಇದನ್ನೂ ಓದಿ: ಡ್ರಗ್ಸ್ ಜಾಲ: 25 ಸಾವಿರ ಸಂಬಳದ ರವಿಶಂಕರ್ ರಾಗಿಣಿಗಾಗಿ ದಿನಕ್ಕೆ ಎಷ್ಟು ಖರ್ಚು ಮಾಡ್ತಿದ್ದ ?
ಡ್ರಗ್ಸ್ ಎಲ್ಲಿಂದ ಬರುತ್ತದೆ ಹೇಗೆ ಬರುತ್ತದೆ ಎಂದು ನಾರ್ಕೋಟಿಕ್ಸ್ ವಿಂಗ್ ಗೆ ಮಾಹಿತಿ ಇರುತ್ತದೆ. ಆದರೆ ಎಲ್ಲಿ ಮಾರಾಟ ಎನ್ನೋದು ಸ್ಥಳೀಯ ಪೊಲೀಸರಿಗೆ ಗೊತ್ತಿರುತ್ತದೆ. ಹೀಗಾಗಿ ಎರಡೂ ಕಡೆ ಹೆಚ್ಚು ಗಮನಹರಿಸಿದ್ದೆವು. ಇವತ್ತು ಆನ್ ಲೈನ್ ನಲ್ಲೂ ಡ್ರಗ್ಸ್ ಮಾರಾಟ ನಡೆಯುತ್ತಿದೆ. ಸೈಬರ್ ಕ್ರೈಂ ಕೂಡ ಇದರ ಬಗ್ಗೆ ಗಮನಹರಿಸಬೇಕು. ಇದರ ಕಡಿವಾಣಕ್ಕೆ ಎಲ್ಲರೂ ಕೈಜೋಡಿಸಬೇಕು ಎಂದರು.
ಇದನ್ನೂ ಓದಿ: ಮದುವೆ ನಿಶ್ಚಯವಾಗಿದ್ದ ಯುವತಿ ಮತ್ತೋರ್ವನೊಂದಿಗೆ ನಾಪತ್ತೆ: ಆಘಾತದಿಂದ ತಂಗಿ ಸಾವು
ನಮ್ಮ ಸರ್ಕಾರದ ಸಮಯದಲ್ಲಿ ಸಿನಿಮಾ ಇಂಡಸ್ಟ್ರಿ ಬಗ್ಗೆ ದೂರು ಬಂದಿರಲಿಲ್ಲ. ಆದರೆ ಸಿನಿಮಾ, ಮಾಡೆಲ್ ಇಂಡಸ್ಟ್ರಿಯಲ್ಲಿ ಸ್ವಲ್ಪ ಕಾಮನ್. ಇದಕ್ಕೆ ಸರ್ಕಾರ ಕಡಿವಾಣ ಹಾಕಬೇಕು ಎಂದರು.
Ad
ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ, ಜಯನಗರ ಬೆಂಗಳೂರು, ಮೋ- 8884889444
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ದೆಹಲಿಯಲ್ಲಿ ರೈತರ ಹೆಸರಿನಲ್ಲಿ ಗಲಭೆ ನಡೆಸಿದ್ದು ಅಕ್ಷಮ್ಯ: ಡಿಸಿಎಂ ಕಟು ಟೀಕೆ
ರೈತರ ಹೆಸರಿನಲ್ಲಿ ಗೂಂಡಾಗಿರಿ: ನಳಿನ್ಕುಮಾರ್ ಕಟೀಲ್ ಖಂಡನೆ
ರೈತರ ಅನ್ನ ತಿಂದು ದ್ರೋಹ ಬಗೆಯಬೇಡಿ : ಕೋಡಿಹಳ್ಳಿ ಚಂದ್ರಶೇಖರ್
ಜೆಡಿಎಸ್ ಪರಿಷತ್ ಸದಸ್ಯರ ಸಭೆ ಮುಕ್ತಾಯ:ಸಭಾಪತಿ ಸ್ಥಾನಕ್ಕೆ ಬಸವರಾಜ್ ಹೊರಟ್ಟಿ ಹೆಸರು ಅಂತಿಮ
ರೈತರೇ, ಕಾಂಗ್ರೆಸ್ ನಿಮ್ಮ ಹೆಗಲ ಮೇಲೆ ಬಂದೂಕಿಟ್ಟು ಗುಂಡು ಹಾರಿಸುತ್ತಿದೆ: ಶ್ರೀರಾಮುಲು