ಮಾಪನ ಇಲಾಖೆಗೆ ಇಲ್ಲ ಕಾನೂನು ಬಲ: ತೂಕ, ಅಳತೆ ವಂಚನೆ; ಕ್ರಮ ದಂಡಕ್ಕಷ್ಟೇ ಸೀಮಿತ


Team Udayavani, Aug 17, 2022, 7:15 AM IST

thumb 2 tuka

ಬೆಂಗಳೂರು: ತೂಕ ಮತ್ತು ಅಳತೆಯಲ್ಲಿ ಗ್ರಾಹಕರಿಗೆ ಮೋಸ ಮಾಡುವ ವ್ಯಾಪಾರಿಗಳ ವಿರುದ್ಧ ಕ್ರಮ ಕೈಗೊಳ್ಳಲು ಕಾನೂನು ಮತ್ತು ಮಾಪನ ಶಾಸ್ತ್ರ ಇಲಾಖೆಯಲ್ಲಾಗಲೀ ನಗರ ಸ್ಥಳೀಯ ಸಂಸ್ಥೆಗಳಲ್ಲಾಗಲೀ ಕಠಿನ ನಿಯಮ ಇಲ್ಲ. ಹೀಗಾಗಿ ವಂಚನೆ ಎಗ್ಗಿಲ್ಲದೆ ನಡೆಯುತ್ತಿದೆ.

ಸ್ಟೀಲ್‌, ಕಬ್ಬಿಣ, ಪೆಟ್ರೋಲ್‌, ರಸಗೊಬ್ಬರ; ಅಕ್ಕಿ, ಸಕ್ಕರೆ, ಬೇಳೆ ಯಂತಹ ದಿನಸಿ ಸಾಮಗ್ರಿಗಳ ಸಹಿತ ದಿನನಿತ್ಯದ ಬಳಕೆ ವಸ್ತುಗಳ ಮಾರಾಟದಲ್ಲಿ ಅತೀ ಹೆಚ್ಚು ತೂಕ -ಅಳತೆ ಮೋಸ ಪ್ರಕರಣ ವರದಿ ಯಾಗುತ್ತಿವೆ. ಮೂರೂವರೆ ವರ್ಷ ಗಳಲ್ಲಿ ಇಲಾಖೆ ರಾಜ್ಯದ 2,58,378 ಕಡೆ ದಾಳಿ ನಡೆಸಿ ವಂಚಕ ವ್ಯಾಪಾರಿಗಳ ವಿರುದ್ಧ 1,04,710 ಪ್ರಕರಣ ದಾಖಲಿಸಿ, 34,52,92,530 ರೂ. ದಂಡ ಸಂಗ್ರಹಿಸಿದೆ.

ಅನಂತರ ಯಾವುದೇ ಕಠಿನ ಕ್ರಮ ಆಗಿಲ್ಲ.ಕಾನೂನು ಮತ್ತು ಮಾಪನ ಶಾಸ್ತ್ರ ಇಲಾಖೆ ದಂಡ ಹಾಕಿ ಕೈ ತೊಳೆದುಕೊಳ್ಳುತ್ತಿದೆ. ವಂಚಕ ಅಂಗಡಿ ಅಥವಾ ಮಳಿಗೆಯ ವ್ಯಾಪಾರ ಪರವಾನಿಗೆ ರದ್ದುಪಡಿಸುವ ಅಧಿಕಾರ ಇಲಾಖೆಗಿಲ್ಲ. ಇದನ್ನು ನಗರ ಸ್ಥಳೀಯ ಸಂಸ್ಥೆಗಳು ಮಾಡಬೇಕು. ಆದರೆ ಶೇ. 50ಕ್ಕಿಂತ ಹೆಚ್ಚು ಮಂದಿ ವ್ಯಾಪಾರ ಪರವಾನಿಗೆ ಇಲ್ಲದೆಯೇ ವಹಿವಾಟು ನಡೆಸುತ್ತಿದ್ದಾರೆ. ಹೀಗಾಗಿ ಅವರು ಸಿಕ್ಕಿ ಹಾಕಿಕೊಂಡರೂ ದಂಡ ಬಿಟ್ಟು ಯಾವುದೇ ಕ್ರಮ ಕೈಗೊಳ್ಳಲು ಆಗುತ್ತಿಲ್ಲ.

ವಂಚನೆಗೆ ಆರೋಪ ಕೇಳಿ ಬಂದ ಕೂಡಲೇ ಅಂಗಡಿ ಅಥವಾ ಮಳಿಗೆ, ಮಾಲ್‌ ಮೇಲೆ ಅಧಿಕಾರಿಗಳು ದಾಳಿ ನಡೆಸಿ ನೋಟಿಸ್‌ ನೀಡುತ್ತಾರೆ. ನೋಟಿಸ್‌ ಪಡೆದ ಕೂಡಲೇ ದಂಡ ಕಟ್ಟುವ ವ್ಯಾಪಾರಿಗಳು ಮತ್ತೆ ಹಳೆಯ ಚಾಳಿ ಮುಂದುವರಿಸುತ್ತಾರೆ.

ದಾಳಿ ನಡೆಸಿದ 6 ತಿಂಗಳುಗಳೊಳಗೆ ವ್ಯಾಪಾರಿಗಳು ದಂಡ ಪಾವತಿಸದಿದ್ದರೆ ಇಲಾಖೆಯು ಕೋರ್ಟ್‌ ಗಮನಕ್ಕೆ ತರುತ್ತದೆ. ಕೋರ್ಟ್‌ನಲ್ಲಿ ಬಲವಾದ ಸಾಕ್ಷ್ಯಾಧಾರಗಳು ಇಲ್ಲದಿದ್ದರೆ ಪ್ರಕರಣ ಖುಲಾಸೆಯಾಗುತ್ತದೆ.

ವಂಚನೆ ಹೇಗೆ?
ಕೆಲವು ಕಂಪೆನಿಗಳು ಮತ್ತು ಅಂಗಡಿ ಮಾಲಕರು ತೂಕ ಯಂತ್ರಗಳನ್ನು ತಾಂತ್ರಿಕವಾಗಿ ಬದಲಾಯಿಸುತ್ತಾರೆ. ಇದರಿಂದ ತೂಕದಲ್ಲಿ ಭಾರೀ ವ್ಯತ್ಯಾಸ ಕಂಡು ಬರುತ್ತದೆ. ಆದರೆ ಇದು ಗ್ರಾಹಕರು ಗಮನಕ್ಕೆ ಬರುವುದು ಕಡಿಮೆ ಎಂದು ಮಾಪನ ಶಾಸ್ತ್ರ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

ಆನ್‌ಲೈನ್‌ ದೂರು ನೀಡಿ
ವ್ಯಾಪಾರಿಗಳಿಂದ ವಂಚನೆ ಗಮನಕ್ಕೆ ಬಂದರೆ ಕಾನೂನು ಮಾಪನ ಶಾಸ್ತ್ರ ಇಲಾಖೆಯ
http://www.emapan.karnataka.gov.in ಗೆ ಭೇಟಿ ನೀಡಿ ಆನ್‌ಲೈನ್‌ ದೂರು ನೀಡಲು ಅವಕಾಶಗಳಿವೆ. ಕೂಡಲೇ ಅಧಿಕಾರಿಗಳು ಆಯಾ ಜಿಲ್ಲೆಗಳಲ್ಲಿರುವ ಅಂಗಡಿಗೆ ದಾಳಿ ನಡೆಸಿ, ಪರಿಶೀಲನೆ ನಡೆಸುತ್ತಾರೆ.

ತೂಕ -ಅಳತೆ ಸರಿಯಾಗಿದೆಯೇ ಎಂಬುದನ್ನು ಖಾತರಿ ಪಡಿಸಿಕೊಂಡು ಸಾಮಗ್ರಿ ಗಳನ್ನು ಖರೀದಿಸಿದರೆ ವಂಚನೆಗಳಿಗೆ ಕಡಿವಾಣ ಹಾಕಬಹುದು.
– ಡಾ| ರಾಜೇಂದ್ರ ಪ್ರಸಾದ್‌,
ಕಾನೂನು ಮಾಪನ ಶಾಸ್ತ್ರ ನಿಯಂತ್ರಕರು

- ಅವಿನಾಶ್‌ ಮೂಡಂಬಿಕಾನ

ಟಾಪ್ ನ್ಯೂಸ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

1-aaaaaa

BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!

Exam

CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Minchu

Bidar; ಬಿರುಗಾಳಿ‌ ಸಹಿತ ಭಾರಿ ಮಳೆ :ಸಿಡಿಲು ಬಡಿದು‌ ರೈತ ಸಾವು

Exam

CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

1-aaaaaa

BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!

Minchu

Bidar; ಬಿರುಗಾಳಿ‌ ಸಹಿತ ಭಾರಿ ಮಳೆ :ಸಿಡಿಲು ಬಡಿದು‌ ರೈತ ಸಾವು

1-wewqewqe

Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.