ವೈದ್ಯಕೀಯ ಕೋರ್ಸ್ ಶುಲ್ಕ ಹೆಚ್ಚಳ: ಮಾಹಿತಿ ಕೇಳಿದ ಹೈಕೋರ್ಟ್
Team Udayavani, Jun 16, 2020, 7:35 AM IST
ಬೆಂಗಳೂರು: ವೈದ್ಯಕೀಯ ಹಾಗೂ ದಂತ ವೈದ್ಯಕೀಯ ಸ್ನಾತಕೋತ್ತರ ಕೋರ್ಸ್ಗಳ ಶುಲ್ಕ ಹೆಚ್ಚಳ ಮಾಡಿರುವ ಬಗ್ಗೆ ಮಾಹಿತಿ ಒದಗಿಸುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶನ ನೀಡಿದೆ. ಈ ಕುರಿತು ಹುಬ್ಬಳ್ಳಿಯ ದಿವಂಗತ ಜಿ.ಬಿ.ಕುಲಕರ್ಣಿ ಸ್ಮಾರಕ ಕಾನೂನು ಸಂಸ್ಥೆಯ ಅಧ್ಯಕ್ಷ ಡಾ.ವಿನೋದ್ ಕುಲಕರ್ಣಿ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಮುಖ್ಯ ನ್ಯಾಯ ಮೂರ್ತಿ ಎ.ಎಸ್.ಓಕ್ ಹಾಗೂ ನ್ಯಾ.ನಟ ರಾಜ್ ರಂಗಸ್ವಾಮಿ ಅವರಿದ್ದ ವಿಭಾಗೀಯ ನ್ಯಾಯಪೀಠ ವಿಚಾರಣೆ ನಡೆಸಿತು.
ಈ ವೇಳೆ, ಅರ್ಜಿದಾರರು ನ್ಯಾಯಾಲಯಕ್ಕೆ ಸಲ್ಲಿಸಿರುವ ಮಾಹಿತಿ ಯಂತೆ 2020- 21ನೇ ಸಾಲಿಗೆ ಖಾಸಗಿ ವೈದ್ಯಕೀಯ ಕಾಲೇಜುಗಳ ವೈದ್ಯ, ದಂತ ವೈದ್ಯ ಸ್ನಾತಕೋತ್ತರ ಕೋರ್ಸ್ ಶುಲ್ಕ ಹೆಚ್ಚಳ ನಿಜವೇ ಎಂದು ಸರ್ಕಾರದ ಪರ ವಕೀಲರನ್ನು ನ್ಯಾಯಪೀಠ ಪ್ರಶ್ನಿ ಸಿತು. ಅದಕ್ಕೆ ಈ ಬಗ್ಗೆ ಸರ್ಕಾರದಿಂದ ಮಾಹಿತಿ ಪಡೆದು ಉತ್ತರಿಸುವುದಾಗಿ ವಕೀಲರು ತಿಳಿಸಿದರು.
ಆಗ, ಶುಲ್ಕ ಹೆಚ್ಚಳದ ಮಾಹಿತಿ ಸಲ್ಲಿಸಲು ವಕೀಲರಿಗೆ ನಿರ್ದೇಶನ ನೀಡಿದ ನ್ಯಾಯಪೀಠ ವಿಚಾರಣೆ ಮುಂದೂಡಿತು. ವೈದ್ಯಕೀಯ ಸ್ನಾತ ಕೋತ್ತರ ಕೋರ್ಸ್ಗಳ ಶುಲ್ಕವನ್ನು ಏಕಾಏಕಿ ಶೇ.30 ಹೆಚ್ಚಳ ಮಾಡಿರುವ ಸರ್ಕಾರದ ಆದೇಶ ರದ್ದುಪಡಿಸಬೇಕು. ಶುಲ್ಕ ನಿಯಂತ್ರಣ ಸಮಿತಿಗೆ ತಕ್ಷಣ ಅಧ್ಯಕ್ಷರನ್ನು ನೇಮಕ ಮಾಡಲು ಸರ್ಕಾರಕ್ಕೆ ನಿರ್ದೇಶನ ನೀಡಬೇಕು ಎಂದು ಅರ್ಜಿದಾರರು ಮನವಿ ಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
MUST WATCH
ಹೊಸ ಸೇರ್ಪಡೆ
Village Life: ಅಪರೂಪವೆನಿಸುತ್ತಿರುವ ಹಳ್ಳಿಗಾಡಿನ ಜೀವನ
ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್ಗೆ ಸೂಚನೆ
IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ
LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ