ಸೋಂಕು ಪೀಡಿತರ ಸೇವೆಗೆ ವೈದ್ಯ ವಿದ್ಯಾರ್ಥಿಗಳು!
Team Udayavani, Apr 30, 2021, 6:55 AM IST
ಬೆಂಗಳೂರು: ಕೋವಿಡ್ ಪೀಡಿತರ ಚಿಕಿತ್ಸೆ, ಆರೈಕೆ ಮತ್ತು ಆಪ್ತ ಸಮಾಲೋಚನೆಗಾಗಿ 12 ಸಾವಿರ ವೈದ್ಯ ವಿದ್ಯಾರ್ಥಿಗಳನ್ನು ಬಳಸಿಕೊಳ್ಳಲು ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿ.ವಿ. ಯೋಜನೆ ಸಿದ್ಧಪಡಿಸಿದೆ.
ವೈದ್ಯಕೀಯ, ದಂತ ವೈದ್ಯಕೀಯ ಪದವಿ ಹಾಗೂ ಸ್ನಾತಕೋತ್ತರ ಪದವಿ ಮತ್ತು ಆಯುಷ್ ಇಲಾಖೆಯ ಅಧೀನದಲ್ಲಿ ಬರುವ ಆಯುರ್ವೇದ ವಿದ್ಯಾರ್ಥಿಗಳನ್ನು ಈ ಕಾರ್ಯದಲ್ಲಿ ತೊಡಗಿಸಿಕೊಳ್ಳಲು ವಿ.ವಿ. ಮುಂದಾಗಿದೆ.
ಬಹುತೇಕರು ಹೋಂ ಐಸೋಲೇಶನ್, ಕ್ವಾರಂಟೈನ್ ಆಗುತ್ತಿದ್ದಾರೆ. ಇಂಥವರಲ್ಲಿ ಉದ್ಭವಿಸಬಹುದಾದ ಸಂದೇಹಗಳಿಗೆ ಪರಿಹಾರ ನೀಡಲು ಮತ್ತು ಕೋವಿಡ್ ಬಗ್ಗೆ ಅಗತ್ಯ ಸಲಹೆ, ಮಾರ್ಗದರ್ಶನ, ಆಪ್ತ ಸಮಾಲೋಚನೆ ನೀಡಲು ವೈದ್ಯ ವಿದ್ಯಾರ್ಥಿಗಳನ್ನು ಬಳಸಿಕೊಳ್ಳಲಾಗುತ್ತಿದೆ. ಇದಕ್ಕಾಗಿ ಪ್ರತ್ಯೇಕ ತರಬೇತಿ ನೀಡಲಾಗುತ್ತದೆ. ಬೆಂಗಳೂರಿನಲ್ಲಿ ಈಗಾಗಲೇ ಕಾರ್ಯ ಆರಂಭಿಸಿದ್ದೇವೆ ಎಂದು ವಿ.ವಿ. ಕುಲಪತಿ ಡಾ| ಎಸ್. ಸಚ್ಚಿದಾನಂದ ಅವರು “ಉದಯವಾಣಿ’ಗೆ ಮಾಹಿತಿ ನೀಡಿದ್ದಾರೆ.
ಸಾರ್ವಜನಿಕರಿಗೂ ತರಬೇತಿ :
ವಾರಕ್ಕೆ 2-3 ದಿನ ಆನ್ಲೈನ್ ಮೂಲಕ ವೈದ್ಯರಿಗೆ, ವೈದ್ಯಕೀಯ, ಅರೆವೈದ್ಯಕೀಯ ಸಿಬಂದಿ ಸಹಿತ ಆರೋಗ್ಯ ಕ್ಷೇತ್ರದಲ್ಲಿ ಸೇವೆ ಸಲ್ಲಿಸುತ್ತಿರುವವರಿಗೆ, ಪೊಲೀಸರಿಗೆ ತರಬೇತಿ ನೀಡಲು ರೀತಿಯ ಸಿದ್ಧತೆ ಮಾಡಿದ್ದೇವೆ. ಹಾಗೆಯೇ ಸಾರ್ವಜನಿಕರಿಗೂ ತಜ್ಞರ ಮೂಲಕ ಆನ್ಲೈನ್ ತರಬೇತಿ ನೀಡಲು ತಯಾರಿ ನಡೆಸುತ್ತಿದ್ದೇವೆ. ಇವರು ಕೂಡ ಸೋಂಕುಪೀಡಿತರ ಆರೈಕೆಯಲ್ಲಿ ಸೇರಿಕೊಳ್ಳಬಹುದು ಎಂದು ವಿ.ವಿ.ಯ ಹಿರಿಯ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.
ಶೇ. 80ರಿಂದ ಶೇ. 85ರಷ್ಟು ಮಂದಿಗೆ ಸೋಂಕು ದೃಢಪಟ್ಟ ಸಂದರ್ಭದಲ್ಲಿ ಎಲ್ಲರಿಗೂ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡುವುದು ಕಷ್ಟ. ಹೋಂ ಐಸೋಲೇಶನ್, ಕ್ವಾರಂಟೈನ್ ಅತೀ ಮುಖ್ಯ. ಇಂಥ ಸಂದರ್ಭದಲ್ಲಿ ಔಷಧ ಮತ್ತು ಆರೈಕೆಯ ಬಗ್ಗೆ ಅಗತ್ಯ ಸಲಹೆ, ಮಾರ್ಗ ದರ್ಶನ ನೀಡಬೇಕಾಗುತ್ತದೆ. ಈ ನಿಟ್ಟಿನಲ್ಲಿ ವೈದ್ಯ ವಿದ್ಯಾರ್ಥಿ ಗಳನ್ನು ಪರಿಣಾಮಕಾರಿಯಾಗಿ ಬಳಸಿಕೊಳ್ಳಲು ಸರಕಾರದೊಂದಿಗೂ ಮಾತುಕತೆ ನಡೆಸಿದ್ದೇವೆ. –ಡಾ| ಎಸ್. ಸಚ್ಚಿದಾನಂದ, ಕುಲಪತಿ, ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿ.ವಿ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ
Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್
Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ
Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ
State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ
MUST WATCH
ಹೊಸ ಸೇರ್ಪಡೆ
Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ
Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು
Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ
Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್
IPL; ಮೆಕ್ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ