ರಾಜ್ಯದ ಹಿತ ಕಾಪಾಡಲು 15 ದಿನಕ್ಕೊಮ್ಮೆ ಸಭೆ: ಜೋಶಿ


Team Udayavani, Jun 2, 2019, 3:04 AM IST

hadinydu

ಬೆಂಗಳೂರು: ಕರ್ನಾಟಕದ ನಾಲ್ಕು ಸಚಿವರು ಪ್ರತಿ ಹದಿನೈದು ದಿನಕ್ಕೊಮ್ಮೆ ದೆಹಲಿಯಲ್ಲಿ ಸಭೆ ಸೇರಿ, ರಾಜ್ಯದ ಹಿತಾಸಕ್ತಿ ಕಾಪಾಡುವ ಕೆಲಸ ಮಾಡಲಿದ್ದೇವೆ ಎಂದು ಸಂಸದೀಯ ವ್ಯವಹಾರ, ಗಣಿ ಮತ್ತು ಕಲ್ಲಿದ್ದಲು ಸಚಿವ ಪ್ರಹ್ಲಾದ್‌ ಜೋಶಿ ತಿಳಿಸಿದ್ದಾರೆ.

ಕೇಂದ್ರ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ನಂತರ ಮೊದಲ ಬಾರಿಗೆ ರಾಜ್ಯ ಬಿಜೆಪಿ ಕಚೇರಿಗೆ ಭೇಟಿ ನೀಡಿ ಸುದ್ದಿಗೋಷ್ಠಿ ನಡೆಸಿದ ಅವರು, ಕರ್ನಾಟಕದಿಂದ ಡಿ.ವಿ.ಸದಾನಂದ ಗೌಡ, ನಿರ್ಮಲಾ ಸೀತಾರಾಮನ್‌ ಹಾಗೂ ಸುರೇಶ್‌ ಅಂಗಡಿ ಸೇರಿ ನಾಲ್ವರು ಸಚಿವರಿದ್ದೇವೆ. ನಾವು ನಾಲ್ವರೂ ಪ್ರತಿ 15 ದಿನಕ್ಕೊಮ್ಮೆ ದೆಹಲಿಯಲ್ಲಿ ಸಭೆ ಸೇರಲಿದ್ದೇವೆ.

ಕರ್ನಾಟಕಕ್ಕೆ ಸಂಬಂಧಿಸಿದ ವಿಷಯಗಳ ಬಗ್ಗೆಯೇ ಚರ್ಚೆ ನಡೆಸಲಿದ್ದೇವೆ. ಕೇಂದ್ರದಿಂದ ಕರ್ನಾಟಕಕ್ಕೆ ಆಗಬೇಕಿರುವ ಕಾರ್ಯಗಳು, ಯೋಜನೆಯ ಅನುಷ್ಠಾನ ಮತ್ತು ಈ ಹಿಂದೆ ಆಗಿರುವ ಕಾರ್ಯಗಳ ಫಾಲೋಅಪ್‌ ಇತ್ಯಾದಿ ಮಾಡಲಿದ್ದೇವೆ ಎಂದು ಹೇಳಿದರು.

ಮಹದಾಯಿ ಬಗ್ಗೆ ನಾವು ಸ್ಪಷ್ಟವಿದ್ದೇವೆ. ಮಹದಾಯಿ ಕುರಿತಂತೆ ಗೋವಾ ಮತ್ತು ಕರ್ನಾಟಕ ಸರ್ಕಾರದಿಂದ ಸ್ಪಷ್ಟನೆ ಕೇಳಲಾಗಿದೆ. ಪ್ರಕರಣವು ಮಹದಾಯಿ ನ್ಯಾಯಾಧೀಕರಣದ ಮುಂದಿದೆ. ಹೀಗಾಗಿ ಸರ್ಕಾರ ಯಾವುದೇ ನಿರ್ಧಾರ ತೆಗೆದುಕೊಳ್ಳಲು ಸಾಧ್ಯವಿಲ್ಲ. ರಾಜ್ಯ ಸರ್ಕಾರ ಕಾನೂನು ತಜ್ಞರಿಂದ ಮಾಹಿತಿ ಪಡೆದು, ಸರ್ವಪಕ್ಷದ ಸಭೆ ಕರೆದರೆ ನಾವು ಅದರಲ್ಲಿ ಭಾಗವಹಿಸಲಿದ್ದೇವೆ.

ಕಾನೂನಿನ ಅಂಶಗಳನ್ನು ಸೂಕ್ಷ್ಮವಾಗಿ ಗಮನಿಸಿ ತೀರ್ಮಾನ ತೆಗೆದುಕೊಳ್ಳಬೇಕಾಗುತ್ತದೆ. ಏನು ಮಾಡಬೇಕು ಎಂಬುದನ್ನು ಕಾನೂನು ತಜ್ಞರ ಮೂಲಕವೇ ರಾಜ್ಯ ಸರ್ಕಾರ ಹೇಳಿಸಲಿ ಎಂದರು.

ಮಹದಾಯಿ ಸಮಸ್ಯೆ ಆರಂಭವಾಗಿದ್ದು ಮೋದಿ ಪ್ರಧಾನಿಯಾದ ನಂತರವಲ್ಲ ಅಥವಾ ಜೋಶಿ ಸಚಿವನಾದ ನಂತರವೂ ಅಲ್ಲ. ಇದಕ್ಕೆ ರಾಜಕೀಯ ಪರಿಹಾರಕ್ಕಿಂತ ನ್ಯಾಯಾಲಯದಿಂದ ಸ್ಪಷ್ಟ ಆದೇಶ ಬರಬೇಕು. ಇದು ಭಾವನಾತ್ಮಕ ವಿಚಾರ ಎಂಬುದು ನಮಗೂ ತಿಳಿದಿದೆ ಎಂದು ಹೇಳಿದರು.

ಜುಲೈ 5ಕ್ಕೆ ಕೇಂದ್ರ ಬಜೆಟ್‌: ಜೂನ್‌ 17ರಿಂದ 17ನೇ ಲೋಕಸಭೆಯ ಮೊದಲ ಅಧಿವೇಶನ ಆರಂಭವಾಗಲಿದೆ. 17 ಮತ್ತು 18ರಂದು ಸದಸ್ಯರಿಗೆ ಪ್ರಮಾಣ ವಚನ ಬೋಧನೆ, 19ಕ್ಕೆ ಸ್ಪೀಕರ್‌ ಚುನಾವಣೆ, 20ಕ್ಕೆ ರಾಷ್ಟ್ರಪತಿಗಳ ಭಾಷಣ, ಇದಾದ ಮೂರು ದಿನಗಳ ನಂತರ ವಂದನಾ ನಿರ್ಣಯದ ಮೇಲೆ ಚರ್ಚೆ. 23ರಿಂದ ಸುಗ್ರಿವಾಜ್ಞೆ ಮೂಲಕ ಆಗಬೇಕಿರುವ ಮಸೂದೆಗಳ ಮಂಡನೆ ನಡೆಯಲಿದೆ.

ರಾಜ್ಯಸಭೆಯಲ್ಲಿ ಅಂಗೀಕಾರಗೊಂಡಿರುವ ಮಸೂದೆಯ ಮಂಡನೆಯೂ ಆಗಲಿದೆ. ಜುಲೈ 4ಕ್ಕೆ ಆರ್ಥಿಕ ಸಮೀಕ್ಷೆ ಮಂಡಿಸಲಾಗುತ್ತದೆ. ಜು.5ಕ್ಕೆ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ಪೂರ್ಣ ಪ್ರಮಾಣದ ಬಜೆಟ್‌ ಮಂಡಿಸಲಿದ್ದಾರೆ. ಜುಲೈ 26ರ ವರೆಗೂ ಅಧಿವೇಶನ ನಡೆಯಲಿದೆ ಎಂದು ಮಾಹಿತಿ ನೀಡಿದರು.

ಕೇಂದ್ರ ಸರ್ಕಾರ ಯಾವುದೇ ವಿಷಯದ ಚರ್ಚೆಗೆ ಸಿದ್ಧವಿದೆ. ಲೋಕಸಭೆಯಲ್ಲಿ ಚರ್ಚೆ ಆಗಬೇಕು. ಅಡ್ಡಿ ಇರಬಾರದು. ಆಡಳಿತ ಪಕ್ಷ ಹಾಗೂ ವಿರೋಧ ಪಕ್ಷ ಒಂದಾಗಿ ಕೆಲಸ ಮಾಡಬೇಕು ಎಂಬುದನ್ನು ಎಲ್ಲ ವಿರೋಧ ಪಕ್ಷಕ್ಕೂ ಮನವಿ ಮಾಡಿದ್ದೇವೆ. ಇದಕ್ಕೆ ಸಂಬಂಧಿಸಿದ ಸಭೆ ಕರೆದು, ಸಹಕಾರ ಕೋರಲಿದ್ದೇವೆ.
-ಪ್ರಹ್ಲಾದ್‌ ಜೋಶಿ, ಸಂಸದೀಯ ವ್ಯವಹಾರ, ಗಣಿ ಮತ್ತು ಕಲ್ಲಿದ್ದಲು ಸಚಿವ.

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weweqwe

Globant; ಮನೆಯಿಂದಲೇ 30,000 ಮಂದಿ ಕೆಲಸ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.