ಸಿದ್ದರಾಮಯ್ಯ ನೇತೃತ್ವದಲ್ಲಿ ವಿಧಾನಸೌಧದಲ್ಲಿ ಪ್ರತಿಪಕ್ಷಗಳ ಮುಖಂಡರ ಸಭೆ
Team Udayavani, Apr 30, 2020, 3:33 PM IST
ಬೆಂಗಳೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಇಂದು ವಿಧಾನಸೌಧದಲ್ಲಿ ಪ್ರತಿಪಕ್ಷಗಳ ಮುಖಂಡರ ಸಭೆ ನಡೆಯಿತು.
ವಿಧಾನಸೌಧದ ಸಮಿತಿ ಕೊಠಡಿಯಲ್ಲಿ ಸಭೆ ನಡೆದಿದ್ದು, ಕೋವಿಡ್ -19 ನಿಯಂತ್ರಣ, ಪರಿಹಾರ ಕಾರ್ಯಕ್ರಮಗಳು, ಸರ್ಕಾರ ತೆಗೆದುಕೊಂಡಿರುವ ಕ್ರಮ, ವೈಫಲ್ಯಗಳ ಕುರಿತು ಚರ್ಚೆ ನಡೆಸಲಾಯಿತು.
ಸಭೆಯಲ್ಲಿ ಕಾಂಗ್ರೆಸ್, ಜೆಡಿಎಸ್, ಸಿಪಿಎಂ, ಸಿಪಿಐಎಂ, ರೈತ ಮುಖಂಡರು ಭಾಗಿಯಾಗಿದ್ದರು. ಪ್ರಮುಖವಾಗಿ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್, ಕಾರ್ಯಾಧ್ಯಕ್ಷರಾದ ಸಲೀಂ ಅಹ್ಮದ್, ಸತೀಶ್ ಜಾರಕಿಹೊಳಿ, ಮೇಲ್ಮನೆ ಪ್ರತಿಪಕ್ಷ ನಾಯಕ ಎಸ್.ಆರ್.ಪಾಟೀಲ್, ಜೆಡಿಎಸ್ ನ ಹೆಚ್.ಡಿ. ರೇವಣ್ಣ, ಬಂಡೆಪ್ಪ ಕಾಶೆಂಪುರ್, ವೆಂಕಟರಾವ್ ನಾಡಗೌಡ, ಕುಪೇಂದ್ರ ರೆಡ್ಡಿ, ಚೌಡರೆಡ್ಡಿ, ಜೆಡಿಯುನ ಎಂ.ಪಿ.ನಾಡಗೌಡ, ಸಿಪಿಐಎಂನ ಜಿ.ಎನ್.ನಾಗರಾಜು
ಬಸವರಾಜು, ಸಿಪಿಎಂನ ಸ್ವಾತಿ ಸುಂದರೇಶ್, ರೈತ ಮುಖಂಡರಾದ ಕುರುಬೂರು ಶಾಂತಕುಮಾರ್, ಕೋಡಿಹಳ್ಳಿ ಚಂದ್ರಶೇಖರ್, ಬಡಗಲಪುರ ನಾಗೇಂದ್ರ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ
Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್ರಿಂದ ಪರಿಶೀಲನೆ
Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ
Lok Sabha Election: ‘ಬಿವೈಆರ್ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’
ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ