ಇಂದು ಅನ್ಲಾಕ್ 3.0 ಕುರಿತು ಸಭೆ: ಮತ್ತಷ್ಟು ನಿರ್ಬಂಧ ಸಡಿಲಿಕೆ ಸಾಧ್ಯತೆ
Team Udayavani, Jul 3, 2021, 8:37 AM IST
ಬೆಂಗಳೂರು: ಕೋವಿಡ್ ಎರಡನೇ ಅಲೆ ಹಾವಳಿ ಮತ್ತಷ್ಟು ಕಡಿಮೆಯಾದ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಇನ್ನಷ್ಟು ನಿರ್ಬಂಧಗಳ ಸಡಿಲಿಕೆಗೆ ಸರ್ಕಾರ ಚಿಂತನೆ ನಡೆದಿದ್ದು, ರಾತ್ರಿ 8ರವರೆಗೆ ವ್ಯಾಪಾರ-ವಹಿವಾಟಿಗೆ ಅವಕಾಶ ನೀಡುವ ಸಾಧ್ಯತೆ ಇದೆ.
ಈ ಸಂಬಂಧ ಶನಿವಾರ ಸಂಜೆ ಸಿಎಂ ಯಡಿಯೂರಪ್ಪ ನೇತೃತ್ವದಲ್ಲಿ ಸಭೆ ನಡೆಯಲಿದೆ. ಸಚಿವರು ಮತ್ತು ಅಧಿಕಾರಿಗಳು ಭಾಗವಹಿಸಲಿದ್ದಾರೆ. ಅಲ್ಲಿ ಮೂರನೇ ಹಂತದ ಸಡಿಲಿಕೆ ಬಗ್ಗೆ ಸ್ಪಷ್ಟ ಚಿತ್ರಣ ಹೊರಬೀಳಲಿದೆ. ವ್ಯಾಪಾರ-ವಾಣಿಜ್ಯ ಚಟುವಟಿಕೆಗಳಿಗೆ ಪ್ರಸ್ತುತ ಬೆಳಗ್ಗೆ 6ರಿಂದ ಸಂಜೆ 5ರವರೆಗೆ ಅವಕಾಶಮಾಡಿಕೊಡಲಾಗಿದೆ. ಈ ಅವಧಿಯನ್ನು ರಾತ್ರಿ 8 ಗಂಟೆಯವರೆಗೆ ವಿಸ್ತರಣೆ ಜತೆಗೆ ಪ್ರಮುಖ ಮಾರುಕಟ್ಟೆಗಳಲ್ಲಿ ವ್ಯಾಪಾರ-ವಹಿವಾಟಿಗೆ ಅನುಮತಿ ನೀಡುವ ಯೋಚನೆ ಇದೆ. ಅಲ್ಲದೆ, ಈ ಬಾರಿಯ ಅನ್ ಲಾಕ್ನಲ್ಲಿ ಮದುವೆ ಸೇರಿದಂತೆ ಮತ್ತಿತರ ಸಭೆ-ಸಮಾರಂಭಗಳನ್ನು ಸಭಾಂಗಣಗಳಲ್ಲಿ ಸೀಮಿತ ಜನರ ಉಪಸ್ಥಿತಿಯೊಂದಿಗೆ ಅನುಮತಿ ನೀಡಲು ಉದ್ದೇಶಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.
ಇದನ್ನೂ ಓದಿ:ಗಮನ ಸೆಳೆದ ಗ್ರಾಮ ಭಾರತ : ಗರಿಗೆದರಿದ ದೇವರಬಾಳು-ಕಟ್ಟಿನಾಡಿಗೆ ಸಂಪರ್ಕ ಸೇತು ನಿರೀಕ್ಷೆ
ರಾಜಧಾನಿಯಲ್ಲಿ ಸಿನಿಮಾ ಮಂದಿರಗಳು, ಮಾಲ್ಗಳು, ವಾಣಿಜ್ಯ ಸಂಕಿರ್ಣಗಳು ಸ್ಥಗಿತಗೊಂಡಿವೆ. ಒಟ್ಟಾರೆ ಸಾಮರ್ಥ್ಯದಲ್ಲಿ ಶೇ.50 ಗ್ರಾಹಕರೊಂದಿಗೆ ಪುನಾರಂಭಕ್ಕೆ ಅನುಮತಿ ನೀಡುವಂತೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಮನವಿ ಮಾಡಿದೆ. ಇದಕ್ಕೂ ಗ್ರೀನ್ ಸಿಗ್ನಲ್ ನೀಡುವ ಸಾಧ್ಯತೆ ಇದೆ.
ಆದರೆ, ರಾತ್ರಿ ಕರ್ಫ್ಯೂ ಮತ್ತು ವಾರಾಂತ್ಯದ ಕರ್ಫ್ಯೂ ಮಾತ್ರ ಮುಂದುವರಿಸುವ ಚಿಂತನೆ ಇದೆ. ಹಾಗಾಗಿ, ಜನರಿಗೆ ವಾರಾಂತ್ಯದ ರಜಾ-ಮಜಾಕ್ಕೆ ಅವಕಾಶ ಕಡಿಮೆ. ಅದೇ ರೀತಿ, ಧಾರ್ಮಿಕ ಕೇಂದ್ರಗಳಲ್ಲೂ ಭಕ್ತರಿಗೆ ದರ್ಶನ ಭಾಗ್ಯ ಸಾಧ್ಯತೆ ಅನುಮಾನ ಎಂದೂ ಮೂಲಗಳು ತಿಳಿಸಿವೆ. ಎರಡನೇ ಹಂತದ ಅನ್ಲಾಕ್ ಅವಧಿಯು ಜುಲೈ 5ರಂದು ಬೆಳಿಗ್ಗೆ ಅಂತ್ಯಗೊಳ್ಳಲಿದೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Srirangapatna: ಐಸ್ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ
Ls Polls: ಕಾಂಗ್ರೆಸ್ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್
Election Commission: ಪ್ರಿಯಾಂಕ್ ಖರ್ಗೆ, ಡಿಕೆಶಿ ವಿರುದ್ಧ ಚು.ಆಯೋಗಕ್ಕೆ ಬಿಜೆಪಿ ದೂರು
Congress party: ಮಾಲೀಕಯ್ಯ ಗುತ್ತೇದಾರ್ ಇಂದು ಕಾಂಗ್ರೆಸ್ ಸೇರ್ಪಡೆ
Lok Sabha election: ಗುರುವಾರ 21.48 ಕೋ.ರೂ. ಮೌಲ್ಯದ ಚುನಾವಣ ಅಕ್ರಮ ಪತ್ತೆ
MUST WATCH
ಹೊಸ ಸೇರ್ಪಡೆ
Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ
Srirangapatna: ಐಸ್ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ
Loksabha Election; ದೇಶದಲ್ಲಿ ಹಂತ-1: ಮತ ಇಂದು
Ls Polls: ಕಾಂಗ್ರೆಸ್ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್
Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು