ಮೇಕೆದಾಟು ಯೋಜನೆಗೆ ಆಗ್ರಹಿಸಿ ಕಾಂಗ್ರೆಸ್ ಪಾದಯಾತ್ರೆ
Team Udayavani, Nov 7, 2021, 9:15 PM IST
ಬೆಂಗಳೂರು: ಕುಡಿಯುವ ನೀರು, ನೀರಾವರಿ ಹಾಗೂ ವಿದ್ಯುತ್ ಉತ್ಪಾದನೆಯ “ಮೇಕೆದಾಟು ಆಣೆಕಟ್ಟು ನಿರ್ಮಾಣ ಯೋಜನೆ’ಯನ್ನು ಆದಷ್ಟು ಬೇಗ ಜಾರಿಗೆ ತರುವಂತೆ ಆಗ್ರಹಿಸಿ ಡಿಸೆಂಬರ್ ಮೊದಲ ವಾರದಲ್ಲಿ ಕಾಂಗ್ರೆಸ್ ಪಕ್ಷದಿಂದ ಮೇಕೆದಾಟು ಇಂದ ಬೆಂಗಳೂರುವರೆಗೆ ಪಾದಯಾತ್ರೆ ನಡೆಸಲಾಗುವುದು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.
ಕೆಪಿಸಿಸಿ ಕಚೇರಿಯಲ್ಲಿ ಭಾನುವಾರ ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರೊಂದಿಗೆ ಜಂಟಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಡಿ.ಕೆ. ಶಿವಕುಮಾರ್, ರಾಜಧಾನಿ ಬೆಂಗಳೂರು ಸೇರಿದಂತೆ ಸುತ್ತಲಿನ 7 ಜಿಲ್ಲೆಗಳ ಜನತೆಗೆ ಅವಶ್ಯಕವಾಗಿ ಬೇಕಾಗಿರುವ ಮೇಕೆದಾಟು ಯೋಜನೆಗೆ ಆಗ್ರಹಿಸಿ ಪಕ್ಷದಿಂದ ಪಾದಯಾತ್ರೆ ನಡೆಸಲು ತೀರ್ಮಾನಿಸಲಾಗಿದೆ ಎಂದರು.
ನ್ಯಾಯಾಧೀಕರಣ ತೀರ್ಪು ಕೊಟ್ಟ ಬಳಿಕವೂ ರಾಜ್ಯ ಸರ್ಕಾರ ಯೋಜನೆ ಜಾರಿಗೆ ವಿಳಂಬ ಮಾಡುತ್ತಿದೆ. ಈ ಯೋಜನೆ ನಮ್ಮ ರಾಜ್ಯದ ಹಕ್ಕು. ರಾಜ್ಯ ಸರ್ಕಾರದ ಮೇಲೆ ಒತ್ತಡ ತರಲು ಪಾದಯಾತ್ರೆ ಕಾಂಗ್ರೆಸ್ ನೇತೃತ್ವದಲ್ಲಿ ನಡೆಯಲಿದೆ. ಪಕ್ಷದ ಎಲ್ಲಾ ಮುಖಂಡರು ಒಂದಾಗಿ ಪಾದಯಾತ್ರೆ ನಡೆಸಲಿದ್ದಾರೆ. ಬೇರೆ ಯಾರೂ ಬೇಕಾದರೂ ಈ ಪಾದಯಾತ್ರೆಯಲ್ಲಿ ಭಾಗವಹಿಸಬಹುದು. ಡಿಸೆಂಬರ್ ಮೊದಲ ಅಥವಾ ಎರಡನೇ ವಾರದ ಬಗ್ಗೆ ಚರ್ಚೆ ನಡೆಯುತ್ತಿದೆ. ಬಹುತೇಕ ಮೊದಲ ವಾರದಲ್ಲೇ ಪಾದಯಾತ್ರೆ ನಡೆಯಲಿದೆ. ಮೇಕುದಾಟಿನಿಂದ ಹೊರಟು ಬೆಂಗಳೂರಿಗೆ ತಲುಪಲು ಎಷ್ಟು ದಿನ ಬೇಕಾಗುತ್ತದೊ ಅಷ್ಟು ದಿನ ಪಾದಯಾತ್ರೆ ನಡೆಯಲಿದೆ. ಮಾರ್ಗ, ಅವಧಿ ಇತ್ಯಾದಿಗಳ ಬಗ್ಗೆ ಶೀಘ್ರದಲ್ಲೇ ತಿಳಿಸಲಾಗುವುದು ಎಂದು ಡಿ.ಕೆ. ಶಿವಕುಮಾರ್ ತಿಳಿಸಿದರು.
ಇದನ್ನೂ ಓದಿ:ಗೋವಾದಲ್ಲಿ ಆಪ್ ಸರಕಾರ ಬಂದರೆ 6 ತಿಂಗಳೊಳಗೆ ಗಣಿಗಳ ಪುನರಾರಂಭ: ಕೇಜ್ರಿವಾಲ್
ತಮಿಳುನಾಡು ಕ್ಯಾತೆ-ತಗಾದೆ: ಸಿದ್ದು
ಮೇಕೆದಾಟು ಯೋಜನೆಗೆ ನಮ್ಮ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಡಿಪಿಆರ್ ತಯಾರಿಸಿ ಪರಿಸರ ಪರವಾನಿಗೆಗೆ ಕೇಂದ್ರ ಸರ್ಕಾರಕ್ಕೆ ಕಳಿಸಿಕೊಡಲಾಗಿತ್ತು. ಈ ಯೋಜನೆಗೆ ಕೇಂದ್ರ ಸರ್ಕಾರ ಅಥವಾ ಸುಪ್ರೀಂಕೋರ್ಟ್ನ ತಡೆ ಇಲ್ಲ. ಮೇಕೆದಾಟು ಯೋಜನೆಯಿಂದ ತಮಿಳುನಾಡಿಗೆ ಯಾವುದೇ ಅನ್ಯಾಯ ಆಗುವುದಿಲ್ಲ. ಎರಡೂ ರಾಜ್ಯಗಳಿಗೆ ಅನುಕೂಲವಾಗಲಿದೆ. ಕರ್ನಾಟಕದ ಭೌಗೋಳಿಕ ಪ್ರದೇಶದಲ್ಲಿ ಯೋಜನೆ ಬರುತ್ತದೆ. ಹೆಚ್ಚುವರಿ ನೀರು ಬಳಸಿಕೊಳ್ಳುವ ಈ ಯೋಜನೆಗೆ ತಮಿಳುನಾಡು ಅನಗತ್ಯವಾಗಿ ಕ್ಯಾತೆ ತೆಗೆಯುತ್ತಿದೆ. ಕೇಂದ್ರ ಸರ್ಕಾರ ತಕ್ಷಣ ಪರಿಸರ ಪರವಾನಿಗೆ ನೀಡಬೇಕು. ನೆಪ ಹೇಳದೆ ರಾಜ್ಯ ಸರ್ಕಾರ ಕೂಡಲೇ ಯೋಜನೆ ಅನುಷ್ಠಾನಕ್ಕೆ ತರಬೇಕೆಂದು ಆಗ್ರಹಿಸಿ ಪಾದಯಾತ್ರೆ ನಡೆಸಲಾಗುತ್ತದೆ ಎಂದು ವಿಧಾನಸಭೆ ವಿರೋಧಪಕ್ಷದ ನಾಯಕ ಸಿದ್ದರಾಮಯ್ಯ ಇದೇ ವೇಳೆ ಹೇಳಿದರು.
” ಮೇಕೆದಾಟು ಯೋಜನೆ ವಿಚಾರದಲ್ಲಿ ತಮಿಳುನಾಡು ರಾಜಕೀಯ ಮಾಡುತ್ತಿದೆ. ಈ ವಿಚಾರದಲ್ಲಿ ಕಾಂಗ್ರೆಸ್ ಪಕ್ಷ ರಾಜಕೀಯ ಮಾಡುವುದಿಲ್ಲ. ಕಾಂಗ್ರೆಸ್ ಪಕ್ಷ ಯಾವತ್ತೂ ಕನ್ನಡಿಗರು ಮತ್ತು ಕರ್ನಾಟಕದ ಪರ ಇರುತ್ತದೆ.’
– ಸಿದ್ದರಾಮಯ್ಯ, ಪ್ರತಿಪಕ್ಷ ನಾಯಕ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು
China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ
ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ
Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ
Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ
MUST WATCH
ಹೊಸ ಸೇರ್ಪಡೆ
Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು
RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ
Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ
China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ
Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ