ಇಂದಿನಿಂದ ಎಲ್ಲ ಮಕ್ಕಳಿಗೂ ಬಿಸಿಯೂಟ
Team Udayavani, Nov 2, 2021, 6:13 AM IST
ಬೆಂಗಳೂರು: ರಾಜ್ಯದ ಪ್ರಾಥಮಿಕ ಶಾಲೆಗಳಲ್ಲಿ ನ. 2ರಿಂದ ಪೂರ್ಣ ಪ್ರಮಾಣದ ಭೌತಿಕ ತರಗತಿಗಳ ಜತೆಗೆ ಬಿಸಿಯೂಟವೂ ಆರಂಭವಾಗಲಿದೆ.
ಈಗಾಗಲೇ ಪ್ರಾಥಮಿಕ ತರಗತಿ ಸಹಿತವಾಗಿ ಎಲ್ಲ ವಿದ್ಯಾರ್ಥಿಗಳಿಗೂ ಭೌತಿಕ ತರಗತಿ ಆರಂಭಿಸಿದ್ದರೂ, ಕೆಲವರಿಗೆ ಬಿಸಿಯೂಟ ನೀಡುತ್ತಿರಲಿಲ್ಲ. ಅಲ್ಲದೆ, ಪ್ರಾಥಮಿಕ ತರಗತಿ ವಿದ್ಯಾರ್ಥಿಗಳಿಗೆ ಮಧ್ಯಾಹ್ನದ ತರಗತಿ ಇರಲಿಲ್ಲ. ಮಂಗಳವಾರದಿಂದ ಪೂರ್ಣ ಪ್ರಮಾಣದ ತರಗತಿ ಜತೆಗೆ ಶಾಲೆಗಳಲ್ಲೇ ಬಿಸಿಯೂಟ ಲಭ್ಯವಾಗಲಿದ್ದು, ಬಿಸಿಯೂಟ ಸಿದ್ಧಪಡಿಸಿ, ನೀಡಲು ಬೇಕಾದ ಸಿದ್ಧತೆಯನ್ನು ಸರಕಾರಿ ಹಾಗೂ ಅನುದಾನಿತ ಶಾಲೆಗಳಲ್ಲಿ ಮಾಡಿಕೊಳ್ಳಲಾಗಿದೆ. ಜತೆಗೆ ಅದಮ್ಯ ಚೇತನ,ಅಕ್ಷಯ ಫೌಂಡೇಶನ್ ಸೇರಿ ಕೆಲವು ಸ್ವಯಂ ಸೇವಾ ಸಂಸ್ಥೆಗಳು ಕೂಡ ಬಿಸಿಯೂಟ ನೀಡಲು ತಯಾರಿ ಮಾಡಿಕೊಂಡಿವೆ.
ದೀಪಾವಳಿ ಬಳಿಕ ಶಾಲಾರಂಭ
ಸರಕಾರ ಈಗಾಗಲೇ ಪ್ರಾಥಮಿಕ ತರಗತಿಯಿಂದ ಪಿಯುಸಿ ವರಗೆಗೂ ಭೌತಿಕ ತರಗತಿ ಆರಂಭಿಸಲು ಅನುಮತಿ ನೀಡಿದೆ. ಆದರೆ, ಕೆಲವೊಂದು ಖಾಸಗಿ ಶಿಕ್ಷಣ ಸಂಸ್ಥೆಗಳು ಇನ್ನು ಭೌತಿಕ ತರಗತಿಗಳನ್ನು ಆರಂಭಿಸಿಲ್ಲ. ಆನ್ಲೈನ್ ತರಗತಿಯನ್ನೇ ಮುಂದುವರಿಸಿಕೊಂಡು ಬಂದಿದೆ. ದೀಪಾವಳಿ ಕಳೆದು ನ. 8ರಿಂದ ಭೌತಿಕ ತರಗತಿ ಆರಂಭಿಸುವ ಬಗ್ಗೆ ನಿರ್ಧಾರ ತೆಗೆದುಕೊಂಡಿವೆ.
ಇದನ್ನೂ ಓದಿ:ಉತ್ತರಪ್ರದೇಶ ಚುನಾವಣೆಯಲ್ಲಿ ಸ್ಪರ್ಧಿಸಲ್ಲ: ಅಖೀಲೇಶ್ ಘೋಷಣೆ
ರಾಜ್ಯದ ಶಾಲೆಗಳಲ್ಲಿ ಭೌತಿಕ ತರಗತಿ ಮತ್ತು ಮಧ್ಯಾಹ್ನದ ಬಿಸಿ ಊಟ ವ್ಯವಸ್ಥೆಯನ್ನು ಪುನರಾರಂಭಿಸಿರುವುದು ಮಕ್ಕಳಲ್ಲಿ ಮತ್ತು ಪೋಷಕರಲ್ಲಿ ಸಂತಸ ಮೂಡಿಸಿದೆ. ಇಲಾಖೆ ನೀಡಿರುವ ಎಸ್ಒಪಿಯಂತೆ ಶಾಲೆಗಳಲ್ಲಿ ಗರಿಷ್ಠ ಸುರಕ್ಷತಾ ಕ್ರಮ ಪಾಲಿಸಲಾಗುತ್ತಿದೆ.
-ಬಿ.ಸಿ. ನಾಗೇಶ್, ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಸಚಿವ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
MUST WATCH
ಹೊಸ ಸೇರ್ಪಡೆ
ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ
ಕೊಡಪಾಡಿ: ಮೃತ ವ್ಯಕ್ತಿಯ ಹೆಸರಲ್ಲಿ ನಕಲಿ ಸಹಿ ಬಳಸಿ ಪವರ್ ಆಫ್ ಅಟಾರ್ನಿ, ದೂರು ದಾಖಲು
IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್
BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ
ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ