ಮಕ್ಕಳ ಹೊಟ್ಟೆ ಸೇರಬೇಕಿದ್ದ ಹಾಲಿನ ಪುಡಿ ಮಣ್ಣುಪಾಲು


Team Udayavani, Dec 28, 2018, 6:00 AM IST

58.jpg

ಲಿಂಗಸುಗೂರು: ತಾಲೂಕಿನ ಯರಡೋಣಾ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಕ್ಷೀರಭಾಗ್ಯ ಯೋಜನೆಯ ಸುಮಾರು 50 ಕೆಜಿ ಹಾಲಿನ ಪುಡಿಯನ್ನು ಅಡುಗೆ ಸಿಬ್ಬಂದಿಯೇ ಗುಂಡಿ ತೋಡಿ ಮುಚ್ಚಿರುವ  ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಶಾಲೆಗೆ ಪೂರೈಕೆಯಾದ 50 ಕೆಜಿ ಹಾಲಿನ ಪುಡಿ ಪಾಕೆಟ್‌ಗಳನ್ನು ಅಡುಗೆ ಸಿಬ್ಬಂದಿ ಐದು ತಿಂಗಳ ಹಿಂದೆಯೇ ಬಿಸಿಯೂಟ ಅಡುಗೆ ಕೊಠಡಿಯ ಹಿಂಬದಿಯಲ್ಲಿ ಗುಂಡಿ ತೋಡಿ ಅರೆಬರೆ ಮಣ್ಣು ಹಾಕಿ ಮುಚ್ಚಿದ್ದಾರೆ. ಅಲ್ಲಿ ದಿನವೂ ನೀರು ಸಂಗ್ರಹವಾಗುತ್ತಿದ್ದರಿಂದ ಹಾಲಿನ ಪುಡಿ ಕೆಟ್ಟು ದುರ್ನಾತ ಬೀರಲು ಆರಂಭವಾಗಿದೆ. ದುರ್ನಾತ ಹೆಚ್ಚಿದ್ದರಿಂದ ಸಿಬ್ಬಂದಿ ಇದರಲ್ಲಿ ತಮ್ಮ ಪಾತ್ರವೇನೂ ಇಲ್ಲ ಎಂದು ನಿರೂಪಿಸಲು ತಗ್ಗಲ್ಲಿ ಮುಚ್ಚಿದ್ದ ಹಾಲಿನಪುಡಿ ಪಾಕೆಟ್‌ಗಳನ್ನು ತೆಗೆದು ಬೇರೆಡೆ ಸಾಗಿಸಲು ಮುಂದಾದಾಗ ಪ್ರಕರಣ ಬೆಳಕಿಗೆ ಬಂದಿದೆ.

ಬಿಸಿಯೂಟಕ್ಕೆ ಎಷ್ಟು ದಾಸ್ತಾನು ಶಾಲೆಗೆ ಪೂರೈಕೆ ಆಗುತ್ತಿದೆ, ಎಷ್ಟು ಬಳಕೆಯಾಗಿದೆ ಎಂಬುದರ ಮಾಹಿತಿ ಮುಖ್ಯ ಶಿಕ್ಷಕರಿಗೆ ಇರಬೇಕು. ಆದರೆ ಈ ಶಾಲೆಯ ಮುಖ್ಯ ಶಿಕ್ಷಕರಿಗೆ ದಾಸ್ತಾನು ಬಗ್ಗೆ ಕನಿಷ್ಠ ಮಾಹಿತಿ ಇಲ್ಲದಾಗಿದೆ. ಅವರ ನಿರ್ಲಕ್ಷéದಿಂದಲೇ ಹಾಲಿನಪುಡಿ ಪಾಕೆಟ್‌ ಮಣ್ಣು ಸೇರಿವೆ. ಇದಲ್ಲದೆ ಹಾಲಿನಪುಡಿ ಪಾಕೆಟ್‌ಗಳನ್ನು ತೆಗೆಯಲು ಅಗೆಯಲಾದ ಗುಂಡಿ ಮುಚ್ಚಲು ವಿದ್ಯಾರ್ಥಿಗಳನ್ನು ಬಳಸಿಕೊಳ್ಳಲಾಗಿದೆ ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದರು. ಹಾಲಿನಪುಡಿ ಪಾಕೆಟ್‌ಗಳನ್ನು ಮಣ್ಣಲ್ಲಿ ತಾವೇ ಮುಚ್ಚಿದ್ದಾಗಿ ಅಡುಗೆ ಸಿಬ್ಬಂದಿ ತಪ್ಪು ಒಪ್ಪಿಕೊಂಡಿದ್ದಾರೆ.  ಪಾಕೆಟ್‌ಗಳ ಮೇಲೆ ನೀರು ಬಿದ್ದು ಗಟ್ಟಿಯಾಗಿದ್ದವು. ಇದನ್ನು ಮಕ್ಕಳಿಗೆ ಕುಡಿಸಬಾರದು ಎಂದು ಮಣ್ಣಲ್ಲಿ ಮುಚ್ಚಿದ್ದಾಗಿ ತಪ್ಪೊಪ್ಪಿಕೊಂಡಿದ್ದಾರೆ ಎಂದು ಹೇಳಲಾಗಿದೆ.

ಯರಡೋಣಾ ಶಾಲೆಯಲ್ಲಿ ಕ್ಷೀರಭಾಗ್ಯದ ಹಾಲಿನಪುಡಿ ಪಾಕೆಟ್‌ಗಳನ್ನು ಮಣ್ಣಲ್ಲಿ ಮುಚ್ಚಿದ್ದು ಅಪರಾಧ. ಈ ಬಗ್ಗೆ ಸಮಗ್ರ ತನಿಖೆ ಮಾಡಿ ತಪ್ಪಿತಸ್ಥರ  ವಿರುದ್ಧ ಕ್ರಮ ಕೈಗೊಳ್ಳಲಾಗುವುದು.
– ಚಂದ್ರಶೇಖರ ಕುಂಬಾರ, ಸಹಾಯಕ ನಿರ್ದೇಶಕ, ಅಕ್ಷರದಾಸೋಹ ಯೋಜನೆ ಲಿಂಗಸುಗೂರು

ಟಾಪ್ ನ್ಯೂಸ್

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

ಕೋಟ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

ಕೋಟ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

ಚಿಕ್ಕಮಗಳೂರು-ಉಡುಪಿ ಕ್ಷೇತ್ರ: ಜನಹಿತ ಕಾರ್ಯಕ್ಕೆ ಸದಾ ಬದ್ಧ: ಹೆಗ್ಡೆ

ಚಿಕ್ಕಮಗಳೂರು-ಉಡುಪಿ ಕ್ಷೇತ್ರ: ಜನಹಿತ ಕಾರ್ಯಕ್ಕೆ ಸದಾ ಬದ್ಧ: ಹೆಗ್ಡೆ

Supreme Court

Supreme Courtನಲ್ಲಿ ಪಿವಿಎನ್‌, ಮನಮೋಹನ್‌ ಸಿಂಗ್‌ಗೆ ಕೇಂದ್ರ ಸರಕಾರ ಶ್ಲಾಘನೆ

Rajeev Chandrashekhar

Corrupt ಡಿಕೆಶಿ ಸರ್ಟಿಫಿಕೆಟ್‌ ಬೇಕಾಗಿಲ್ಲ: ಕೇಂದ್ರ ಸಚಿವ ರಾಜೀವ್‌ ತಿರುಗೇಟು

1-wqewqe

2014 ಭರವಸೆ, 2019 ನಂಬಿಕೆ, 2024ರಲ್ಲಿ ಗ್ಯಾರಂಟಿ: ಮೋದಿ

mamata

CAA, NRC ರದ್ದು: ದೀದಿ ಶಪಥ ಪ್ರಣಾಳಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಶಿಕ್ಷಕರ ವರ್ಗಾವಣೆ ವೇಳಾಪಟ್ಟಿ ಪರಿಷ್ಕರಣೆ

Karnataka; ಶಿಕ್ಷಕರ ವರ್ಗಾವಣೆ ವೇಳಾಪಟ್ಟಿ ಪರಿಷ್ಕರಣೆ

ವಕೀಲರಿಗೂ ತಟ್ಟಿದ ಬೇಸಿಗೆ ಬಿಸಿ: ಕಪ್ಪು ಕೋಟ್‌ಗೆ ವಿನಾಯಿತಿ

ವಕೀಲರಿಗೂ ತಟ್ಟಿದ ಬೇಸಿಗೆ ಬಿಸಿ: ಕಪ್ಪು ಕೋಟ್‌ಗೆ ವಿನಾಯಿತಿ

1-wewqeqwe

NDA; ಮಂಡ್ಯಕ್ಕೆ ಬಂದಿರುವ ಕುಮಾರಸ್ವಾಮಿಯನ್ನು ಸೋಲಿಸಿ ಮನೆಗೆ ಕಳಿಸಿ: ಸಿದ್ದರಾಮಯ್ಯ

raLok Sabha Elections; ಜಾತಿ ಗಣತಿ ಬಗ್ಗೆ ಮೋದಿ ನಿಲುವೇನು?: ರಾಹುಲ್‌ ಗಾಂಧಿ

Lok Sabha Elections; ಜಾತಿ ಗಣತಿ ಬಗ್ಗೆ ಮೋದಿ ನಿಲುವೇನು?: ರಾಹುಲ್‌ ಗಾಂಧಿ

ಮತ್ತೆ 60 ಮಂದಿಯಿಂದ ಉಮೇದುವಾರಿಕೆ; 2ನೇ ಹಂತದ ಚುನಾವಣೆಗೆ ಈವರೆಗೆ 168 ಮಂದಿ ಕಣಕ್ಕೆ

ಮತ್ತೆ 60 ಮಂದಿಯಿಂದ ಉಮೇದುವಾರಿಕೆ; 2ನೇ ಹಂತದ ಚುನಾವಣೆಗೆ ಈವರೆಗೆ 168 ಮಂದಿ ಕಣಕ್ಕೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

ಕೋಟ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

ಕೋಟ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

ಚಿಕ್ಕಮಗಳೂರು-ಉಡುಪಿ ಕ್ಷೇತ್ರ: ಜನಹಿತ ಕಾರ್ಯಕ್ಕೆ ಸದಾ ಬದ್ಧ: ಹೆಗ್ಡೆ

ಚಿಕ್ಕಮಗಳೂರು-ಉಡುಪಿ ಕ್ಷೇತ್ರ: ಜನಹಿತ ಕಾರ್ಯಕ್ಕೆ ಸದಾ ಬದ್ಧ: ಹೆಗ್ಡೆ

Supreme Court

Supreme Courtನಲ್ಲಿ ಪಿವಿಎನ್‌, ಮನಮೋಹನ್‌ ಸಿಂಗ್‌ಗೆ ಕೇಂದ್ರ ಸರಕಾರ ಶ್ಲಾಘನೆ

suicide

ಕಾಶ್ಮೀರದಲ್ಲಿ ಗುಂಡು ಹಾರಿಸಿ ಬಿಹಾರ ಕಾರ್ಮಿಕನ ಹತ್ಯೆ  

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.