ಹಾಲಿನ ಕೊರತೆ: ಹೋಟೆಲ್ಗಳಿಗೆ ತೊಂದರೆ… ರಾಜ್ಯಗಳಿಗೆ ಹಾಲು ಸರಬರಾಜು ಸ್ಥಗಿತಕ್ಕೆ ಆಗ್ರಹ
ಅಗತ್ಯವಿದ್ದರೆ ವಿದೇಶದಿಂದ ಹಾಲು ಆಮದು ಮಾಡಿಕೊಳ್ಳಲು ಕೋರಿಕೆ
Team Udayavani, Mar 12, 2023, 7:50 AM IST
ಬೆಂಗಳೂರು: ಹಾಲಿನ ಬೇಡಿಕೆ ಹೆಚ್ಚಾಗಿರುವುದರಿಂದ ಹೊರರಾಜ್ಯಗಳಿಗೆ ಸರಬರಾಜು ಮಾಡುವುದನ್ನು ತಾತ್ಕಾಲಿಕವಾಗಿ ತಡೆ ಹಿಡಿಯುವಂತೆ ಬೃಹತ್ ಬೆಂಗಳೂರು ಹೋಟೆಲುಗಳ ಸಂಘ ಇದೀಗ ಕರ್ನಾಟಕ ಹಾಲು ಉತ್ಪಾದಕರ ಒಕ್ಕೂಟ (ಕೆಎಂಎಫ್)ಕ್ಕೆ ಮನವಿ ಮಾಡಿದೆ.
ಈ ಬಗ್ಗೆ ಕೆಎಂಎಫ್ನ ವ್ಯವಸ್ಥಾಪಕ ನಿರ್ದೇಶಕರಿಗೆ ಪತ್ರ ಬರೆದಿರುವ ಬೃಹತ್ ಬೆಂಗಳೂರು ಹೋಟೆಲ್ಗಳ ಸಂಘದ ಅಧ್ಯಕ್ಷ ಪಿ.ಸಿ.ರಾವ್, ಇತ್ತೀಚೆಗೆ ನಂದಿನಿ ಹಾಲು ಮತ್ತು ನಂದಿನಿ ಹಾಲಿನ ಉತ್ಪನ್ನಗಳ ಕೊರತೆ ಬಹಳಷ್ಟು ಉಂಟಾಗಿದೆ. ಬೆಂಗಳೂರಿನ ಹೋಟೆಲ್ಗಳಲ್ಲಿ ಹೆಚ್ಚಾಗಿ ನಂದಿನಿ ಹಾಲು ಮತ್ತು ಹಾಲಿನ ಉತ್ಪನ್ನಗಳನ್ನ ಅಧಿಕವಾಗಿ ಬಳಸಲಾಗುತ್ತಿದೆ. ಆದರೆ ಈಗ ಅಗತ್ಯವಿರುವಷ್ಟು ಹಾಲಿನ ಪೂರೈಕೆ ಆಗದೆ ಇರುವುದರಿಂದ ಮಾಲೀಕರು ಬಹಳಷ್ಟು ತೊಂದರೆ ಎದುರಿಸುವಂತಾಗಿದೆ ಎಂದು ಹೇಳಿದ್ದಾರೆ.
ಈ ಹಿನ್ನೆಲೆಯಲ್ಲಿ ಕರ್ನಾಟಕ ಹಾಲು ಉತ್ಪಾದಕರ ಒಕ್ಕೂಟವು ಹೊರ ರಾಜ್ಯಗಳಿಗೆ ಹಾಲು ಸರಬರಾಜು ಮಾಡುವುದನ್ನು ತಾತ್ಕಾಲಿಕವಾಗಿ ತಡೆ ಹಿಡಿಯಬೇಕು. ಅಗತ್ಯವಿದ್ದರೆ ಹೊರ ದೇಶಗಳಿಂದ ಆಮದು ಮಾಡಿಕೊಂಡು ಸದ್ಯದ ಬೇಡಿಕೆಯನ್ನು ಪೂರೈಸಬೇಕು. ಹಾಲು ಜನಸಾಮಾನ್ಯರಿಗೆ ಅತ್ಯವಶ್ಯಕವಾಗಿರುವುದರಿಂದ ಕೊರತೆ ಉಂಟಾಗದಂತೆ ನೋಡಿಕೊಳ್ಳಬೇಕು ಎಂದು ಮನವಿ ಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ
ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ
Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ
Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ
LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ
MUST WATCH
ಹೊಸ ಸೇರ್ಪಡೆ
Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ
China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ
Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ
PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ
ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್