9,10 ಹಾಗೂ ಪಿಯು ಕಾಲೇಜು ಆರಂಭಕ್ಕೆ ಸಿದ್ಧತೆ ಪೂರ್ಣ: ಸಚಿವ ಬಿ.ಸಿ ನಾಗೇಶ್
Team Udayavani, Aug 21, 2021, 7:20 PM IST
ಬೆಂಗಳೂರು: ಕೋವಿಡ್-19 ಲಾಕ್ಡೌನ್ ಹಿನ್ನೆಲೆಯಲ್ಲಿ ಕಳೆದ ಒಂದುವರೆ ವರ್ಷದಿಂದ ಸ್ಥಗಿತಗೊಂಡಿದ್ದ 9 ಮತ್ತು 10ನೇ ತರಗತಿ ಹಾಗೂ ಪ್ರಥಮ ಮತ್ತು ದ್ವಿತೀಯ ಪಿ.ಯು ಭೌತಿಕ ತರಗತಿಗಳು ಪುನಾರಂಭಕ್ಕೆ ಶಿಕ್ಷಣ ಇಲಾಖೆ ಸಂಪೂರ್ಣ ಸಿದ್ಧತೆ ಮಾಡಿಕೊಂಡಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಸಚಿವ ಬಿ.ಸಿ ನಾಗೇಶ್ ತಿಳಿಸಿದರು.
‘1ನೇ ತರಗತಿಯಿಂದ ದ್ವಿತೀಯ ಪಿಯು ವರೆಗಿನ ಶಿಕ್ಷಣವೂ ಪ್ರತಿಯೊಬ್ಬರ ಜೀವನದಲ್ಲಿ ಅತ್ಯಂತ ಮಹತ್ವದ ಘಟ್ಟ. ಮುಂದಿನ ಭವಿಷ್ಯಕ್ಕೆ ಭದ್ರ ಬುನಾದಿ ಹಾಕುತ್ತದೆ. ಆದರೆ, ಕೋವಿಡ್ ಕಾರಣ ಒಂದುವರೆ ವರ್ಷದ ಶೈಕ್ಷಣಿಕ ಅವಧಿಯನ್ನು ಮಕ್ಕಳು ಕಳೆದುಕೊಂಡಿರುವುದು ಬಹಳ ಬೇಸರವಾಗಿದೆ. ಆದರೆ, ಈಗ ಕೋವಿಡ್ ಸುರಕ್ಷತಾ ಕ್ರಮಗಳು, ತ್ವರಿತಗತಿಯ ಲಸಿಕಾಕರಣ, ನಾಗರಿಕರು ಆರೋಗ್ಯದ ಕಡೆ ಹೆಚ್ಚಿನ ಗಮನ ಹರಿಸಿರುವ ಕಾರಣ ಕೋವಿಡ್ ಭೀತಿ ಕಡಿಮೆಯಾಗಿ ಭೌತಿಕ ತರಗತಿಗಳನ್ನು ಪುನಾರಂಭಿಸಲಾಗುತ್ತಿದೆ’ ಎಂದು ತಿಳಿಸಿದರು.
‘ಮುಖ್ಯಮಂತ್ರಿಯವರ ಅಧ್ಯಕ್ಷತೆಯಲ್ಲಿ ನಡೆದ ಆರೋಗ್ಯ ಇಲಾಖೆಯ ಕೋವಿಡ್-19 ತಾಂತ್ರಿಕ ಸಲಹಾ ಸಮಿತಿ ಸದಸ್ಯರು, ವಿವಿಧ ಇಲಾಖೆಗಳ ಹಿರಿಯ ಅಧಿಕಾರಿಗಳ ಸಭೆಯಲ್ಲಿ ಚರ್ಚಿಸಿ ಆ.23ರಿಂದ ಶಾಲೆ ಆರಂಭಿಸುವ ನಿರ್ಧಾರ ಕೈಗೊಳ್ಳಲಾಗಿದೆ. ಸುರಕ್ಷತಾ ಕ್ರಮಗಳನ್ನು ಕಡ್ಡಾಯವಾಗಿ ಪಾಲಿಸುವ ಮೂಲಕ ತರಗತಿ ನಡೆಸಲು ಶಿಕ್ಷಕರಿಗೆ ಸೂಚಿಸಲಾಗಿದೆ’ ಎಂದು ಸಚಿವರು ಹೇಳಿದರು.
ವಿದ್ಯಾರ್ಥಿಗಳು ಊಟದ ಬಾಕ್ಸ್, ಬಾಟಲಿಯಲ್ಲಿ ಬಿಸಿ ನೀರು ತೆಗೆದುಕೊಂಡು ಹೋಗಬಹುದು. ಶಾಲೆಯಲ್ಲೂ ಬಿಸಿ ನೀರಿನ ವ್ಯವಸ್ಥೆ ಮಾಡಲಾಗಿರುತ್ತದೆ. ಕೋವಿಡ್-19 ‘ಪ್ರಮಾಣಿತ ಕಾರ್ಯಾಚರಣೆ ವಿಧಾನ’ಗಳನ್ನು ಕಡ್ಡಾಯವಾಗಿ ಪಾಲಿಸಿಕೊಂಡು ಶಾಲಾ, ಕಾಲೇಜುಗಳನ್ನು ಆರಂಭಿಸಲು ಕಟ್ಟು ನಿಟ್ಟಿನ ಸೂಚನೆ ನೀಡಲಾಗಿದೆ. ಜವಾಬ್ದಾರಿಯೊಂದಿಗೆ ಮಕ್ಕಳು, ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ಮಾಸ್ಕ್ ಧರಿಸಿ ಸುರಕ್ಷತಾ ಕ್ರಮಗಳನ್ನು ಪಾಲಿಸಬೇಕು ಎಂದು ಮನವಿ ಮಾಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್
R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್
Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್
Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್
Politics: ಡಿ.ಕೆ.ಶಿವಕುಮಾರ್ ಸಿಎಂ ಆಗುತ್ತಾರೆ: ಎಚ್.ವಿಶ್ವನಾಥ್
MUST WATCH
ಹೊಸ ಸೇರ್ಪಡೆ
LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್
R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್
Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್
CN Ashwath Narayan: ಕಾಂಗ್ರೆಸ್ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ
Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್