Politics: ಪ್ರಧಾನಿ ಅಧಿಕಾರಕ್ಕಾಗಿ ಏನಾದರೂ ಮಾಡುತ್ತಾರೆ; ಸಚಿವ ಭೋಸರಾಜು ವಾಗ್ದಾಳಿ
Team Udayavani, Mar 13, 2024, 5:03 PM IST
ರಾಯಚೂರು: ಸಿಎಎ ಜಾರಿ ಮಾಡುವವರು ಇಷ್ಟು ದಿನ ಮಲಗಿದ್ದರಾ? ಪ್ರಧಾನಿ ನರೇಂದ್ರ ಮೋದಿ ಏನೆ ಮಾಡಿದರೂ ಅಧಿಕಾರಕ್ಕಾಗಿಯೇ ಎಂದು ಸಣ್ಣ ನೀರಾವರಿ ಸಚಿವ ಎನ್.ಎಸ್.ಭೋಸರಾಜು ವಾಗ್ದಾಳಿ ನಡೆಸಿದರು.
ನಗರದಲ್ಲಿ ಸುದ್ದಿಗಾರರ ಜತೆ ಮಾತನಾಡಿ, ಇಡಿ ಆದಾಯ ತೆರಿಗೆ ಇಲಾಖೆಗಳನ್ನು ದುರ್ಬಳಕೆ ಮಾಡಿಕೊಂಡಿದ್ದಾರೆ. ಅಯೋಧ್ಯ ಹೆಸರಲ್ಲಿ ಮೂರು ತಿಂಗಳಿಂದಲೇ ರಾಜಕೀಯ ಮಾಡುತ್ತಿದ್ದಾರೆ. ಧರ್ಮಾಧಾರಿತವಾಗಿ ದೇಶ ಒಡೆಯುವುದೇ ಬಿಜೆಪಿ ನಿಲುವು ಎಂದು ಟೀಕಿಸಿದರು.
ಸಂಸದ ಅನಂತಕುಮಾರ್ ಹೆಗಡೆ ಸಂವಿಧಾನ ಬದಲಿಸುವುದಾಗಿ ಪದೇಪದೆ ಹೇಳಿಕೆ ನೀಡುತ್ತಿದ್ದಾರೆ. ಇವರಿಗೆ ನಾಚಿಕೆ ಇದ್ದರೆ ಅನಂತಕುಮಾರ ಅವರನ್ನು ಉಚ್ಛಾಟನೆ ಮಾಡಬೆಕಿತ್ತು. ಸಂವಿಧಾನ ಬದಲಾವಣೆಯಾದರೆ ದೇಶದಲ್ಲಿ ಏನಾಗುತ್ತಿತ್ತು ಎಂಬುದನ್ನು ಸಿಎಂ ಹೇಳಿದ್ದಾರೆ ಎಂದರು.
ಕೇಂದ್ರ ಸರ್ಕಾರಕ್ಕೆ 18,428 ಕೋಟಿ ಕೇಳಿದ್ದೆವೆ. ಈವರೆಗೂ ಯಾವುದೇ ಹಣ ಬಂದಿಲ್ಲ. ಈವರೆಗೆ ಒಂದೇ ಒಂದು ದಿನ ಸಂಸದರು ಮಾತನಾಡಿಲ್ಲ. ಯಾವ ಮಂತ್ರಿಯೂ ಮಾತನಾಡಿಲ್ಲ. ಯಾವ ಎಂಪಿ ಕೂಡ ಮಾತನಾಡಿಲ್ಲ. ಜಿಎಸ್ ಟಿ ಹಣ, ಅಪ್ಪರ್ ಭದ್ರಾ ಯೋಜನೆಯ 550 ಕೋಟಿ ಬರಬೇಕು. ನೀವೆ ಕರೆದುಕೊಂಡು ಹೋಗಿ ಹಣ ಕೊಡಿಸುವಂತೆ ಕೇಳಿಕೊಂಡರು ಬಿಜೆಪಿಯವರು ಬರುತ್ತಿಲ್ಲ ಎಂದು ವಾಗ್ದಾಳಿ ಮಾಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ
Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು
China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ
ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ
Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ
MUST WATCH
ಹೊಸ ಸೇರ್ಪಡೆ
Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ
Sirsi ; ಪ್ರಧಾನಿ ಮುಡಿಗೇರಿದ ಬೇಡರ ವೇಷದ ಕಿರೀಟ!
Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ
Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ
Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !