ಕಲಾಗ್ರಾಮ ಕಟ್ಟಡ ಕಾಮಗಾರಿಯಲ್ಲಿ ಸಣ್ಣ ದೋಷ ಕಂಡುಬಂದರೂ ನಿರ್ದಾಕ್ಷಿಣ್ಯ ಕ್ರಮ: ಸಿ.ಟಿ.ರವಿ


Team Udayavani, Jun 23, 2020, 4:54 PM IST

ಕಲಾಗ್ರಾಮ ಕಟ್ಟಡ ಕಾಮಗಾರಿಯಲ್ಲಿ ಸಣ್ಣ ದೋಷ ಕಂಡುಬಂದರೂ ನಿರ್ದಾಕ್ಷಿಣ್ಯ ಕ್ರಮ: ಸಿ.ಟಿ.ರವಿ

ಬೆಂಗಳೂರು: ನಗರದ ಜ್ಞಾನಭಾರತಿ ವಿಶ್ವವಿದ್ಯಾನಿಲಯದ ಬಳಿ ನಿರ್ಮಾಣವಾಗುತ್ತಿರುವ ಕಲಾಗ್ರಾಮ ಕಟ್ಟಡದ ಕಾಮಗಾರಿ ಕಳಪೆಯಾಗಿರುವುದು ಕಂಡು ಬಂದರೆ ಅಧಿಕಾರಿಗಳ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳುವುದಾಗಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಸಿ.ಟಿ.ರವಿ ಎಚ್ಚರಿಕೆ ನೀಡಿದ್ದಾರೆ.

ಇಂದು ಕಲಾಗ್ರಾಮಕ್ಕೆ ಭೇಟಿ ನೀಡಿ ಕಟ್ಟಡ ಕಾಮಗಾರಿ ಹಾಗೂ ಇಲ್ಲಿನ ಚಟುವಟಿಕೆಗಳ ಕುರಿತಂತೆ ಅವರು ಪರಿಶೀಲನೆ ನಡೆಸಿದರು.

ಕಲಾಗ್ರಾಮ ಕಟ್ಟಡ ನಿರ್ಮಾಣದಲ್ಲಿ ಯಾವುದೇ ರೀತಿಯ ಕಳಪೆ ಕಾಮಗಾರಿ ನಡೆಯಬಾರದು. ಒಂದು ವೇಳೆ ಎಲ್ಲಾದರೂ ಸಣ್ಣಪುಟ್ಟ ದೋಷ ಕಂಡುಬಂದರೆ ಅಂತಹ ಅಧಿಕಾರಿಗಳ ಮೇಲೆ ಮುಲಾಜಿಲ್ಲದೆ ಶಿಸ್ತುಕ್ರಮ ಜರುಗಿಸುವುದಾಗಿ ಹೇಳಿದರು.

ಕಾಲಮಿತಿಯೊಳಗೆ ಕಾಮಗಾರಿಯನ್ನು ಪೂರ್ಣಗೊಳಿಸಬೇಕು. ಆರ್ಥಿಕ ಇತಿಮಿತಿಯೊಳಗೆ ಕಟ್ಟಡವನ್ನು ನಿಗದಿತ ಸಮಯದೊಳಗೆ ಪೂರ್ಣಗೊಳಿಸಬೇಕು. ಆದಷ್ಟು ಶೀಘ್ರವಾಗಿ ಇಲ್ಲಿ ಪೂರ್ಣ ಪ್ರಮಾಣದ ಚಟುವಟಿಕೆಗಳು ಆರಂಭವಾಗುವಂತೆ ಕ್ರಮ ಕೈಗೊಳ್ಳಬೇಕೆಂದು ಸೂಚಿಸಿದರು.

ಪ್ರಗತಿಯಲ್ಲಿರುವ ಕಾಮಗಾರಿ ಪೂರ್ಣಗೊಳ್ಳಲು ಸುಮಾರು 30 ಕೋಟಿ ಅನುದಾನದ ಅಗತ್ಯವಿದೆ. ಮುಂದಿನ ಆಯವ್ಯಯದಲ್ಲಿ ಈ ಹಣವನ್ನು ಮೀಸಲಿಡಬೇಕೆಂದು ಮುಖ್ಯಮಂತ್ರಿಗಳಿಗೆ ಮನವಿ ಮಾಡಿದ್ದೇವೆ. ನಮಗೆ ಅನುದಾನ ಸಿಗುವ ವಿಶ್ವಾಸವಿದೆ ಎಂದು ಹೇಳಿದರು.

ಕಲಾಗ್ರಾಮದ ಸಮಗ್ರ ಅಭಿವೃದ್ಧಿಗೆ ರಾಜ್ಯಸರ್ಕಾರ ಬಿಡುಗಡೆ ಮಾಡಿರುವ ಅನುದಾನವನ್ನು ಪೂರ್ಣ ಪ್ರಮಾಣದಲ್ಲಿ ಬಳಕೆ ಮಾಡಲಾಗಿದೆ. ಕೇಂದ್ರ ಸರ್ಕಾರ ನೀಡಲು ಉದ್ದೇಶಿಸಿರುವ ಅನುದಾನದ ಮಂಜೂರಾತಿ ಪಡೆಯಲು ಸಚಿವ ಸಂಪುಟದ ಮುಂದೆ ಪ್ರಸ್ತಾಪಿಸಲು ತೀರ್ಮಾನಿಸಲಾಗಿದೆ ಎಂದು ಮಾಹಿತಿ ನೀಡಿದರು.

ಲಲಿತಕಲೆ ಹಾಗೂ ಶಿಲ್ಪಕಲೆಗಳ ಚಟುವಟಿಕೆಗೆ ಕಲಾಗ್ರಾಮವು ಅತ್ಯಂತ ಪ್ರಶಸ್ಥ ಸ್ಥಳವಾಗಿದೆ. ಈ ಕಾರಣ ಕರ್ನಾಟಕ ಲಲಿತಕಲಾ ಅಕಾಡೆಮಿ ಮತ್ತು ಬೆಂಗಳೂರು ನಗರ ಜಿಲ್ಲೆಯ ಸಹಾಯಕ ನಿರ್ದೇಶಕರ ಕಚೇರಿಗಳನ್ನು ಆಡಳಿತ ಭವನದ ಕಟ್ಟಡಕ್ಕೆ ಸ್ಥಳಾಂತರಿಸಲು ಕ್ರಮ ಕೈಗೊಂಡಿದೆ ಎಂದು ಹೇಳಿದರು.

ಕಲಾಭವನವನ್ನು ಸುವರ್ಣ ಸಮುಚ್ಛಯದ ಐಹೊಳೆಯ ದುರ್ಗಿ ಗುಡಿ ಮಾದರಿಯಲ್ಲಿ ನಿರ್ಮಿಸಲಾಗಿದೆ. ಒಟ್ಟು ಮೂರು ಮಹಡಿಗಳನ್ನು ಹೊಂದಿದ್ದು, ಸಮುಚ್ಛಯದಲ್ಲಿ 300 ಆಸನಗಳುಳ್ಳ ಸಭಾಂಗಣವನ್ನು ನಿರ್ಮಾಣ ಮಾಡಲಾಗಿದೆ ಎಂದು ತಿಳಿಸಿದರು.

ಬಯಲು ರಂಗಮಂದಿರದಲ್ಲಿ ಸಾಂಸ್ಕೃತಿಕ ಚಟುವಟಿಕೆಗಳನ್ನು ನಡೆಸಲು ಅನುಕೂಲವಾಗುವಂತೆ ಎರಡು ಪ್ರಸಾದನ ಕೊಠಡಿ, ಒಂದು ರಂಗ ಪರದೆ ಮತ್ತು ವಸ್ತುಗಳನ್ನು ಕಾಯ್ದಿರಿಸಲು ಕೊಠಡಿ ನಿರ್ಮಾಣ, ಕುವೆಂಪು ಭಾಷಾಭಾರತಿ ಪ್ರಾಕಾರದಲ್ಲಿ ಅವರ ಮನೆಯ ಮಾದರಿಯಂತೆ ಆಡಳಿತ ಕಚೇರಿಯನ್ನು ವಿಶ್ವಚೇತನ ಮತ್ತು ಅನುವಾದ ಕಮ್ಮಟ ಹಾಗೂ ಡಿಪ್ಲೊಮಾ ಕೋರ್ಸ್‍ಗಳ ಕಟ್ಟಡವನ್ನು ನಿರ್ಮಿಸಲಾಗಿದೆ ಎಂದು ಸಿ.ಟಿ.ರವಿ ಮಾಹಿತಿ ನೀಡಿದರು.

ಕಲಾಗ್ರಾಮದ ಪ್ರವೇಶದ್ವಾರದ ಪಕ್ಕದಲ್ಲಿ ಟೈಮ್ ಆಫೀಸ್ ನಿರ್ಮಿಸಲಾಗಿದೆ. ಕುವೆಂಪು ಭಾಷಾಭಾರತಿ ಪ್ರಾಕಾರದ ಪ್ರಕಟಣೆಗಳನ್ನು ಮಾರಾಟ ಮಾಡಲು ಇದರಿಂದ ಅನುಕೂಲವಾಗಲಿದೆ. ಸಾಹಿತಿಗಳು, ಕಲಾವಿದರು, ಶಿಲ್ಪಿಗಳು ಸೃಜನಶೀಲ ಕಾರ್ಯಗಳನ್ನು ನಡೆಸಿಕೊಡಲು ನಾಲ್ಕು ಕುಟೀರಗಳನ್ನು ನಿರ್ಮಾಣ ಮಾಡಲಾಗಿದೆ. ಉಳಿದ ಎರಡು ಕೊಠಡಿಗಳನ್ನು ಶೀಘ್ರದಲ್ಲೇ ಪೂರ್ಣಗೊಳಿಸುವ ವಿಶ್ವಾಸ ವ್ಯಕ್ತಪಡಿಸಿದರು.

ಟಾಪ್ ನ್ಯೂಸ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

6-bng-crime

Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ

ಬೊಮ್ಮಾಯಿ

Hubli; ಕಾನೂನು ವ್ಯವಸ್ಥೆ ಹೀಗೆ ಮುಂದುವರಿದರೆ ರಾಜ್ಯ ಬಿಹಾರವಾಗುತ್ತದೆ: ಬಸವರಾಜ ಬೊಮ್ಮಾಯಿ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Stones Pelted: ಪಶ್ಚಿಮ ಬಂಗಾಳ: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯಿತಿ ಸಿದ್ದೇಶ್ವರ

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

jagadish shettar

Belagavi; ಕಾಂಗ್ರೆಸ್ ಸರ್ಕಾರದ ಓಲೈಕೆಯಿಂದ ಜಿಹಾದಿ ಕೃತ್ಯಗಳು ಹೆಚ್ಚುತ್ತಿದೆ: ಶೆಟ್ಟರ್

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

6-bng-crime

Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.