ಶಿರಾಡಿ ಘಾಟಿ ಇನ್ನೂ ಯೋಜನಾ ಹಂತದಲ್ಲೇ?
Team Udayavani, Mar 24, 2022, 6:30 AM IST
ಬೆಂಗಳೂರು: ರಾಜಧಾನಿ ಬೆಂಗಳೂರು- ಕರಾವಳಿ ನಡುವಿನ ಸಂಪರ್ಕ ಕೊಂಡಿ ಶಿರಾಡಿ ಘಾಟಿ ಅಭಿವೃದ್ಧಿಯು ಇನ್ನೂ ಯೋಜನಾ ವರದಿ ತಯಾರಿಸುವ ಹಂತದಲ್ಲೇ ಇದೆಯೇ?
ಉತ್ತರ- ಸರಕಾರದ ಅಧಿಕೃತ ಮಾಹಿತಿ ಪ್ರಕಾರ “ಹೌದು’! ಕಾಂಗ್ರೆಸ್ನ ಮಂಜುನಾಥ್ ಭಂಡಾರಿ, ಸುರಂಗ ಮಾರ್ಗ ಯೋಜನೆ ಕಾರ್ಯಗತಗೊಳಿಸಲು ಸರಕಾರ ಕೈಗೊಂಡ ಕ್ರಮಗಳ ಬಗ್ಗೆ ಕೇಳಿರುವ ಪ್ರಶ್ನೆಗೆ ಬುಧವಾರ ಲೋಕೋಪಯೋಗಿ ಸಚಿವ ಸಿ.ಸಿ. ಪಾಟೀಲ್ ಲಿಖಿತ ಉತ್ತರ ನೀಡಿದ್ದಾರೆ. ಅದರಂತೆ, “ಬೆಂಗಳೂರು- ಶಿರಾಡಿಘಾಟ್ ಅಭಿವೃದ್ಧಿಪಡಿಸುವ ಕಾರ್ಯಕ್ಕೆ ಸಂಬಂಧಿಸಿದಂತೆ ಯೋಜನಾ ವರದಿ ತಯಾರಿಸುವ ಕಾರ್ಯ ಪ್ರಗತಿಯಲ್ಲಿದೆ ಎಂದು ಸ್ಪಷ್ಟಪಡಿಸಿದ್ದಾರೆ.
ಆದರೆ, ಇತ್ತೀಚೆಗೆ ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರು ಬೆಂಗಳೂರು-ಮಂಗಳೂರು ಸಂಪರ್ಕಿಸುವ ರಾಷ್ಟ್ರೀಯ ಹೆದ್ದಾರಿಯಲ್ಲಿನ ಶಿರಾಡಿ ಘಾಟ್ ಅನ್ನು 1,200 ಕೋಟಿ ರೂ. ವೆಚ್ಚದಲ್ಲಿ ಮೇಲ್ದರ್ಜೆಗೇರಿಸುವ ಯೋಜನೆಗೆ ಒಪ್ಪಿಗೆ ನೀಡಲಾಗಿದೆ ಎಂದು ಹೇಳಿದ್ದರು. ಈ ಮಧ್ಯೆ ಲೋಕೋಪಯೋಗಿ ಸಚಿವ ಲಿಖಿತ ಉತ್ತರ ಗೊಂದಲ ಸೃಷ್ಟಿಸಿದೆ.
ಶಿರಾಡಿ ಘಾಟ್ ಬೈಪಾಸ್ ರಸ್ತೆಗಾಗಿ 10,145.62 ಕೋಟಿ ಮೊತ್ತಕ್ಕೆ ಸಮಗ್ರ ಯೋಜನಾ ವರದಿಯನ್ನು ಸಲಹೆಗಾರರು ತಯಾರಿಸಿ ರಾಷ್ಟ್ರೀಯ ಹೆದ್ದಾರಿ ವಲಯಕ್ಕೆ ಸಲ್ಲಿಸಿದ್ದರು. ತದನಂತರ ಆ ವರದಿಯನ್ನು ಲೋಕೋಪಯೋಗಿ ಇಲಾಖೆ, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಮತ್ತು ಕನ್ಸಲ್ಟನ್ಸಿ ಸರ್ವಿಸ್ ಸಲಹೆಗಾರರೊಂದಿಗೆ ತ್ರಿಪಕ್ಷೀಯ ಒಪ್ಪಂದದಂತೆ ಆ ವರದಿಯನ್ನು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಕ್ಕೆ ಹಸ್ತಾಂತರಿಸಲಾಗಿತ್ತು.
ಇದನ್ನೂ ಓದಿ:ಸಚಿವ ರಾಮುಲು ಅವರೊಂದಿಗೆ ಖಾಸಗಿ ಬಸ್ ಮಾಲಕರ ಒಕ್ಕೂಟದ ಸಭೆ
ಆದರೆ, ಕೇಂದ್ರ ಭೂಸಾರಿಗೆ ಸಚಿವಾಲಯವು ಉದ್ದೇಶಿತ ಈ ಯೋಜನೆಯ ಕಾರ್ಯಸಾಧ್ಯತೆ ಪರಿಶೀಲನೆಗೆ ರಚಿಸಿದ ತಜ್ಞರ ಸಮಿತಿಯು ಯೋಜನಾ ವೆಚ್ಚವು ಸುರಂಗ ಮಾರ್ಗ ಯೋಜನೆಗಿಂತ ಕಡಿಮೆಯಾಗುತ್ತದೆ. ಅಲ್ಲದೆ, ಅರಣ್ಯ ತೆರವುಗೊಳಿಸುವಿಕೆ ಪ್ರಮಾಣವೂ ಕಡಿಮೆ ಇದೆ. ಈ ಹಿನ್ನೆಲೆಯಲ್ಲಿ ರಾಷ್ಟ್ರೀಯ ಹೆದ್ದಾರಿ ಜೋಡಣೆ (ಶಿರಾಡಿ ಘಾಟ್) ಅಭಿವೃದ್ಧಿಪಡಿಸುವ ಮತ್ತು ಯೋಜನಾ ವರದಿ ತಯಾರಿಸುವ ಕಾರ್ಯ ಪ್ರಗತಿಯಲ್ಲಿದೆ ಎಂದು ಸಚಿವರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
MUST WATCH
ಹೊಸ ಸೇರ್ಪಡೆ
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ
WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್ ಮೆಟ್ಟಿಲೇರಿದ ಪ್ರಕರಣ, ಏನಿದು?