ಮೈತ್ರಿ ಸರ್ಕಾರ ಉಳಿಸಲು ಹೋರಾಡಿದ ಸಚಿವ ಡಿಕೆಶಿ
Team Udayavani, Jul 24, 2019, 3:03 AM IST
ಬೆಂಗಳೂರು: ಮೈತ್ರಿ ಸರ್ಕಾರದಲ್ಲಿ ಉಪ ಮುಖ್ಯಮಂತ್ರಿಯಾಗಿ ಡಾ.ಜಿ.ಪರಮೇಶ್ವರ್ ನಿಭಾಯಿಸಬೇಕಾಗಿದ್ದ ಕೆಲಸವನ್ನು ಜಲ ಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ನಿರ್ವಹಿಸುವ ಪ್ರಯತ್ನ ಮಾಡಿದರು. ರಾಜ್ಯ ರಾಜಕಾರಣದಲ್ಲಿ ದೇವೇಗೌಡರ ಕುಟುಂಬದೊಂದಿಗೆ ನಿರಂತರ ವೈರತ್ವ ಬೆಳೆಸಿಕೊಂಡು ಬಂದಿದ್ದ ಡಿ.ಕೆ.ಶಿವಕುಮಾರ್, ಮೈತ್ರಿ ಸರ್ಕಾರ ಅಸ್ತಿತ್ವಕ್ಕೆ ಬಂದ ಮೇಲೆ ಮುಖ್ಯಮಂತ್ರಿ ಕುಮಾರಸ್ವಾಮಿ ಬೆನ್ನಿಗೆ ನಿಂತರು. ಕಾಂಗ್ರೆಸ್ನಿಂದ ಯಾವುದೇ ಅಪಸ್ವರ ಕೇಳಿ ಬಂದರೂ, ಅದನ್ನು ಪರಿಹರಿಸಲು ಡಿ.ಕೆ.ಶಿವಕುಮಾರ್ ತಾವೇ ಮುಂದಾಗಿ ನಿಲ್ಲುವ ಪ್ರಯತ್ನ ಮಾಡಿದರು.
ಅದು ಕಾಂಗ್ರೆಸ್ನ ಒಂದು ವರ್ಗದ ನಾಯಕರಿಗೆ ಇಬ್ಬರೂ ಹೊಂದಾಣಿಕೆ ರಾಜಕಾರಣ ಮಾಡುತ್ತಿದ್ದಾರೆ ಎಂಬ ಭಾವನೆ ಮೂಡಲು ಕಾರಣವಾಯಿತು. ಅದರ ಪರಿಣಾಮ ಅತೃಪ್ತ ಶಾಸಕರು ಸಿದ್ದರಾಮಯ್ಯನವರ ಆಶ್ರಯ ಪಡೆಯುವಂತಾಯಿತು. ಆದರೂ, ಡಿ.ಕೆ.ಶಿವಕುಮಾರ ಮೈತ್ರಿ ಸರ್ಕಾರಕ್ಕೆ ಕಂಟಕ ಬಂದಾಗಲೆಲ್ಲಾ ಬಂಡೆಗಲ್ಲಿನಂತೆ ನಿಂತು ಕಾಯುವ ಕಸರತ್ತು ನಡೆಸಿದರು. ಬಳ್ಳಾರಿ ಜಿಲ್ಲಾ ಉಸ್ತುವಾರಿಯಾಗಿ ಅಲ್ಲಿನ ಬಂಡಾಯ ಶಾಸಕರನ್ನು ರಮೇಶ್ ಜಾರಕಿಹೊಳಿ ಜೊತೆ ಸೇರಿಕೊಳ್ಳದಂತೆ ನೋಡಿಕೊಳ್ಳುವ ಪ್ರಯತ್ನ ಮಾಡಿದರು.
ಹೊಸಪೇಟೆ ಶಾಸಕ ಆನಂದಸಿಂಗ್ ಅವರು ಮೊದಲ ಬಾರಿ ಮುನಿಸಿಕೊಂಡಾಗ ಅವರನ್ನು ಸಮಾಧಾನಪಡಿಸಿ ಸರ್ಕಾರದಲ್ಲಿ ಮುಂದುವರೆಯುವಂತೆ ನೋಡಿಕೊಳ್ಳುವಲ್ಲಿ ಯಶಸ್ವಿಯಾಗಿದ್ದರು. ಅತೃಪ್ತರು ಬಂಡಾಯ ಸಾರಿ ಮುಂಬೈಗೆ ತೆರಳಿದಾಗ ಡಿ.ಕೆ.ಶಿವಕುಮಾರ್ ನೇರವಾಗಿ ಮುಂಬೈಗೆ ತೆರಳಿ ಬಂಡಾಯಗಾರರನ್ನು ಸಂಪರ್ಕಿಸುವ ಪ್ರಯತ್ನ ನಡೆಸಿದರು. ಆದರೆ ಸಾಧ್ಯವಾಗದೆ ಪೊಲೀಸರ ಬಂಧನಕ್ಕೆ ಒಳಗಾದರು. ಏಕಾಏಕಿ ರಾಜೀನಾಮೆ ಸಲ್ಲಿಸಿದ ಸಚಿವ ಎಂ.ಟಿ.ಬಿ .ನಾಗರಾಜ್ ಅವರನ್ನು ಇಡೀ ದಿನ ಮನವೊಲಿಸುವ ಕಸರತ್ತು ನಡೆಸಿದರು. ಈ ಮೂಲಕ ಮೈತ್ರಿ ಸರ್ಕಾರ ಪತನವಾಗುವುದನ್ನು ತಪ್ಪಿಸಲು ಕೊನೆವರೆಗೂ ವಿಫಲ ಯತ್ನ ನಡೆಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
MUST WATCH
ಹೊಸ ಸೇರ್ಪಡೆ
Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ