ತಾಕತ್ತಿದ್ದರೆ ಕೆಂಪಣ್ಣ ಲೋಕಾಯುಕ್ತಕ್ಕೆ ದೂರು ನೀಡಲಿ: ಕಾರಜೋಳ
Team Udayavani, Sep 27, 2022, 6:14 PM IST
ವಿಜಯಪುರ: ಕಾಂಗ್ರೆಸ್ ಪ್ರೇರಿತವಾಗಿ ಆಧಾರ ರಹಿತವಾಗಿ ಲಂಚದ ಆರೋಪ ಮಾಡುತ್ತಿರುವ ಕೆಂಪಣ್ಣ ಅವರಿಗೆ ನಿಜಕ್ಕೂ ತಾಕತ್ತಿದ್ದರೆ, ದಮ್ ಇದ್ದರೆ ಕೂಡಲೇ ತಮ್ಮ ಬಳಿ ಇರುವ ದಾಖಲೆಗಳ ಸಮೇತ ಲೋಕಾಯುಕ್ತಕ್ಕೆ ದೂರು ನೀಡಲಿ ಎಂದು ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಸವಾಲು ಹಾಕಿದರು.
ನಗರದಲ್ಲಿ ನಾಗಠಾಣ ವಿಧಾನಸಭಾ ಕ್ಷೇತ್ರದ ಕಾರ್ಯಕರ್ತರ ಸಮಾವೇಶದಲ್ಲಿ ಮಾತನಾಡಿದ ಅವರು, ಶೇ.40 ಕಮಿಷನ್ ಆರೋಪ ಮಾಡುವ ಕೆಂಪಣ್ಣ ಹಾಗೂ ಆತನ ಜೊತೆಗಿರುವವರು ಯಾವ ಕೆಲಸಕ್ಕೆ ಲಂಚ ಕೊಟ್ಟಿದ್ದಾರೆ ಎಂದು ದಾಖಲೆ ಸಮೇತ ಸ್ಪಷ್ಟಪಡಿಸಬೇಕು ಎಂದು ಆಗ್ರಹಿಸಿದರು.
ಕೆಂಪಣ್ಣ ಕಾಂಟ್ರಾಕ್ಟರ್ ಅಲ್ಲ, ಕಾಂಗ್ರೆಸ್ ನಾಯಕರ ಮನೆಯಲ್ಲಿ ಕುಳಿತೇ ಕೆಂಪಣ್ಣನಿಂದ ಅರ್ಜಿ ಬರೆಸಲಾಗಿದೆ. ಕೆಂಪಣ್ಣ, ಅವರನ್ನ ಬೆಂಬಲಿಸುತ್ತಿರುವ ಗುತ್ತಿಗೆದಾರರು ಯಾವ ಕೆಲಸ ಪಡೆದಿದ್ದಾರೆ, ಯಾವ ಕೆಲಸ ಮಾಡಿದ್ದಾರೆ. ಮಾಡಿದ ಕಾಮಗಾರಿಗೆ ಬಿಲ್ ಆಗಿಲ್ಲ, ಯಾರಿಗೆ ಲಂಚ ನೀಡಿದ್ದಾರೆ ಎಂದೆಲ್ಲ ನಿಖರವಾಗಿ ಸ್ಪಷ್ಟಪಡಿಸಬೇಕು ಎಂದು ಆಗ್ರಹಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ದಿ| ಜಾರ್ಜ್ ಫೆರ್ನಾಂಡಿಸ್ ಆದರ್ಶ, ಅವರೇ ಸ್ಫೂರ್ತಿ: ಕ್ಯಾ| ಬ್ರಿಜೇಶ್ ಚೌಟ
ಅಭಿವೃದ್ಧಿ ಎಂದರೆ ಏನೆಂದು ತೋರಿಸಲು ಈ ಬಾರಿ ಅವಕಾಶ ಕೊಡಿ: ಜೆ.ಪಿ. ಹೆಗ್ಡೆ
ಉಡುಪಿ-ಚಿಕ್ಕಮಗಳೂರು; ಕ್ಷೇತ್ರದಲ್ಲಿ ಆಗಬೇಕಿರುವ ಅಭಿವೃದ್ಧಿಯ ಸ್ಪಷ್ಟತೆಯಿದೆ: ಜೆ.ಪಿ.
ಉಡುಪಿ- ಚಿಕ್ಕಮಗಳೂರು: ಕ್ಷೇತ್ರದ ಅಭಿವೃದ್ಧಿಗೆ ಸಾಕಷ್ಟು ಅವಕಾಶಗಳು ಇವೆ: ಕೋಟ
Kinnigoli ಅಡಿಕೆ, ಹಿಂಗಾರ ಕಳವು ಮಾಡುತ್ತಿದ್ದ ವ್ಯಕ್ತಿಯ ಸೆರೆ