ಸಚಿವ ಹೆಗಡೆ ಸಿಎಂ ಅಭ್ಯರ್ಥಿಯಲ್ಲ: ರಾವ್ ಸ್ಪಷ್ಟನೆ
Team Udayavani, Jan 18, 2018, 5:12 PM IST
ಬೆಂಗಳೂರು : ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ ಕೇಂದ್ರ ಸಚಿವ ಅನಂತ್ ಕುಮಾರ್ ಹೆಗಡೆ ಅವರು ಮುಖ್ಯಮಂತ್ರಿಯಾಗುತ್ತಾರೆ ಎಂಬ ಊಹಾ ಪೋಹಗಳಿಗೆ ರಾಜ್ಯ ಬಿಜೆಪಿ ಉಸ್ತುವಾರಿ ಮುರಳೀಧರ ರಾವ್ ತೆರೆ ಎಳೆದಿದ್ದಾರೆ.
ಗುರುವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ರಾವ್ ‘ಬಿ.ಎಸ್.ಯಡಿಯೂರಪ್ಪ ಅವರೇ ನಮ್ಮ ಮುಖ್ಯಮಂತ್ರಿ ಅಭ್ಯರ್ಥಿ.ಇದರಲ್ಲಿ ಯಾವುದೇ ಬದಲಾವಣೆ ಇಲ್ಲ’ ಎಂದರು.
ನಮ್ಮ ಮುಖ್ಯಮಂತ್ರಿ ಅಭ್ಯರ್ಥಿಯಾಗಿರುವ ಯಡಿಯೂರಪ್ಪ ಅವರು ಈಗಾಗಲೇ 10 ಸಾವಿರ ಕಿ.ಲೋ ಮೀಟರ್ ಯಾತ್ರೆ ನಡೆಸಿ ರಾಜ್ಯ ಪ್ರವಾಸ ಮಾಡಿ ಪಕ್ಷ ಸಂಘಟನೆ ಮಾಡಿ ದ್ದಾರೆ ಎಂದರು.
ಕಳೆದ ಕೆಲ ದಿನಗಳಿಂದ ಬಿಜೆಪಿ ಅಧಿಕಾರಕ್ಕೆ ಬಂದರೆ ಅನಂತ್ ಕುಮಾರ್ ಹೆಗಡೆ ಸಿಎಂ ಆಗುತ್ತಾರೆ ಎಂಬ ಪೋಸ್ಟ್ಗಳು ಸಾಮಾಜಿಕ ತಾಣಗಳಲ್ಲಿ ವ್ಯಾಪಕವಾಗಿ ಹರಿದಾಡಿ ದ್ದವು.