ಮೊಬೈಲ್ ನಂಬರ್, ವಿಳಾಸ ತಪ್ಪು ನೀಡಿ ಟೆಸ್ಟ್: ಅಧಿಕಾರಿಗಳಿಗೆ ಹೊಸ ಸೂಚನೆ ನೀಡಿದ ಸಚಿವರು
Team Udayavani, Jul 27, 2020, 12:10 PM IST
ಬೆಂಗಳೂರು: ಕೋವಿಡ್ 19 ಪರೀಕ್ಷೆ ಮಾಡುವ ಸಂದರ್ಭದಲ್ಲಿ ಪರೀಕ್ಷೆಗೆ ಒಳಪಡುವವರು ತಮ್ಮ ವಿಳಾಸ, ಮೊಬೈಲ್ ಸಂಖ್ಯೆಗಳನ್ನು ತಪ್ಪು ತಪ್ಪು ನೀಡಿದ ಘಟನೆಗಳು ರಾಜ್ಯದಲ್ಲಿ ಬೆಳಕಿಗೆ ಬರುತ್ತಿದೆ. ಇದರಿಂದ ಸೋಂಕಿತರ ಪತ್ತೆ ಮಾಡುವುದೇ ಕಷ್ಟವಾಗಿದೆ. ಕೋವಿಡ್ ವಾರಿಯರ್ಸ್ ಗೆ ಇದೊಂದು ಸವಾಲಾಗಿದೆ. ಇದಕ್ಕಾಗಿ ವೈದ್ಯಕೀಯ ಶಿಕ್ಷಣ ಸಚಿವ ಕೆ ಸುಧಾಕರ್ ಅವರು ಹೊಸ ಉಪಾಯವೊಂದನ್ನು ಕಂಡುಕೊಂಡಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಸಚಿವರು, ಹೆಚ್ಚು ಕೋವಿಡ್ ಟೆಸ್ಟ್ ಮಾಡಿದರಷ್ಟೇ ಸೋಂಕು ನಿಯಂತ್ರಣ ಸುಲಭವಾಗುತ್ತದೆ. ರಾಜ್ಯದಲ್ಲಿ ಪ್ರತಿದಿನ 30-40 ಸಾವಿರ ಟೆಸ್ಟ್ ಮಾಡಲಾಗುತ್ತಿದೆ. ಕೆಲವರು ತಪ್ಪು ವಿಳಾಸ, ತಪ್ಪು ಮೊಬೈಲ್ ನಂಬರ್ ಕೊಡುತ್ತಿದ್ದಾರೆ ಎಂದು ತಿಳಿದು ಬಂದಿದೆ. ಕಡ್ಡಾಯವಾಗಿ ಆಧಾರ್, ಐಡಿ ಕಾರ್ಡ್ ತೋರಿಸಿ ಒಟಿಪಿ ಬಂದ ಮೇಲೆ ಟೆಸ್ಟ್ ಮಾಡಲು ಸೂಚನೆ ನೀಡಿದ್ದೇನೆ ಎಂದಿದ್ದಾರೆ.
ಕೋವಿಡ್ ಪಾಸಿಟಿವ್ ಆದರೂ ಬಹಳಷ್ಟು ಮಂದಿ ಸೋಂಕಿತರು ಆರೋಗ್ಯ ಅಧಿಕಾರಿಗಳ ಕೈಗೆ ಸಿಗದೆ ಓಡಾಡುತ್ತಿದ್ದಾರೆ. ಇದರಿಂದ ಸೋಂಕಿತರ ಸಂಖ್ಯೆ ಜಾಸ್ತಿಯಾಗುವ ಆತಂಕ ಎದುರಾಗಿದೆ. ಹೀಗಾಗಿ ಸಚಿವರು ಹೊಸ ಸೂಚನೆ ನೀಡಿದ್ದಾರೆ.
ಹೆಚ್ಚು ಕೋವಿಡ್ ಟೆಸ್ಟ್ ಮಾಡಿದರಷ್ಟೇ ಕೊರೊನಾ ನಿಯಂತ್ರಣ ಸುಲಭವಾಗುತ್ತದೆ. ರಾಜ್ಯದಲ್ಲಿ ಪ್ರತಿದಿನ 30-40 ಸಾವಿರ ಟೆಸ್ಟ್ ಮಾಡಲಾಗುತ್ತಿದೆ. ಕೆಲವರು ತಪ್ಪು ವಿಳಾಸ, ತಪ್ಪು ಮೊಬೈಲ್ ನಂಬರ್ ಕೊಡುತ್ತಿದ್ದಾರೆ ಎಂದು ತಿಳಿದು ಬಂದಿದೆ. ಕಡ್ಡಾಯವಾಗಿ ಆಧಾರ್, ಐಡಿ ಕಾರ್ಡ್ ತೋರಿಸಿ OTP ಬಂದ ಮೇಲೆ ಟೆಸ್ಟ್ ಮಾಡಲು ಸೂಚನೆ ನೀಡಿದ್ದೇನೆ.
— Dr Sudhakar K (@mla_sudhakar) July 27, 2020
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ
Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ
Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ
ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil
ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?
MUST WATCH
ಹೊಸ ಸೇರ್ಪಡೆ
Reliance Jio Profit; ರಿಲಯನ್ಸ್ ಜಿಯೊ ನಿವ್ವಳ ಲಾಭ ಶೇ 13ರಷ್ಟು ಹೆಚ್ಚಳ
Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್
Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ
Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ
ಕಾಂಗ್ರೆಸ್ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ