ಮುನಿಯಪ್ಪ ಹೇಳಿಕೆಗೆ ಸಚಿವ ಎಂಟಿಬಿ ಆಕ್ಷೇಪ
Team Udayavani, Jul 1, 2019, 3:00 AM IST
ಕೋಲಾರ: ಸಿದ್ದರಾಮಯ್ಯ ಕೊಟ್ಟ ಅಕ್ಕಿ ತಿಂದು, ಮೋದಿಗೆ ಮತ ಹಾಕಿದರು ಎಂಬ ಮಾಜಿ ಸಂಸದ ಕೆ.ಎಚ್.ಮುನಿಯಪ್ಪ ಹೇಳಿಕೆಗೆ ರಾಜ್ಯ ವಸತಿ ಸಚಿವ ಎಂಟಿಬಿ ನಾಗರಾಜ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಭಾನುವಾರ ಸುದ್ದಿಗಾರರೊಂದಿಗೆ ಅವರು ಮಾತನಾಡಿ, ಜನರ ಸೇವೆಯೇ ದೇವರ ಸೇವೆ, ಕರ್ತವ್ಯವೇ ದೇವರು. ರಾಜಕೀಯದ ಕೋಪದಿಂದ ಮುನಿಯಪ್ಪ ಹಾಗೆ ಮಾತನಾಡಿದ್ದಾರೆ. ಸಿದ್ದರಾಮಯ್ಯ ಕೊಟ್ಟ ಅಕ್ಕಿ ಅನ್ನ ತಿಂದು ಬಿಜೆಪಿಗೆ ಓಟು ಹಾಕಿದರು ಎಂಬ ಮುನಿಯಪ್ಪ ಹೇಳಿಕೆಗೆ ನನ್ನ ಆಕ್ಷೇಪವಿದೆ.
ಜನರಿಗೆ ಯೋಜನೆ ನೀಡಿ, ಓಟು ಯಾಕೆ ಹಾಕಿಲ್ಲ ಎಂದು ಕೇಳ್ಳೋದು ಸಮಂಜಸವಲ್ಲ. ನೀಡಿದ ಭರವಸೆಯಂತೆ ಎಲ್ಲಾ ಕೆಲಸ ಮಾಡಿ ದುಡಿಮೆಗೆ ಬೆಲೆಯನ್ನು ಸಿದ್ದರಾಮಯ್ಯ ಕೇಳಿದ್ದಾರೆ ಅಷ್ಟೆ, ಕೊಟ್ಟಿದ್ದನ್ನು ಹೇಳಿಕೊಳ್ಳುವುದು ಬೇಡ. ಸರ್ಕಾರ ಬಡವರ ಪರವಾಗಿ ಕೊಟ್ಟ ಯೋಜನೆಗಳನ್ನು ಹೇಳಿಕೊಳ್ಳಬಾರದು ಎಂದರು.
ವಾಸ್ತವವಾಗಿ ರಾಜ್ಯದಲ್ಲಿ ಕನ್ನಡಕ್ಕೆ ಮೊದಲ ಆದ್ಯತೆ ನೀಡಬೇಕು. ಶಿಕ್ಷಣದಲ್ಲಿ ಕನ್ನಡ ಪ್ರಥಮ ಭಾಷೆಯಾಗಬೇಕು. ಸರ್ಕಾರದ ಆಡಳಿತ, ಆದೇಶಗಳು ಎಲ್ಲವೂ ಕನ್ನಡದಲ್ಲೇ ಇವೆ. ಆದರೆ, ಇಂಗ್ಲೀಷ್ ಜ್ಞಾನದ ಕೊರತೆಯಿಂದ ಕನ್ನಡ ಶಾಲೆ, ಕಾಲೇಜಿನಲ್ಲಿ ಓದಿದ ಮಕ್ಕಳು ಕೈಗಾರಿಕೆ, ಕಂಪನಿಗಳಲ್ಲಿ ಉದ್ಯೋಗ ಗಿಟ್ಟಿಸಿಕೊಳ್ಳಲು ಆಗುತ್ತಿಲ್ಲ.
ವಾಚ್ಮನ್, ಕಸ ಗುಡಿಸುವವರು, ಡ್ರೈವರ್…ಎಲ್ಲಾ ಹುದ್ದೆಗೂ ಈಗ ಇಂಗ್ಲೀಷ್ ಗೊತ್ತಿರಬೇಕು. ಅಂತಹ ಕಷ್ಟದ ದಿನಗಳನ್ನು ಕಾಣುತ್ತಿದ್ದೇವೆ. ಹೀಗಾಗಿ, ಸರ್ಕಾರ ಕನ್ನಡ ಶಾಲೆಗಳಲ್ಲೂ ಇಂಗ್ಲೀಷ್ ಮಾಧ್ಯಮ ಬೋಧನೆಗೆ ಅವಕಾಶ ಮಾಡಿಕೊಟ್ಟಿದೆ ಎಂದು ಸರ್ಕಾರದ ಕ್ರಮವನ್ನು ಸಮರ್ಥಿಸಿಕೊಂಡರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ
Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ
Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು
Lok Sabha Election: ಕಾಂಗ್ರೆಸ್ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ
BJP ಯಿಂದ ನಿರ್ಲಕ್ಷ್ಯ… ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಕೆ.ಪಿ.ನಂಜುಂಡಿ
MUST WATCH
ಹೊಸ ಸೇರ್ಪಡೆ
ಶರ್ಟ್ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!
ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ
Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ
Editorial: ಗುಕೇಶ್ ಗೆಲುವು- ಭಾರತದ ಯುವಶಕ್ತಿಯ ಸಂಕೇತ
AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ