ಪೌರಾಡಳಿತ ಸಚಿವ ಶಿವಳ್ಳಿ ವಿಧಿವಶ


Team Udayavani, Mar 23, 2019, 12:30 AM IST

99.jpg

ಹುಬ್ಬಳ್ಳಿ: ಪೌರಾಡಳಿತ ಸಚಿವ ಮತ್ತು ಧಾರವಾಡ ಜಿಲ್ಲೆ ಕುಂದಗೋಳ ಕಾಂಗ್ರೆಸ್‌ ಶಾಸಕ ಚೆನ್ನಬಸಪ್ಪ ಸತ್ಯಪ್ಪ ಶಿವಳ್ಳಿ (ಸಿ.ಎಸ್‌. ಶಿವಳ್ಳಿ) ಶುಕ್ರವಾರ ಅಪರಾಹ್ನ 1.45ರ ಸುಮಾರಿಗೆ ತೀವ್ರ ಹೃದ ಯಾಘಾತದಿಂದ ಇಲ್ಲಿನ ಖಾಸಗಿ ಆಸ್ಪತ್ರೆಯಲ್ಲಿ  ಕೊನೆಯುಸಿರೆಳೆದರು.

ಬೆಳಗ್ಗೆ ಹುಬ್ಬಳ್ಳಿಯಲ್ಲಿನ ತನ್ನ ನಿವಾಸದಲ್ಲಿ ಕುಂದಗೋಳ ಕ್ಷೇತ್ರದಿಂದ ಬಂದ ಜನರೊಂದಿಗೆ ಚರ್ಚೆ ಯಲ್ಲಿದ್ದಾಗ, ಯಾಕೋ ಚಳಿಯಾಗುತ್ತಿದೆ ಎಂದು ಹೇಳಿಕೊಂಡಿದ್ದರು. ಕುಟುಂಬದವರು ಕಿಮ್ಸ್‌ ವೈದ್ಯರಿಗೆ ಮಾಹಿತಿ ನೀಡಿದ್ದು, ಮಧ್ಯಾಹ್ನ 12 ಗಂಟೆ ಸುಮಾರಿಗೆ ವಾಂತಿ ಮಾಡಿ ಕೊಂಡು ಕುಸಿದು ಬಿದ್ದರು. ಇದೇ ವೇಳೆ ತೀವ್ರ ಹೃದಯಾ ಘಾತ ವಾಗಿದೆ ಎನ್ನಲಾಗುತ್ತಿದೆ. ಕಿಮ್ಸ್‌ ವೈದ್ಯರು ಸಚಿವರ ನಿವಾಸಕ್ಕೆ ಧಾವಿಸಿ ಪ್ರಾಥಮಿಕ ಚಿಕಿತ್ಸೆ ನೀಡಿದ್ದರಲ್ಲದೆ, ತತ್‌ಕ್ಷಣವೇ ಹತ್ತಿರದ ಖಾಸಗಿ ಆಸ್ಪತ್ರೆಗೆ ದಾಖಲಿಸಿದರು. ಗೋಕುಲ ರಸ್ತೆಯ ಲೈಫ್ಲೈನ್‌ ಆಸ್ಪತ್ರೆಯಲ್ಲಿ ಸಚಿವರಿಗೆ ಚಿಕಿತ್ಸೆ ನೀಡಲಾಯಿತಾದರೂ ಚಿಕಿತ್ಸೆ ಫ‌ಲಕಾರಿಯಾಗದೆ ಅಪರಾಹ್ನ 1.45ರ ಸುಮಾರಿಗೆ ಕೊನೆಯುಸಿರೆಳೆದಿದ್ದಾರೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.
ಹೃದಯ ಸಮಸ್ಯೆ ಹೊಂದಿದ್ದರು.

ಸಿ.ಎಸ್‌.ಶಿವಳ್ಳಿ ಅವರಿಗೆ ಹೃದಯ ಸಮಸ್ಯೆ ಇತ್ತು. 2017ರಲ್ಲಿ ತೀವ್ರ ಅಸ್ವಸ್ಥರಾಗಿ ಕಿಮ್ಸ್‌ಗೆ ದಾಖ ಲಾಗಿದ್ದರು. ಅನಂತರ ಏರ್‌ ಆ್ಯಂಬುಲೆನ್ಸ್‌ನಲ್ಲಿ ಅವರನ್ನು ಬೆಂಗಳೂರಿಗೆ ಕರೆದೊಯ್ದು, ಕೊಲಂಬಿಯಾ ಆಸ್ಪತ್ರೆಯಲ್ಲಿ ತೆರೆದ ಹೃದಯ ಶಸ್ತ್ರಚಿಕಿತ್ಸೆ ಮಾಡಲಾಗಿತ್ತು. ಅನಂತರ ಚೇತರಿಸಿದ ಶಿವಳ್ಳಿ ಅವರು 2018ರ ಚುನಾವಣೆಯಲ್ಲಿ ಸ್ಪರ್ಧಿಸಿ ಗೆಲುವು ಸಾಧಿಸಿದ್ದರು. ಇತ್ತೀಚೆಗಷ್ಟೇ ಸಚಿವರಾಗಿ ನೇಮಕಗೊಂಡ ಅನಂತರ ಕುಂದಗೋಳ ಮತಕ್ಷೇತ್ರದ ಕುರಡಿಕೇರಿಯಲ್ಲಿ ಆಹಾರ ಸೇವಿಸಿದ ಬಳಿಕ ಅಸ್ವಸ್ಥಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಂಡಿದ್ದರು.

ರಕ್ಷಣಾ ಕಾರ್ಯಾಚರಣೆಯ ಉಸ್ತುವಾರಿ ಹೊತ್ತಿದ್ದ ಶಿವಳ್ಳಿ
ಧಾರವಾಡದಲ್ಲಿ ಬಹುಮಹಡಿ ವಾಣಿಜ್ಯ ಸಂಕೀರ್ಣ ಕುಸಿದು ಬಿದ್ದ ಬಳಿಕ ಸ್ಥಳದಲ್ಲೇ ಖುದ್ದಾಗಿ ಹಾಜರಿದ್ದು, ರಕ್ಷಣಾ ಕಾರ್ಯದ ಪರಿಶೀಲನೆ ಕೈಗೊಂಡಿದ್ದರು. ಸ್ಥಳಕ್ಕೆ ಬಂದಿದ್ದ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಅವರೊಂದಿಗೆ ಗುರುವಾರ ರಾತ್ರಿ 9 ಗಂಟೆಯವರೆಗೂ ಇದ್ದರು. 
ಧಾರವಾಡ ಜಿಲ್ಲೆ ಕುಂದಗೋಳ ವಿಧಾನಸಭಾ ಕ್ಷೇತ್ರದಿಂದ ಒಟ್ಟು 3 ಬಾರಿ ಶಾಸಕರಾಗಿ ಆಯ್ಕೆಯಾಗಿದ್ದ ಸಿ.ಎಸ್‌. ಶಿವಳ್ಳಿ ಅವರು ಕೆಲವೇ ತಿಂಗಳ ಹಿಂದೆಯಷ್ಟೇ ಕುಮಾರಸ್ವಾಮಿ ನೇತೃತ್ವದ ಸಮ್ಮಿಶ್ರ ಸರಕಾರದಲ್ಲಿ ಸಚಿವರಾಗಿ ನೇಮಕಗೊಂಡಿದ್ದರು. 

ಸ್ವಗ್ರಾಮದಲ್ಲಿ ಇಂದು ಅಂತ್ಯಕ್ರಿಯೆ
ಸಚಿವ ಸಿ.ಎಸ್‌. ಶಿವಳ್ಳಿ ಅವರ ಅಂತ್ಯಕ್ರಿಯೆ ಸ್ವಗ್ರಾಮ ಕುಂದಗೋಳ ತಾಲೂಕು ಯರಗುಪ್ಪಿಯಲ್ಲಿ ಶನಿವಾರ ನಡೆಯಲಿದೆ. ಯರಗುಪ್ಪಿನಲ್ಲಿನ ಸಚಿವರ ಹೊಲದಲ್ಲಿಯೇ ಸಕಲ ಸರಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ನಡೆಸಲಾಗುತ್ತದೆ. ಮಾ.22ರಿಂದ 24ರವರೆಗೆ ರಾಜ್ಯಾದ್ಯಂತ ಮೂರು ದಿನಗಳ ಶೋಕಾಚರಣೆ ಘೋಷಿಸಲಾಗಿದೆ.
 

ಟಾಪ್ ನ್ಯೂಸ್

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್‌ಸಿ ಮೀಸಲಾತಿ ಹೇಳಿಕೆಗೆ ವಿರೋಧ

Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್‌ಸಿ ಮೀಸಲಾತಿ ಹೇಳಿಕೆಗೆ ವಿರೋಧ

ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ

Lok Sabha Election; ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

4-annamalai

Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.