ಇಲಾಖೆಯ ಅಭಿವೃದ್ಧಿ ಕುಂಠಿತವಾದರೆ ಶಿಸ್ತುಕ್ರಮ : ಸಚಿವ ಪ್ರಭು ಚವ್ಹಾಣ್
Team Udayavani, May 28, 2021, 7:50 PM IST
ಬೆಂಗಳೂರು : ಕೋವಿಡ್ ನೆಪ ಮುಂದಿಟ್ಟುಕೊಂಡು ಪಶುಸಂಗೋಪನೆ ಇಲಾಖೆಯ ಅಭಿವೃದ್ಧಿ ಕುಂಠಿತವಾದರೆ ಶಿಸ್ತು ಕ್ರಮ ಕೈಗೊಳ್ಳುವುದಾಗಿ ಪಶುಸಂಗೋಪನೆ ಸಚಿವ ಪ್ರಭು ಚವ್ಹಾಣ್ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದ್ದಾರೆ.
ಪಶುಪಾಲನಾ ಭವನದಲ್ಲಿ ನಡೆದ ಇಲಾಖಾ ಅಧಿಕಾರಿಗಳ ಸಭೆಯಲ್ಲಿ ಸಚಿವರು ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು. ಕೋವಿಡ್ ನೆಪ ಒಡ್ಡಿ ಗೋಶಾಲೆಗಳತ್ತ ಅಧಿಕಾರಿಗಳು ತಲೆ ಹಾಕುತ್ತಿಲ್ಲ, ಜಾನುವಾರುಗಳ ಆರೋಗ್ಯ ತಪಾಸಣೆ, ಜಾನುವಾರುಗಳಿಗೆ ಕಿವಿಓಲೆ (ಟ್ಯಾಗ್) ಹಾಕುವುದು ಸರಿಯಾಗಿ ಆಗುತ್ತಿಲ್ಲ ಎಂದು ರಾಜ್ಯದ ವಿವಿಧ ಭಾಗಗಳಿಂದ ದೂರುಗಳು ಬರುತ್ತಿದ್ದು ಜಾನುವಾರು ಸಾಕಣೆದಾರರು ಮತ್ತು ರೈತರ ಸಮಸ್ಯೆಗಳಿಗೆ ತಕ್ಷಣ ಸ್ಪಂದಿಸಿ ಎಂದು ಸಚಿವರು ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದ್ದಾರೆ.
ರಾಜ್ಯಾದ್ಯಂತ ಲಸಿಕೆಗೆ ಕ್ರಮ
ಬೆಂಗಳೂರು ಗ್ರಾಮಾಂತರ ಸೇರಿದಂತೆ ಕಾಲುಬಾಯಿ ರೋಗ ಕಾಣಿಸಿಕೊಳ್ಳುತ್ತಿರುವುದರಿಂದ ರಾಜ್ಯಾದ್ಯಂತ ತಕ್ಷಣಕ್ಕೆ ಲಸಿಕೆ ವ್ಯವಸ್ಥೆ ಮಾಡಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಅಲ್ಲದೇ ಆಂಥ್ರಾಕ್ಸ್, ಚಪ್ಪೆರೋಗ, ಗಳಲೇ ರೋಗ, ಬ್ರುಸೆಲೋಸಿಸ್ ಸೇರಿದಂತೆ ವಿವಿಧ ರೋಗಗಳ ವಿರುದ್ದ ಲಸಿಕಾ ಕಾರ್ಯ ಮತ್ತಷ್ಟು ತೀವ್ರಗತಿಯಲ್ಲಿ ನಡೆಸಲು ಸಚಿವರು ಅಧಿಕಾರಿಗಳಿಗೆ ತಿಳಿಸಿದ್ದಾರೆ. ಇದರೊಂದಿಗೆ ಲಸಿಕೆ ನೀಡುವ ಮೊದಲು ಜಾನುವಾರುಗಳಿಗೆ ನೀಡಲಾಗುವ ಜಂತುನಾಶಕ ಔಷಧವನ್ನು ಕಡ್ಡಾಯವಾಗಿ ನೀಡಬೇಕು ಹಾಗೂ ರಾಜ್ಯಾದ್ಯಂತ ಲಸಿಕಾ ಅಭಿಯಾನಗಳನ್ನು ಮತ್ತಷ್ಟು ಚುರುಕುಗೊಳಿಸಬೇಕು ಎಂದು ಅಧಿಕಾರಿಗಳಿಗೆ ಸಚಿವರು ತಾಕಿತು ಮಾಡಿದ್ದಾರೆ.
ಔಷಧ ಕೋರತೆ ಇಲ್ಲ
ರಾಜ್ಯದಲ್ಲಿ ಜಾನುವಾರುಗಳಿಗೆ ನೀಡಲಾಗುವ ಉಚಿತ ಔಷಧಗಳ ದಾಸ್ತಾನು ಸಾಕಷ್ಟಿದ್ದು ಗುಣಮಟ್ಟದ ಔಷಧವನ್ನು ಜಾನುವಾರುಗಳಿಗೆ ನೀಡಲು ಪಶುವೈದ್ಯಾಧಿಕಾರಿಗಳಿಗೆ ಸಚಿವರು ತಿಳಿಸಿದ್ದಾರೆ. ೨೦೨೧-೨೨ನೇ ಸಾಲಿನ ಮೊದಲ ಕಂತು ಆರ್ಥಿಕ ಇಲಾಖೆಯಿಂದ ಬಿಡುಗಡೆ ಆಗಿದ್ದು ಪಶುಸಂಗೋಪನೆ ಇಲಾಖೆಯ ಎಲ್ಲ ಅಭಿವೃದ್ಧಿ ಕೆಲಸಗಳು ಮತ್ತಷ್ಟು ವೇಗೆದಿಂದ ಸಾಗಬೇಕು ಎಂದು ಸಚಿವರು ಹೇಳಿದರು.
ಇದೇ ಸಂದರ್ಭದಲ್ಲಿ ಬೆಂಗಳೂರಿನ ಪಶುಪಾಲನಾ ಭವನದಲ್ಲಿ ನೂತನವಾಗಿ ನಿರ್ಮಾಣಗೊಳ್ಳುತ್ತಿರುವ ವಾರ್ ರೂಮ್ ಗೆ ಸಚಿವರು ಭೇಟಿ ನೀಡಿದರು. ವಾರ್ ರೂಮ್ ಗೆ ಬೇಕಾದ ಎಲ್ಲ ತಂತ್ರಜ್ಞಾನ ಹಾಗೂ ಇತರೆ ವ್ಯವಸ್ಥೆಗಳನ್ನು ಪರಿಶೀಲಿಸಿದರು. ಈ ಸಂದರ್ಭದಲ್ಲಿ ಪಶುಸಂಗೋಪನೆ ಇಲಾಖೆಯ ಕಾರ್ಯದರ್ಶಿ ಕ್ಯಾಪ್ಟನ್ ಮಣಿವಣ್ಣನ ಸೇರಿದಂತೆ ಇಲಾಖೆಯ ಅಧಿಕಾರಿಗಳು ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ
Belthangady: ತುಮಕೂರು ತ್ರಿಬ್ಬಲ್ ಮರ್ಡರ್ ಪ್ರಕರಣ;ಮನೆಮಂದಿಗೆ ಇಂದು ತಲುಪಿದ ಮೃತದೇಹ
Mukhtar Ansari: ಕುಖ್ಯಾತ ಗ್ಯಾಂಗ್ಸ್ಟರ್, 5 ಬಾರಿ ಶಾಸಕ ಅನ್ಸಾರಿ ಸಾವು
Horoscope: ಉದ್ಯೋಗ ಸ್ಥಾನದಲ್ಲಿ ಮೇಲಿನವರಿಂದ ಶ್ಲಾಘನೆ, ಮಹಿಳಾ ಉದ್ಯಮಿಗಳಿಗೆ ಯಶಸ್ಸು
ಸಂಸದ ಡಿ.ಕೆ.ಸುರೇಶ್ ಆಸ್ತಿ ಮೌಲ್ಯ 593 ಕೋಟಿ ರೂ.!