ಚರ್ಮಗಂಟು ರೋಗ: 30 ಸಾವಿರ ರಾಸು ಸಾವು: ಸಚಿವ ಪ್ರಭು ಚೌಹಾಣ್
Team Udayavani, Feb 23, 2023, 6:10 AM IST
ಬೆಂಗಳೂರು: ಚರ್ಮಗಂಟು ರೋಗದಿಂದ ರಾಜ್ಯದಲ್ಲಿ 30 ಸಾವಿರ ಜಾನುವಾರುಗಳ ಸಾವನ್ನಪ್ಪಿವೆ ಎಂದು ಪಶು ಸಂಗೋಪನ ಸಚಿವ ಪ್ರಭು ಚೌಹಾಣ್ ಅವರು ಹೇಳಿದರು.
ಪ್ರಶ್ನೋತ್ತರ ಅವಧಿಯಲ್ಲಿ ಜೆಡಿಎಸ್ನ ಕೆ.ಎ. ತಿಪ್ಪೇಸ್ವಾಮಿ ಪ್ರಶ್ನೆಗೆ ಉತ್ತರಿಸಿದ ಸಚಿವರು, ರಾಜ್ಯಾದ್ಯಂತ 3.25 ಲಕ್ಷ ಜಾನುವಾರುಗಳು ಚರ್ಮಗಂಟು ರೋಗಕ್ಕೆ ತುತ್ತಾಗಿದ್ದು, ಈ ಪೈಕಿ 30,297 ಜಾನುವಾರುಗಳು ಸಾವನ್ನಪ್ಪಿವೆ. ರೋಗದಿಂದ ಸಾವನ್ನಪ್ಪಿದ ಜಾನುವಾರುಗಳ ಮಾಲೀಕರಿಗೆ ಇದುವರೆಗೂ 37 ಕೋಟಿ ರೂ. ಪರಿಹಾರ ಬಿಡುಗಡೆ ಮಾಡಲಾಗಿದೆ. ಇನ್ನು 12 ಕೋಟಿ ರೂ.ಗಳನ್ನು ಶೀಘ್ರದಲ್ಲೇ ಬಿಡುಗಡೆ ಮಾಡಲಾಗುವುದು ಎಂದರು.
ಚರ್ಮಗಂಟು ರೋಗದಿಂದ ಮೃತಪಟ್ಟ ಜಾನುವಾರುಗಳ ಮಾಲಕರಿಗೆ ಪರಿಹಾರ ಧನವನ್ನು ಪ್ರತೀ ಕರುವಿಗೆ 5 ಸಾವಿರ, ಪ್ರತೀ ಹಸುವಿಗೆ 20 ಸಾವಿರ ಮತ್ತು ಪ್ರತೀ ಎತ್ತಿಗೆ 30 ಸಾವಿರದಂತೆ ಘೋಷಿಸಲಾಗಿದೆ.
ಈ ಸಂಬಂಧ ಪರಿಹಾರ ಹೆಚ್ಚಿಸುವ ಕುರಿತು ಪರಿಶೀಲನೆ ನಡೆಸಲಾಗುವುದು. ಮೃತಪಟ್ಟ 30,297 ಜಾನುವಾರಗಳ ಪೈಕಿ 17,564 ಜಾನುವಾರುಗಳಿಗೆ ಪರಿಹಾರ ನೀಡಲಾಗಿದೆ. 2.57 ಲಕ್ಷ ಜಾನುವಾರುಗಳು ಗುಣಮುಖವಾಗಿವೆ. ಈವರೆಗೆ 1 ಕೋಟಿ ಜಾನುವಾರುಗಳಿಗೆ ಲಸಿಕೆ ಹಾಕಲಾಗಿದೆ ಎಂದರು.
ದನದ ಮಾಂಸ ರಫ್ತಾಗುತ್ತಿದ್ದರೆ ಕಠಿನ ಕ್ರಮ
ಬೆಂಗಳೂರು: ರಾಜ್ಯದಿಂದ ಗೋವಾಕ್ಕೆ ದನದ ಮಾಂಸ ರಫ್ತಾಗುತ್ತಿದ್ದರೆ ಕಠಿನ ಕ್ರಮ ಕೈಗೊಳ್ಳಲಾಗುವುದು ಎಂದು ಪಶು ಸಂಗೋಪನ ಸಚಿವ ಪ್ರಭು ಚೌಹಾಣ್ ತಿಳಿಸಿದ್ದಾರೆ.
ಪ್ರಶ್ನೋತ್ತರ ಅವಧಿಯಲ್ಲಿ ಕಾಂಗ್ರೆಸ್ನ ಕೆ. ಹರೀಶ್ ಕುಮಾರ್ ಪ್ರಶ್ನೆಗೆ ಉತ್ತರಿಸಿ, ಕರ್ನಾಟಕದಿಂದ ಗೋವಾಕ್ಕೆ ದನದ ಮಾಂಸ ರಫ್ತು ಆಗುತ್ತಿಲ್ಲ ಎಂದು ಸಚಿವರು ಹೇಳಿದರು. ಅದಕ್ಕೆ ಗೋವಾಕ್ಕೆ ಪ್ರತೀದಿನ 2 ಟನ್ ದನದ ಮಾಂಸ ಬರುತ್ತಿದೆ ಎಂದು ಗೋವಾ ಸರಕಾರ ಹೇಳಿದೆ. ಹಾಗಾದರೆ, ಆ ಮಾಂಸ ಎಲ್ಲಿಂದ ಬರುತ್ತಿದೆ ಎಂದು ಹರೀಶ್ಕುಮಾರ್ ಮರು ಪ್ರಶ್ನೆ ಮಾಡಿದರು.
ನಮ್ಮ ರಾಜ್ಯದಿಂದ ಗೋವಾಕ್ಕೆ ದನದ ಮಾಂಸ ಹೋಗುತ್ತಿದ್ದರೆ ಕಠಿನ ಕ್ರಮ ಕೈಗೊಳ್ಳಲಾಗುವುದು.
ಗೋಹತ್ಯೆ ನಿಷೇಧ ಕಾಯ್ದೆ ಜಾರಿಗೆ ಬಂದ ಮೇಲೆ 1,329 ಪ್ರಕರಣಗಳನ್ನು ದಾಖಲಿಸಿದ್ದು, 10 ಸಾವಿರ ಹಸುಗಳನ್ನು ರಕ್ಷಣೆ ಮಾಡಲಾಗಿದೆ ಎಂದು ಸಚಿವರು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hunasur: ಅನಾರೋಗ್ಯದಿಂದ ಒಂದೇ ದಿನ ಕುಟುಂಬದ ಇಬ್ಬರ ಮೃತ್ಯು…
ಧಾರವಾಡದ ಐಐಐಟಿ ನಿರ್ದೇಶಕರಾಗಿ ಪ್ರೊ.ಮಹಾದೇವ ಪ್ರಸನ್ನ ನೇಮಕ
ಶಿವಮೊಗ್ಗ: ಹಾಡಹಗಲೇ ನಡುರಸ್ತೆಯಲ್ಲಿ ಇಬ್ಬರು ರೌಡಿಶೀಟರ್ ಗಳ ಭೀಕರ ಹತ್ಯೆ, ಬಿಗುವಿನ ವಾತಾವರಣ
Bandipura ಅರಣ್ಯಕ್ಕೆ ಬೆಂಕಿ ಹಚ್ಚಿದ್ದ ಪ್ರಕರಣ: ಅರಣ್ಯಾಧಿಕಾರಿಗಳಿಂದ ಓರ್ವ ಆರೋಪಿಯ ಬಂಧನ
Extended;ಎಚ್.ಡಿ.ರೇವಣ್ಣ ನ್ಯಾಯಾಂಗ ಬಂಧನ ಮೇ 14ರವರೆಗೆ ವಿಸ್ತರಣೆ
MUST WATCH
ಹೊಸ ಸೇರ್ಪಡೆ
Panaji: ಮಕ್ಕಳಿಗಾಗಿ ಬ್ಯಾಂಕ್ ಲಾಕರ್ನಲ್ಲಿ ಇಟ್ಟಿದ್ದ 3 ಕೋಟಿ ಮೌಲ್ಯದ ನೋಟು ಅಮಾನ್ಯ!
Hunasur: ಅನಾರೋಗ್ಯದಿಂದ ಒಂದೇ ದಿನ ಕುಟುಂಬದ ಇಬ್ಬರ ಮೃತ್ಯು…
Fishing ಕಾಲಿಗೆ ಮೀನಿನ ಬಲೆ ಸಿಲುಕಿ ಸಮುದ್ರಕ್ಕೆ ಬಿದ್ದ ಮೀನುಗಾರ; ಆಸ್ಪತ್ರೆಗೆ ದಾಖಲು
ಧಾರವಾಡದ ಐಐಐಟಿ ನಿರ್ದೇಶಕರಾಗಿ ಪ್ರೊ.ಮಹಾದೇವ ಪ್ರಸನ್ನ ನೇಮಕ
Panaji; ಮೇ 11 ರಿಂದ ಗೋವಾದಲ್ಲಿ ಕೆಲವೆಡೆ ತುಂತುರು ಮಳೆ ಸಾಧ್ಯತೆ