ಹಸುಗಳ ಜತೆಗೆ ಎತ್ತು, ಹೋರಿ, ಕೋಣ ವಿಮಾ ವ್ಯಾಪ್ತಿಗೆ: ಸಚಿವ ಪ್ರಭು ಬಿ. ಚೌಹಾಣ್‌


Team Udayavani, Feb 14, 2023, 7:30 AM IST

ಹಸುಗಳ ಜತೆಗೆ ಎತ್ತು, ಹೋರಿ, ಕೋಣ ವಿಮಾ ವ್ಯಾಪ್ತಿಗೆ: ಸಚಿವ ಪ್ರಭು ಬಿ. ಚೌಹಾಣ್‌

ಬೆಂಗಳೂರು: ರಾಷ್ಟ್ರೀಯ ಜಾನುವಾರು ಮಿಷನ್‌ ಯೋಜನೆ ಅನ್ವಯ ಪ್ರಸಕ್ತ ಸಾಲಿನಿಂದ ಹಸುಗಳ ಜತೆಗೆ ಎತ್ತು, ಹೋರಿ, ಕೋಣ, ಮಣಕ, ಕುರಿ, ಮೊಲ, ಹಂದಿ, ದೇಶಿ ತಳಿ ರಾಸುಗಳನ್ನೂ ವಿಮಾ ವ್ಯಾಪ್ತಿಗೊಳಪಡಿಸಲು ಅರ್ಹ ವಿಮಾ ಸಂಸ್ಥೆ ಗುರುತಿಸಲಾಗುತ್ತಿದೆ ಎಂದು ಪಶು ಸಂಗೋಪನೆ ಸಚಿವ ಪ್ರಭು ಬಿ. ಚೌಹಾಣ್‌ ತಿಳಿಸಿದ್ದಾರೆ.

ಶಾಸಕ ಯು.ಟಿ. ಖಾದರ್‌ ಪರವಾಗಿ ಪ್ರಶ್ನೆ ಕೇಳಿದ ಅಜಯ್‌ ಧರಂಸಿಂಗ್‌ಗೆ ಉತ್ತರಿಸಿದ ಅವರು, ಇದಕ್ಕಾಗಿ 14 ಕೋಟಿ ರೂ. ಅನುದಾನ ಮೀಸಲಿಟ್ಟಿದ್ದು, ಟೆಂಡರ್‌ ಪ್ರಕ್ರಿಯೆ ಕೈಗೊಳ್ಳಲಾಗಿದೆ. ಕೇಂದ್ರದಿಂದ ಅನುದಾನ ಬಿಡುಗಡೆಯಾದ ಕೂಡಲೇ ಮಲೆನಾಡು ಗಿಡ್ಡ ತಳಿಯ ಹಸುಗಳನ್ನೂ ವಿಮೆ ವ್ಯಾಪ್ತಿಗೆ ಒಳಪಡಿಸಲಾಗುವುದು ಎಂದು ಹೇಳಿದರು.

ದೇಗುಲಗಳ ಅಭಿವೃದ್ಧಿಗೆ 483 ಕೋಟಿ ರೂ.
ಮುಜರಾಯಿ ಮತ್ತು ಮುಜರಾಯೇತರ ದೇವಸ್ಥಾನಗಳ ಅಭಿವೃದ್ಧಿಗೆ 2022-23ನೇ ಸಾಲಿನಲ್ಲಿ 483 ಕೋಟಿ ರೂ. ಅನುದಾನ ಬಿಡುಗಡೆ ಮಾಡಿದೆ. ದುರಸ್ತಿ, ಜೀರ್ಣೋದ್ಧಾರ, ನಿರ್ಮಾಣಕ್ಕೆಂದು 422 ಕೋಟಿ ರೂ., ಆರಾಧನಾ ಯೋಜನೆಗೆ 5 ಕೋಟಿ ರೂ., ಪರಿಶಿಷ್ಟ ಉಪಯೋಜನೆಯಡಿ 5 ಕೋಟಿ ರೂ., ಗಿರಿಜನ ಉಪಯೋಜನೆಯಡಿ 1.20 ಕೋಟಿ ರೂ. ಸೇರಿ ಒಟ್ಟು 483 ಕೋಟಿ ರೂ. ಒದಗಿಸಲಾಗಿದೆ ಎಂದು ಕಂದಾಯ ಸಚಿವ ಆರ್‌. ಅಶೋಕ್‌ ವಿಧಾನಸಭೆಗೆ ತಿಳಿಸಿದ್ದಾರೆ.

ದುರಸ್ತಿ ಜೀರ್ಣೋದ್ಧಾರ, ಅಭಿವೃದ್ಧಿ ಯೋಜನೆಗಾಗಿ ಸರಕಾರದ ಹಂತದಲ್ಲಿ ಸ್ವೀಕೃತವಾಗುವ ಪ್ರಸ್ತಾವನೆಗಳನ್ನು ಪರಿಶೀಲಿಸಿ ದೇವಾಲಯಗಳನ್ನು ಗುರುತಿಸಿ ಜಿಲ್ಲಾವಾರು ಅನುದಾನ ಬಿಡುಗಡೆ ಮಾಡಲಾಗುತ್ತಿದೆ. ಮುಜರಾಯಿ ಮತ್ತು ಮುಜರಾಯೇತರ ಒಟ್ಟು 5,672 ದೇವಸ್ಥಾನಗಳ ಅಭಿವೃದ್ಧಿಗೆ 422 ಕೋಟಿ ರೂ. ಅನುದಾನ ನೀಡಲಾಗಿದೆ ಎಂದು ವಿವರಿಸಿದರು.

ಪ್ರಾದೇಶಿಕ ಅಸಮತೋಲನ: ಪುನರ್‌ ಪರಿಶೀಲನೆ ಅಗತ್ಯ
ನಂಜುಂಡಪ್ಪ ವರದಿ ಅನ್ವಯ ಹಿಂದುಳಿದ ಕ್ಷೇತ್ರಗಳ ಸ್ವರೂಪದ ಬಗ್ಗೆ ವ್ಯಾಪಕ ಚರ್ಚೆಯಾಗಬೇಕಿದೆ. ಪ್ರಾದೇಶಿಕ ಅಸಮತೋಲನದ ಬಗ್ಗೆ ಪುನರ್‌ ಪರಿಶೀಲನೆಯಾಗಬೇಕಾದ ಅಗತ್ಯವಿದೆ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರ ಸಚಿವ ಜೆ.ಸಿ. ಮಾಧುಸ್ವಾಮಿ ಅಭಿಪ್ರಾಯಪಟ್ಟರು.

ಶಾಸಕ ಪ್ರಿಯಾಂಕ್‌ ಖರ್ಗೆ ಪ್ರಶ್ನೆಗೆ ಉತ್ತರಿಸಿದ ಅವರು, ನಂಜುಂಡಪ್ಪ ವರದಿಯಲ್ಲಿ ಪ್ರಸ್ತಾಪಿತವಾದ ಹಿಂದುಳಿದ ತಾಲೂಕುಗಳ ಪೈಕಿ ಅನೇಕ ತಾಲೂಕಿನ ಚಹರೆ ಈಗ ಬದಲಾಗಿದೆ. ಹಲವು ಕಡೆ ನೀರಾವರಿಯಾಗಿದೆ, ಇನ್ನು ಕೆಲವೆಡೆ ಕೈಗಾರಿಕೆಗಳು ಸ್ಥಾಪನೆಯಾಗಿವೆ. ಹೊಸ ತಾಲೂಕುಗಳು ರಚನೆಯಾಗಿವೆ. ಹೀಗಾಗಿ ಪ್ರಾದೇಶಿಕ ಅಸಮತೋಲನೆ, ಹಿಂದುಳಿದ ಪ್ರದೇಶದ ಪುನರ್‌ ಪರಿಶೀಲನೆಯಾಗುವ ಅಗತ್ಯವಿದೆ ಎಂದು ಹೇಳಿದರು.

ಮೂಲಸೌಕರ್ಯ ಇಲಾಖೆ ಈಗಾಗಲೇ ಈ ಬಗ್ಗೆ ವರದಿ ಸಲ್ಲಿಸಿದೆ. ವಿಸ್ತೃತ ವರದಿ ನೀಡಲು ಸೂಚನೆ ನೀಡಲಾಗಿದೆ. ಮತ್ತೂಂದು ಸಮಿತಿ ರಚಿಸುವ ಕುರಿತು ಮುಖ್ಯಮಂತ್ರಿಯವರೊಂದಿಗೆ ಚರ್ಚೆ ನಡೆಸುತ್ತೇನೆ ಎಂದು ತಿಳಿಸಿದರು.

ಚಿತ್ತಾಪುರ ಮತ ಕ್ಷೇತ್ರಕ್ಕೆ ಗಿರಿಜನ ಉಪ ಯೋಜನೆಗಳಡಿ ಯಾವುದೇ ಹೊಸ ರಸ್ತೆ ಕಾಮಗಾರಿಗೆ ಮಂಜೂರಾತಿ ನೀಡಿಲ್ಲ ಎಂಬ ಸರಕಾರದ ಲಿಖೀತ ಉತ್ತರವನ್ನೇ ಪ್ರಸ್ತಾಪಿಸಿ, ನಮ್ಮದು ಮೀಸಲು ಕ್ಷೇತ್ರ. ಇಲ್ಲಿಗೆ ರಸ್ತೆ ಕಾಮಗಾರಿ ಮಂಜೂರಾತಿ ನೀಡದೇ ಇದ್ದರೆ ಹೇಗಾಗುತ್ತದೆ. ಸರಕಾರವನ್ನು ಕೇಳಿದರೆ 100 ಹಾಸ್ಟೆಲ್‌ ನಿರ್ಮಿಸುತ್ತೇವೆ ಎಂದು ಉತ್ತರಿಸುತ್ತಿದೆ. ಈ ರೀತಿ ಮಾಡುವುದು ಸರಿಯಲ್ಲ ಎಂದು ಪ್ರಿಯಾಂಕ್‌ ಖರ್ಗೆ ಈ ಸಂದರ್ಭ ಬೇಸರ ವ್ಯಕ್ತಪಡಿಸಿದರು.

ಟಾಪ್ ನ್ಯೂಸ್

Will Dhoni play IPL next year too..?; What did Rayudu say?

IPL ಮುಂದಿನ ವರ್ಷವೂ ಧೋನಿ ಆಡುತ್ತಾರಾ..?; ರಾಯುಡು ಹೇಳಿದ್ದೇನು?

A person who voted for a BJP candidate eight times; The video went viral

Farrukhabad; ಬಿಜೆಪಿ ಅಭ್ಯರ್ಥಿಗೆ ಎಂಟು ಬಾರಿ ಮತದಾನ ಮಾಡಿದ ವ್ಯಕ್ತಿ; ವಿಡಿಯೋ ವೈರಲ್

Iranian President Ebrahim Raisi passed away in a helicopter crash

Ebrahim Raisi; ಹೆಲಿಕಾಪ್ಟರ್ ದುರಂತದಲ್ಲಿ ಕೊನೆಯುಸಿರೆಳೆದ ಇರಾನ್ ಅಧ್ಯಕ್ಷ ರೈಸಿ

To India’s youth get jobs, Modi should retire: Rahul Gandhi

Unemployment; ಭಾರತದ ಯುವಕರಿಗೆ ಕೆಲಸ ಸಿಗಬೇಕಾದರೆ ಮೋದಿ ನಿವೃತ್ತಿಯಾಗಬೇಕು: ರಾಹುಲ್ ಗಾಂಧಿ

ವಿರಾಟ್ ಕೊಹ್ಲಿಯ ಎಂಟು ವರ್ಷ ಹಳೆಯ ದಾಖಲೆ ಮುರಿದ ಅಭಿಷೇಕ್ ಶರ್ಮಾ

IPL 2024; ವಿರಾಟ್ ಕೊಹ್ಲಿಯ ಎಂಟು ವರ್ಷ ಹಳೆಯ ದಾಖಲೆ ಮುರಿದ ಅಭಿಷೇಕ್ ಶರ್ಮಾ

OTP ಹೇಳದಿದ್ದರೂ ಹಣ ಎಗರಿಸುತ್ತಾರೆ; ಎಚ್ಚರ! ರಾಷ್ಟ್ರೀಕೃತ ಬ್ಯಾಂಕ್‌ಗಳ ಹೆಸರಲ್ಲಿ ಸಂದೇಶ

OTP ಹೇಳದಿದ್ದರೂ ಹಣ ಎಗರಿಸುತ್ತಾರೆ; ಎಚ್ಚರ! ರಾಷ್ಟ್ರೀಕೃತ ಬ್ಯಾಂಕ್‌ಗಳ ಹೆಸರಲ್ಲಿ ಸಂದೇಶ

Elephant Census; ಮೊದಲ ಬಾರಿಗೆ ದಕ್ಷಿಣದ ರಾಜ್ಯಗಳ ಗಡಿ ಪ್ರದೇಶಗಳಲ್ಲಿ ಆನೆ ಗಣತಿ

Elephant Census; ಮೊದಲ ಬಾರಿಗೆ ದಕ್ಷಿಣದ ರಾಜ್ಯಗಳ ಗಡಿ ಪ್ರದೇಶಗಳಲ್ಲಿ ಆನೆ ಗಣತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಜೂನ್‌ ಮೊದಲ ವಾರವೇ ರಾಜ್ಯಕ್ಕೆ ಮುಂಗಾರು? ಮುಂದಿನ 5 ದಿನಗಳ ಕಾಲ ರಾಜ್ಯಾದ್ಯಂತ ಮಳೆ

ಜೂನ್‌ ಮೊದಲ ವಾರವೇ ರಾಜ್ಯಕ್ಕೆ ಮುಂಗಾರು? ಮುಂದಿನ 5 ದಿನಗಳ ಕಾಲ ರಾಜ್ಯಾದ್ಯಂತ ಮಳೆ

Prajwal ಬಂಧನಕ್ಕೆ ರೆಡ್‌ ಕಾರ್ನರ್‌ ಅಸ್ತ್ರ; ಕೇಂದ್ರ ಸರಕಾರಕ್ಕೆ ಪತ್ರ ಬರೆಯುವ ಸಾಧ್ಯತೆ

Prajwal ಬಂಧನಕ್ಕೆ ರೆಡ್‌ ಕಾರ್ನರ್‌ ಅಸ್ತ್ರ; ಕೇಂದ್ರ ಸರಕಾರಕ್ಕೆ ಪತ್ರ ಬರೆಯುವ ಸಾಧ್ಯತೆ

State Govt ದೇವೇಗೌಡರ ಬಲಿ ಪಡೆಯಲು ಸಂಚು: ಜೆಡಿಎಸ್‌ ಆರೋಪ

State Govt ದೇವೇಗೌಡರ ಬಲಿ ಪಡೆಯಲು ಸಂಚು: ಜೆಡಿಎಸ್‌ ಆರೋಪ

Prajwal Revanna Case; ಸಿಬಿಐಗೆ ವಹಿಸಿದರೆ ಸರಕಾರದಲ್ಲಿ ಇರುವವರು ಜೈಲಿಗೆ

Prajwal Revanna Case; ಸಿಬಿಐಗೆ ವಹಿಸಿದರೆ ಸರಕಾರದಲ್ಲಿ ಇರುವವರು ಜೈಲಿಗೆ

ಕಚೇರಿಗಳಲ್ಲಿ ಇ-ಆಫೀಸ್‌ ತಂತ್ರಾಂಶ ಕಡ್ಡಾಯಕ್ಕೆ ಆದೇಶ

Govt ಕಚೇರಿಗಳಲ್ಲಿ ಇ-ಆಫೀಸ್‌ ತಂತ್ರಾಂಶ ಕಡ್ಡಾಯಕ್ಕೆ ಆದೇಶ

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

Will Dhoni play IPL next year too..?; What did Rayudu say?

IPL ಮುಂದಿನ ವರ್ಷವೂ ಧೋನಿ ಆಡುತ್ತಾರಾ..?; ರಾಯುಡು ಹೇಳಿದ್ದೇನು?

A person who voted for a BJP candidate eight times; The video went viral

Farrukhabad; ಬಿಜೆಪಿ ಅಭ್ಯರ್ಥಿಗೆ ಎಂಟು ಬಾರಿ ಮತದಾನ ಮಾಡಿದ ವ್ಯಕ್ತಿ; ವಿಡಿಯೋ ವೈರಲ್

Iranian President Ebrahim Raisi passed away in a helicopter crash

Ebrahim Raisi; ಹೆಲಿಕಾಪ್ಟರ್ ದುರಂತದಲ್ಲಿ ಕೊನೆಯುಸಿರೆಳೆದ ಇರಾನ್ ಅಧ್ಯಕ್ಷ ರೈಸಿ

To India’s youth get jobs, Modi should retire: Rahul Gandhi

Unemployment; ಭಾರತದ ಯುವಕರಿಗೆ ಕೆಲಸ ಸಿಗಬೇಕಾದರೆ ಮೋದಿ ನಿವೃತ್ತಿಯಾಗಬೇಕು: ರಾಹುಲ್ ಗಾಂಧಿ

ವಿರಾಟ್ ಕೊಹ್ಲಿಯ ಎಂಟು ವರ್ಷ ಹಳೆಯ ದಾಖಲೆ ಮುರಿದ ಅಭಿಷೇಕ್ ಶರ್ಮಾ

IPL 2024; ವಿರಾಟ್ ಕೊಹ್ಲಿಯ ಎಂಟು ವರ್ಷ ಹಳೆಯ ದಾಖಲೆ ಮುರಿದ ಅಭಿಷೇಕ್ ಶರ್ಮಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.