ಗೋಹತ್ಯೆ ನಿಷೇಧ ವಿಧೇಯಕ ವಿರೋಧಿಸುವ ದೇವೇಗೌಡರ ಹೇಳಿಕೆ ವಿಷಾದನೀಯ: ಪ್ರಭು ಚವ್ಹಾಣ್
Team Udayavani, Dec 16, 2020, 1:24 PM IST
ಬೆಂಗಳೂರು: ಗೋಹತ್ಯೆ ನಿಷೇಧ ಮಸೂದೆ ಯಾವುದೇ ಒಂದು ಸಮುದಾಯವನ್ನು ಇಟ್ಟುಕೊಂಡು ರೂಪಿಸಿದ್ದಲ್ಲ, ಈ ಮಸೂದೆಯಿಂದ ದೇಶಿ ಗೋವು ತಳಿಗಳ ವೃದ್ಧಿ ಮತ್ತು ಸಂವರ್ಧನೆಗೆ ಹೆಚ್ಚು ಅವಕಾಶ ಕಲ್ಪಿಸಲಿದೆ ಎಂದು ಪಶುಸಂಗೋಪನೆ ಸಚಿವ ಪ್ರಭು ಚವ್ಹಾಣ್ ಹೇಳಿದ್ದಾರೆ.
ಗೋಹತ್ಯೆ ನಿಷೇಧ ವಿಧೇಯಕದಿಂದ ಸಮಾಜದಲ್ಲಿ ಅಶಾಂತಿ ಮತ್ತು ಜನರ ಬಾಳನ್ನು ಅಲ್ಲೋಲ ಕಲ್ಲೋಲ ಆಗುತ್ತದೆ ಎಂಬ ಮಾಜಿ ಪ್ರಧಾನಿ ದೇವೆಗೌಡರ ಹೇಳಿಕೆಗೆ ಸ್ಪಷ್ಟನೆ ನೀಡಿದರು.
ದೇವೇಗೌಡ ಅವರ ಹೇಳಿಕೆ ವಿಷಾದನೀಯ, ಗೋವು ರೈತನೊಂದಿಗೆ ಇದ್ದಷ್ಟು ಅವಧಿ ಅವನ ಆದಾಯದಲ್ಲಿ ವೃದ್ಧಿ ಆಗುತ್ತದೆ ವಿನಃ ನಷ್ಟ ಆಗುವುದಿಲ್ಲ. ಈ ಮಸೂದೆಯಿಂದ ರೈತರ ಗೋವುಗಳ ಕಳ್ಳ ಸಾಗಣೆಗೆ ಕಡಿವಾಣ ಬಿಳುವುದರಿಂದ ರೈತ ನಿಶ್ಚಿಂತೆಯಿಂದ ಪಶುಸಂಗೋಪನಾ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಬಹುದಾಗಿದೆ. ಮುಂಬರುವ ದಿನಗಳಲ್ಲಿ ಉತ್ತರಪ್ರದೇಶ ಮಾದರಿಯಲ್ಲಿ ಗೋವುಗಳ ನಿರ್ವಹಣೆಗೆ ಹೆಚ್ಚು ಒತ್ತು ನೀಡಲಾಗುತ್ತದೆ. ಗೋವು ಕೇವಲ ನಮ್ಮ ಸಂಸ್ಕೃತಿಯ ಒಂದು ಭಾಗವಲ್ಲ ರೈತನ ಜೀವನಾಧಾರ ಹೀಗಾಗಿ ಈ ಮಸೂದೆಯಿಂದ ರೈತರಿಗೆ ಅನುಕೂಲ ಆಗಲಿದೆ ಎಂದರು.
ಇದನ್ನೂ ಓದಿ:ಸಾವಿರಾರು ಹಾವುಗಳನ್ನು ರಕ್ಷಿಸಿದ ಸ್ನೇಕ್ ಡ್ಯಾನಿಯಲ್ ನಾಗರ ಹಾವು ಕಚ್ಚಿ ಸಾವು
ಮಹಾತ್ಮಾ ಗಾಂಧಿಯವರು ಸಹ ಗೋವುಗಳ ಸಂರಕ್ಷಣೆ ಬಗ್ಗೆ ಹೇಳಿದ್ದರು. ”ಗೋ ವಧೆಯನ್ನು ಬರಿಯ ಕಾನೂನಿನ ಮೂಲಕ ತಡೆಯಲು ಸಾಧ್ಯವಿಲ್ಲ. ಇದಕ್ಕೆ ತಿಳಿವಳಿಕೆ, ಶಿಕ್ಷಣ, ಕರುಣೆ, ಸಹಾನುಭೂತಿಯೂ ಅಗತ್ಯ,” ಎಂದು ಹೇಳಿದ್ದರು. ಭಾರತೀಯ ಸಂವಿಧಾನದಲ್ಲೂ ರಾಜ್ಯ ಸರಕಾರಗಳನ್ನು, ಗೋವು ಹಾಗೂ ಗೋವುಗಳ ನಾನಾ ತಳಿಗಳನ್ನು ಸಂರಕ್ಷಿಸಲು ಹಾಗೂ ವರ್ಧಿಸಲು ಅಗತ್ಯವಾದ ಕ್ರಮಗಳನ್ನು ಕೈಗೊಳ್ಳುವಂತೆ ಪ್ರೋತ್ಸಾಹಿಸಬೇಕು ಎಂದು ತಿಳಿಸಲಾಗಿದೆ. ಹೀಗಿದ್ದಾಗ ಗೋವುಗಳ ಸಂರಕ್ಷಣೆ ನಮ್ಮೆಲ್ಲರ ಜವಾಬ್ದಾರಿ ಆಗಬೇಕು ಎಂದು ಸಚಿವ ಪ್ರಭು ಚವ್ಹಾಣ್ ಅಭಿಪ್ರಾಯಪಟ್ಟಿದ್ದಾರೆ.
ಬಿಜೆಪಿ ಸರ್ಕಾರದ ಅವಧಿಯಲ್ಲಿ 2010 ರಲ್ಲಿ ಗೋಹತ್ಯೆ ನಿಷೇಧ ಮಸೂದೆ ಮಂಡನೆ ಮಾಡಿದಾಗ ಕೇಂದ್ರ ಸರ್ಕಾರಕ್ಕೆ ಇದ್ದ ಆಕ್ಷೇಪಣೆಗಳನ್ನು ಈಗಿನ ಮಸೂದೆಯಲ್ಲಿ ಸರಿಪಡಿಸಲಾಗಿದೆ. ಹಳೆಯ ಮಸೂದೆಯಲ್ಲಿ ಎಮ್ಮೆ /ಕೋಣಗಳ ಹತ್ಯೆಗೂ ನಿಷೇಧವಿತ್ತು. ಆದರೆ 2020ರ ಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧಕ ಮತ್ತು ಸಂರಕ್ಷಣಾ ವಿಧೇಯಕದಲ್ಲಿ 13 ವರ್ಷಕ್ಕಿಂತ ಮೀರಿದ ಎಮ್ಮೆ/ಕೋಣಗಳನ್ನು ಕೈಬಿಡಲಾಗಿದೆ. ವರ್ಷದಿಂದ ವರ್ಷಕ್ಕೆ ಗೋವುಗಳ ಸಂತತಿ ಕಡಿಮೆ ಆಗುತ್ತಿರುವುದು ಅತ್ಯಂತ ಕಳವಳಕಾರಿ ಸಂಗತಿ ಆಗಿದ್ದು ಈ ಮೂಸುದೆ ಅವುಗಳ ಸಂತತಿ ವೃದ್ಧಿಗೂ ಅವಕಾಶ ಕಲ್ಪಿಸಿಕೊಡಲಿದೆ. 19 ನೇ ಜಾನುವಾರು ಗಣತಿ ಪ್ರಕಾರ ರಾಜ್ಯದಲ್ಲಿ ಒಟ್ಟು ಗೋವು ಮತ್ತು ಎಮ್ಮೆಗಳ ಸಂಖ್ಯೆ 1,29 ಕೋಟಿ ಇತ್ತು ಆದರೆ 20ನೇ ಜಾನುವಾರುಗಳ ಗಣತಿ ಪ್ರಕಾರ 1.14 ಕೋಟಿಗೆ ಇಳಿಗೆ ಆಗಿದೆ. ಈ ಎಲ್ಲ ಅಂಶಗಳನ್ನು ಪರಿಗಣಿಸಿದಾಗ ಮಸೂದೆ ಗೋವುಗಳ ಸಂರಕ್ಷಣೆ ಮತ್ತು ಸಂವರ್ಧನೆಗೆ ಅನುಕೂಲ ಆಗಲಿದೆ ಎಂದು ಮಾಹಿತಿ ನೀಡಿದ್ದಾರೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ
Srirangapatna: ಐಸ್ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ
Ls Polls: ಕಾಂಗ್ರೆಸ್ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್
Election Commission: ಪ್ರಿಯಾಂಕ್ ಖರ್ಗೆ, ಡಿಕೆಶಿ ವಿರುದ್ಧ ಚು.ಆಯೋಗಕ್ಕೆ ಬಿಜೆಪಿ ದೂರು
Congress party: ಮಾಲೀಕಯ್ಯ ಗುತ್ತೇದಾರ್ ಇಂದು ಕಾಂಗ್ರೆಸ್ ಸೇರ್ಪಡೆ
MUST WATCH
ಹೊಸ ಸೇರ್ಪಡೆ
Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ
Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ
Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ
Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ
Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ