ಸಚಿವ ಅಶೋಕ್ ಭಾಷೆ ಬಳಕೆ ಚರ್ಚೆ
Team Udayavani, Sep 15, 2022, 8:56 PM IST
ವಿಧಾನಸಭೆ: ಕಂದಾಯ ಸಚಿವ ಅಶೋಕ್ ಅವರು ಮಾತನಾಡುವಾಗ ಬಳಸುವ ಭಾಷೆ ಬಗ್ಗೆ ಗುರುವಾರ ಕೆಲಹೊತ್ತು ಸ್ವಾರಸ್ಯಕರ ಚರ್ಚೆ ನಡೆಯಿತು.
ಪ್ರಶ್ನೋತ್ತರ ವೇಳೆಯಲ್ಲಿ ಕಾಂಗ್ರೆಸ್ನ ಅನಿಲ್ ಚಿಕ್ಕಮಾದು ಅವರು ಎಚ್ಡಿ ಕೋಟೆಯಲ್ಲಿರುವ ಕಾಕನಕೋಟೆ ಸಫಾರಿ ಕೇಂದ್ರ ಪ್ರವಾಸಿ ಕೇಂದ್ರ ಎಂದು ಘೋಷಿಸಲು ಒತ್ತಾಯಿಸಿದಾಗ ಸಚಿವ ಅಶೋಕ್ ಅವರ “ಮಾಡುತ್ತೀರಿ’ ಎಂಬ ಮಾತು ಸ್ವಾರಸ್ಯಕರ ಚರ್ಚೆಗೆ ಕಾರಣವಾಯಿತು.
ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರು, “ನಾವು ಮಾಡುತ್ತೇವೆ ಎಂದು ಹೇಳಪ್ಪಾ, ಮಾಡುತ್ತೀರಿ, ಮಾಡುತ್ತೀರಿ ಎಂದು ಹೇಳಿದರೆ ನಾವು ಮಾಡಿದಂತಾಗುತ್ತದೆ’ ಎಂದರು. ಅದಕ್ಕೆ ಅಶೋಕ್ ಅವರು, ಬೆಂಗಳೂರು ಭಾಷೆ ಬೇರೆ, ಮೈಸೂರು ಭಾಷೆ ಬೇರೆ ಸರ್ ಎಂದರು. ಅದಕ್ಕೆ ಒಪ್ಪದ ಸಿದ್ದರಾಮಯ್ಯ ಮೈಸೂರು ಪ್ರಾಂತ್ಯದ ಭಾಷೆಯಲ್ಲಿ ವ್ಯತ್ಯಾಸವೇ ಇಲ್ಲ ಎಂದು ಹೇಳಿದರು.
ಸಚಿವ ಮಾಧುಸ್ವಾಮಿ ಸಹ, ಮಾಡುತ್ತೇವೆ ಎಂದು ಹೇಳಿ, ಸರಿ ಮಾಡಿಕೊಳ್ಳಿ ಎಂದರು. ಜೆಡಿಎಸ್ನ ಅನ್ನದಾನಿ, ಕನ್ನಡದಲ್ಲಿ ಹಲವಾರು ಉಪ ಭಾಷೆಗಳಿವೆ, ಅಶೋಕಣ್ಣದು ಒಂದು ಉಪ ಭಾಷೆ. ಅವರು ಹಾಗೇ ಮಾತನಾಡಲಿ ಬಿಡಿ, ಮಂಡ್ಯ, ಬೆಂಗಳೂರು, ಚಾಮರಾಜನಗರ, ಮಳವಳ್ಳಿ ಕಡೆ ಮಾತು ಬೇರೆ ಬೇರೆ ರೀತಿಯಲ್ಲೇ ಇರುತ್ತದೆ. ಆದರೆ, ಕನ್ನಡವೇ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್
Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್
Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್’ ಎಂದ ಬಿಜೆಪಿಗರು!
Narayan Gowda: ಹೆಚ್ಚಿನ ಮತಗಳಿಂದ ಎಚ್ಡಿಕೆ ಗೆಲ್ಲಿಸುತ್ತೇವೆ: ನಾರಾಯಣ ಗೌಡ
Raksha Ramaiah: ಯಾರಿಗೆ ಟಿಕೆಟ್ ಕೊಟ್ಟರೂ ಅಭ್ಯರ್ಥಿ ಪರ ಕೆಲಸ ಮಾಡ್ತೇವೆ; ರಕ್ಷಾ ರಾಮಯ್ಯ
MUST WATCH
ಹೊಸ ಸೇರ್ಪಡೆ
Bike thief: ಬಜಪೆ ಪೊಲೀಸರಿಂದ ಅಂತರ್ ಜಿಲ್ಲಾ ಬೈಕ್ ಕಳ್ಳನ ಬಂಧನ
Ex-IPS officer ಸಂಜೀವ್ ಭಟ್ಗೆ 1996 ರ ಡ್ರಗ್ಸ್ ಕೇಸ್ ನಲ್ಲಿ 20 ವರ್ಷ ಜೈಲು ಶಿಕ್ಷೆ
Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ
Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್
Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ