ಡಿಕೆಶಿ ಯಾರ ಕೈ ಹಿಡಿದು ಮೇಲೆತ್ತುವರೋ ಅವರು ಬೀದಿಗೆ: ಸಚಿವ ಆರ್.ಅಶೋಕ್ ಲೇವಡಿ
Team Udayavani, Aug 4, 2022, 9:22 PM IST
ಚನ್ನರಾಯಪಟ್ಟಣ: ಡಿ.ಕೆ.ಶಿವಕುಮಾರ್ ಯಾರ ಕೈಹಿಡಿದು ಮೇಲೆ ಎತ್ತುತ್ತಾರೋ ಅವರು ಬೀದಿಗೆ ಬರುತ್ತಾರೆ. ಈಗ ಸಿದ್ದರಾಮಯ್ಯ ಅವರ ಸರದಿ ಬಂದಿದೆ ಎಂದು ಕಂದಾಯ ಸಚಿವ ಆರ್.ಅಶೋಕ್ ಲೇವಡಿ ಮಾಡಿದ್ದಾರೆ.
ತಾಲೂಕಿನ ಶ್ರವಣಬೆಳಗೊಳದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ, ಮಂಡ್ಯದಲ್ಲಿ ಡಿ.ಕೆ.ಶಿವಕುಮಾರ್ ಜೆಡಿಎಸ್ ಪಕ್ಷದ ಎಚ್.ಡಿ.ಕುಮಾರಸ್ವಾಮಿ ಅವರ ಕೈ ಹಿಡಿದು ಮೇಲೆತ್ತಿ ಜೋಡೆತ್ತು ಎಂದು ಹೇಳಿದ್ದರು, ನಂತರ ಕುಮಾರಸ್ವಾಮಿ ಪಾಡೇನಾಯ್ತು? ಅವರು ಬೀದಿಗೆ ಬಂದರು. ಈಗ ಸಿದ್ದರಾಮಯ್ಯ ಅವರನ್ನು ಬೀದಿಗೆ ತರುವ ಉದ್ದೇಶದಿಂದ ಕೈ ಹಿಡಿದು ಮೇಲೆತ್ತಿದ್ದಾರೆ ಎಂದು ವ್ಯಂಗ್ಯವಾಡಿದರು.
ಬಲವಂತದ ಆಲಿಂಗನ: ಡಿಕೆಶಿ ದಾವಣಗೆರೆಯ ವೇದಿಕೆ ಮೇಲೆ ಸಿದ್ದರಾಮಯ್ಯ ಅವರನ್ನು ಆಲಿಂಗನ ಮಾಡಿದ್ದು ಪ್ರೀತಿಯಿಂದಲ್ಲ. ಅದು ಬಲವಂತದ ಅಲಿಂಗನ. ರಾಹುಲ್ಗಾಂಧಿ ಕೈ ಸನ್ನೆ ಮಾಡಿದ ಮೇಲೆ ಒಲ್ಲದ ಮನಸ್ಸಿನಲ್ಲಿ ಆಲಿಂಗನವಾಗಿದೆ. ಧೃತರಾಷ್ಟ್ರನ ಆಲಿಂಗನದಲ್ಲಿ ಯಾರಿಗೆ ತೊಂದರೆ ಆಗಿದೆ ಎನ್ನುವುದು ಗೊತ್ತಿದೆ. ಸಿದ್ದರಾಮಯ್ಯ ಇದನ್ನು ಅರ್ಥ ಮಾಡಿಕೊಳ್ಳಬೇಕು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
MUST WATCH
ಹೊಸ ಸೇರ್ಪಡೆ
Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ