ಅಗತ್ಯ ಇರುವ ಕಡೆ ಉಪ ನೋಂದಣಾಧಿಕಾರಿ ಕಚೇರಿ: ಅಶೋಕ್
Team Udayavani, Mar 14, 2022, 11:15 PM IST
ವಿಧಾನಸಭೆ:ರಾಜ್ಯದಲ್ಲಿ ಅಗತ್ಯ ಇರುವ ಕಡೆ ಉಪನೋಂದಣಾಧಿಕಾರಿ ಕಚೇರಿ ಸ್ಥಾಪಿಸಲಾಗುವುದು ಎಂದು ಕಂದಾಯ ಸಚಿವ ಆರ್.ಅಶೋಕ್ ತಿಳಿಸಿದ್ದಾರೆ.
ಪ್ರಶ್ನೋತ್ತರ ವೇಳೆ ಜೆಡಿಎಸ್ನ ಮಂಜುನಾಥ್ ಅವರು ಬಿಡದಿ ಹಾಗೂ ಕುದೂರಿನಲ್ಲಿ ಉಪ ನೋಂದಣಿ ಕಚೇರಿ ಪ್ರಾರಂಭಿಸುವ ಬಗ್ಗೆ ಮನವಿ ಮಾಡಿದಾಗ ಉತ್ತರಿಸಿದ ಅವರು, ರಾಜ್ಯದಲ್ಲಿ ಅಗತ್ಯ ಇರುವ ಕಡೆ ಉಪನೋಂದಣಿ ಕಚೇರಿ ಸ್ಥಾಪಿಸಲು ಕ್ರಮ ಕೈಗೊಳ್ಳಲಾಗುವುದು. ಇದರಿಂದ ಒತ್ತಡ ಕಡಿಮೆ ಜತೆಗೆ ಸರ್ಕಾರಕ್ಕೂ ಆದಾಯ ಬರುತ್ತದೆ ಎಂದು ಹೇಳಿದರು.
ಪಕ್ಷೇತರ ಸದಸ್ಯ ಶರತ್ಬಚ್ಚೇಗೌಡ, ಸರ್ವರ್ ಸಮಸ್ಯೆಯಿಂದ ಉಪ ನೋಂದಣಾಧಿಕಾರಿಗಳ ಕಚೇರಿಯಲ್ಲಿ ಸಮಸ್ಯೆಯಾಗುತ್ತಿದ್ದು ಸರಿಪಡಿಸುವಂತೆ ಒತ್ತಾಯಿಸಿರು. ಈ ಬಗ್ಗೆ ಕ್ರಮ ಕೈಗೊಳ್ಳುವುದಾಗಿ ಸಚಿವರು ಭರವಸೆ ನೀಡಿದರು.
ಅನಿಲ್ಚಿಕ್ಕಮಾದು ಅವರ ಮತ್ತೂಂದು ಪ್ರಶ್ನೆಗೆ ನಾಡಕಚೇರಿ ದುರಸ್ಥಿಗೆ ಅಗತ್ಯ ನೆರವು ಕಲ್ಪಿಸಲಾಗುವುದು ಎಂದು ತಿಳಿಸಿದರು.
ಬಿಜೆಪಿಯ ಕುಮಾರ್ ಬಂಗಾರಪ್ಪ ಅವರ ನಾಡಕಚೇರಿಗೆ ಪ್ರತ್ಯೇಕವಾಗಿ ವಿಶೇಷ ವಿನ್ಯಾಸ ರೂಪಿಸಿ ಎಂಬ ಸಲಹೆಗೂ ಪರಿಶೀಲಿಸುವುದಾಗಿ ತಿಳಿಸಿದರು.
ಜಾತಿ ಹೆಸರಿನ ಗ್ರಾಮ ಬೇಡ
ಗ್ರಾಮಗಳಿಗೆ ಜಾತಿಯ ಹೆಸರು ಇದ್ದರೆ ಬದಲಾಯಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವ ಅಶೋಕ್ ತಿಳಿಸಿದರು.
ಕಾಂಗ್ರೆಸ್ನ ರಮೇಶ್ಕುಮಾರ್ ಪ್ರಸ್ತಾಪಕ್ಕೆ ಉತ್ತರಿಸಿದ ಅವರು, ಹೊಸದಾಗಿ ಕಂದಾಯ ಗ್ರಾಮಗಳಾಗುವ ತಾಂಡಾ, ಹಟ್ಟಿ, ಕಾಲೋನಿಗಳು ಕೆಲವು ಜಾತಿಗಳ ಹೆಸರು ಹೊಂದಿದ್ದು ಬದಲಾಯಿಸಲಾಗುವುದು ಎಂದು ಹೇಳಿದರು.
ಈ ಹಿಂದೆ ಸ್ಮಶಾನಗಳಿಗೂ ಜಾತಿಯ ಹೆಸರು ಇತ್ತು. ಇದೀಗ ಹೆಸರು ತೆಗೆದುಹಾಕಲಾಗಿದೆ. ಯಾವುದೇ ಜಾತಿಯ ಹೆಸರಿನ ಸ್ಮಶಾನ ಇರಬಾರದು. ಕೇವಲ ಸ್ಮಶಾನ ಎಂದು ಮಾತ್ರ ಕರೆಯಬೇಕು ಎಂದು ಸೂಚನೆ ನೀಡಲಾಗಿದೆ ಎಂದು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ
Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು
Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ
Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್
Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್
MUST WATCH
ಹೊಸ ಸೇರ್ಪಡೆ
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ
Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ