ಬಿಜೆಪಿ ಶಾಸಕನ ಔತಣ ಕೂಟದಲ್ಲಿ ಭಾಗಿಯಾದ ಸಚಿವ ರಮೇಶ್ ಜಾರಕಿಹೊಳಿ!
Team Udayavani, Dec 20, 2018, 8:56 AM IST
ಬೆಳಗಾವಿ: ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ಮತ್ತು ಸಚಿವ ಡಿ.ಕೆ.ಶಿವಕುಮಾರ್ ಅವರ ಔತಣಕೂಟಕ್ಕೆ ಗೈರಾಗುವ ಮೂಲಕ ಕಾಂಗ್ರೆಸ್ಗೆ ಶಾಕ್ ನೀಡಿದ್ದ ಸಚಿವ ರಮೇಶ್ ಜಾರಕಿಹೊಳಿ ಅವರು ಬಿಜೆಪಿ ಶಾಸಕರ ನಿವಾಸದಲ್ಲಿ ಔತಣಕೂಟದಲ್ಲಿ ಕಾಣಿಸಿಕೊಂಡು ಸಂಚಲನ ಮೂಡಿಸಿದ್ದಾರೆ.
ಬುಧವಾರ ರಾತ್ರಿ ಬಿಜೆಪಿ ಪರಿಷತ್ ಸದಸ್ಯ ಮಹಾಂತೇಶ್ ಕವಟಗಿ ಮಠ ಅವರು ಆಯೋಜಿಸಿದ್ದ ಔತಣಕೂಟದಲ್ಲಿ ಕಾಣಸಿಕೊಂಡ ಸಚಿವ ಜಾರಕಿಹೊಳಿ ಅವರು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಮತ್ತು ಉಮೇಶ್ ಕತ್ತಿ ಅವರ ಜೊತೆ ಭೋಜನ ಸವಿದಿದ್ದಾರೆ.
ಡಿಸೆಂಬರ್ 22 ರಂದು ಸಂಪುಟ ವಿಸ್ತರಣೆ ನಡೆಸಲಾಗುತ್ತಿದ್ದು , ರಮೇಶ್ ಜಾರಕಿ ಹೊಳಿ ಅವರನ್ನು ಕೈ ಬಿಡುವ ಸಾಧ್ಯತೆಗಳಿವೆ ಎನ್ನಲಾಗಿದೆ. ಒಟ್ಟಿನಲ್ಲಿ ಜಾರಕಿಹೊಳಿ ಅವರು ಯಾವ ನಿರ್ಧಾರ ಕೈಗೊಳ್ಳುತ್ತಾರೆ ಎನ್ನುವುದು ರಾಜ್ಯ ರಾಜಕಾರಣದಲ್ಲಿ ತೀವ್ರ ಕುತೂಹಲ ಕೆರಳಿಸಿದೆ.