ಸಂಪುಟದ ಸಂಕಟದ ಮಧ್ಯೆ ಬಿ.ಎಲ್.ಸಂತೋಷ್ ಭೇಟಿಯಾದ ರಮೇಶ್ ಜಾರಕಿಹೊಳಿ!
Team Udayavani, Nov 20, 2020, 1:46 PM IST
ಬೆಂಗಳೂರು: ಭಾರತೀಯ ಜನತಾ ಪಕ್ಷದ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್ ಸಂತೋಷ್ ಅವರನ್ನು ರಾಜ್ಯದ ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ಅವರು ನವದೆಹಲಿಯ ಬಿಜೆಪಿ ಕೇಂದ್ರ ಕಚೇರಿಯಲ್ಲಿ ಇಂದು ಭೇಟಿ ಮಾಡಿ ಸಮಾಲೋಚನೆ ನಡೆಸಿದರು.
ಕಳೆದ ಆರು ತಿಂಗಳಿನಲ್ಲಿ ಜಲಸಂಪನ್ಮೂಲ ಇಲಾಖೆಯಲ್ಲಿ ಆಗಿರುವ ಅಭಿವೃದ್ಧಿ ಕಾರ್ಯಗಳ ಕುರಿತು ಬಿ ಎಲ್ ಸಂತೋಷ್ ಅವರಿಗೆ ರಮೇಶ್ ಜಾರಕಿಹೊಳಿ ವಿವರಿಸಿದರು. ಜೊತೆಗೆ ಪ್ರಸಕ್ತ ರಾಜಕೀಯ ವಿದ್ಯಮಾನಗಳ ಕುರಿತು ಉಭಯ ನಾಯಕರು ಸಮಾಲೋಚನೆ ನಡೆಸಿದರು.
ಇದನ್ನೂ ಓದಿ:1985ರಿಂದ ಸತತವಾಗಿ ನಡೆಯುತ್ತಿದ್ದ ‘ಇಂದಿರಾಗಾಂಧಿ ಮ್ಯಾರಥಾನ್ ರೇಸ್’ಗೆ ಬ್ರೇಕ್: ಕಾರಣವೇನು ?
ರಾಜ್ಯದಲ್ಲಿ ಸಚಿವ ಸಂಪುಟ ವಿಸ್ತರಣೆ ಅಥವಾ ಪುನಾರಚನೆಗೆ ಸರ್ಕಸ್ ನಡೆಯುತ್ತಿರುವ ನಡುವೆ ರಮೇಶ್ ಜಾರಕಿಹೊಳಿ ಅವರ ಈ ಭೇಟಿ ಕುತೂಹಲಕ್ಕೆ ಕಾರಣವಾಗಿದೆ.