ನ. 20ರಂದು ಬಳ್ಳಾರಿಯಲ್ಲಿ ಬೃಹತ್ ಎಸ್ಟಿ ಸಮಾವೇಶ: ರಾಮುಲು
Team Udayavani, Oct 27, 2022, 11:45 PM IST
ಚಾಮರಾಜನಗರ: ಪರಿಶಿಷ್ಟ ಜಾತಿ ಹಾಗೂ ಪ. ಪಂಗಡಗಳ ಸಮುದಾಯಗಳ ಮೀಸಲಾತಿ ಹೆಚ್ಚಿಸಿದ ಮುಖ್ಯಮಂತ್ರಿ ಹಾಗೂ ಪ್ರಧಾನಿ ಮಂತ್ರಿಯವರಿಗೆ ಅಭಿನಂದನೆ ಸಲ್ಲಿಸುವ ಸಲುವಾಗಿ ನ. 20 ರಂದು ಬಳ್ಳಾರಿಯಲ್ಲಿ ಬೃಹತ್ ಎಸ್ಟಿ ಸಮಾವೇಶ ಆಯೋಡಿಸಲಾಗಿದೆ ಎಂದು ಸಾರಿಗೆ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆ ಸಚಿವ ಬಿ. ಶ್ರೀರಾಮುಲು ತಿಳಿಸಿದರು.
ನಗರದ ಡಾ| ಬಿ.ಆರ್. ಅಂಬೇಡ್ಕರ್ ಭವನದಲ್ಲಿ ಗುರುವಾರ ಜರಗಿದ ಬಿಜೆಪಿ ಎಸ್ಟಿ ಸಮಾವೇಶ ಕುರಿತು ಪೂರ್ವಭಾವಿ ಸಭೆಯನ್ನು ಉದ್ಘಾಟಿಸಿ ಮಾತನಾಡಿದ ಅವರು, ರಾಜಕೀಯ ಇಚ್ಛಾಶಕ್ತಿ ಕೊರತೆಯಿಂದ ಸಮುದಾಯಗಳಿಗೆ ಮೀಸಲಾತಿ ಹೆಚ್ಚಳವಾಗಿರಲಿಲ್ಲ. ನಾನು ಚುನಾವಣ ಪೂರ್ವದಲ್ಲೇ ಬಿಜೆಪಿ ಸರಕಾರ ಬಂದರೆ ಮೀಸಲಾತಿ ಹೆಚ್ಚಿಸುವ ವಾಗ್ಧಾನ ಮಾಡಿದ್ದೆ ಎಂದರು.
ಕುಲ ಶಾಸ್ತ್ರ ಅಧ್ಯಯನ:
ಯಾವುದೇ ಸಮುದಾಯವನ್ನು ಮೀಸಲಾತಿಗೆ ಸೇರಿಸಲು ನಮ್ಮ ಅಭ್ಯಂತರವಿಲ್ಲ. ಮೀಸಲಾತಿ ಅನುಷ್ಠಾನಕ್ಕೂ ಮುನ್ನ ಸಂಬಂಧಪಟ್ಟ ಜಾತಿಯ ಕುಲ ಶಾಸ್ತ್ರ ಅಧ್ಯಯನ ನಡೆಯಬೇಕು ಎಂದು ಸಾರಿಗೆ ಸಚಿವ ಬಿ.ಶ್ರೀ ರಾ ಮುಲು ಅವರು ಮೈಸೂರಿನಲ್ಲಿ ಹೇಳಿ ದರು. ಮೀಸಲಾತಿ ಅನುಷ್ಠಾನಕ್ಕಾಗಿ ಸಮಿತಿ ರಚಿಸಬೇಕು. ಅದು ನೀಡುವ ವರದಿ ಅನ್ವಯ ಮುಂದಿನ ಕ್ರಮ ಕೈಗೊಳ್ಳಬೇಕು. ಏಕಾಏಕಿ ಮೀಸಲಾತಿ ಅನುಷ್ಠಾನ ಹೆಚ್ಚಳ ಸಾಧ್ಯವಿಲ್ಲ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್
R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್
Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್
Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್
Politics: ಡಿ.ಕೆ.ಶಿವಕುಮಾರ್ ಸಿಎಂ ಆಗುತ್ತಾರೆ: ಎಚ್.ವಿಶ್ವನಾಥ್