ಆಗಸ್ಟ್ನಲ್ಲಿ 4ನೇ ಅಲೆ; ಎದುರಿಸಲು ಸನ್ನದ್ಧ: ಭಯ ಬೇಡ, ಎಚ್ಚರಿಕೆ ಇರಲಿ: ಸಚಿವ ಸುಧಾಕರ್
Team Udayavani, Mar 22, 2022, 7:45 AM IST
ವಿಧಾನಪರಿಷತ್ತು: ಕೋವಿಡ್ ನಾಲ್ಕನೇ ಅಲೆ ಈ ವರ್ಷ ಆಗಸ್ಟ್ನಲ್ಲಿ ಬರಲಿದೆ ಎಂದು ಅಂದಾಜಿಸಲಾಗಿದ್ದು, ಅದನ್ನು ಎದುರಿಸಲು ಸರ್ಕಾರ ಸನ್ನದ್ಧವಾಗಿದೆ. ಜನತೆ ಹೆದರುವ ಅವಶ್ಯಕತೆಯಿಲ್ಲ. ಆದರೆ, ಕೋವಿಡ್-19 ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದು ಆರೊಗ್ಯ ಸಚಿವ ಡಾ. ಕೆ. ಸುಧಾಕರ್ ಹೇಳಿದ್ದಾರೆ.
ಬಿಜೆಪಿ ಸದಸ್ಯ ಶಶೀಲ್ ಜಿ. ನಮೋಶಿ ಅವರು ಸೋಮವಾರ ಶೂನ್ಯವೇಳೆಯಲ್ಲಿ ಪ್ರಸ್ತಾಪಿಸಿದ ವಿಷಯಕ್ಕೆ ಉತ್ತರಿಸಿದ ಸಚಿವರು, ಕೊರೊನಾದ ಬಿಎ-2 ಹೊಸ ಪ್ರಬೇಧ ಫಿಲಿಪ್ಪಿನ್ಸ್ ದೇಶದಲ್ಲಿ ಮೊದಲು ಪತ್ತೆಯಾಗಿದ್ದು, 40 ದೇಶಗಳಲ್ಲಿ ಕಂಡು ಬಂದಿದೆ. ಮೂರನೇ ಅಲೇ ಭಾರತದಲ್ಲಿ ಯಾವಾಗ ಬರಬಹುದು ಎಂದು ಹೇಳಿದ್ದ ಐಐಟಿ ಕಾನ್ಪುರ ಸಂಸ್ಥೆ, ನಾಲ್ಕನೆ ಅಲೆ ಆಗಸ್ಟ್ನಲ್ಲಿ ಭಾರತಕ್ಕೆ ಬರಬಹುದು ಎಂದು ಹೇಳಿದ್ದಾರೆ.
ಅದರಂತೆ, ನಾಲ್ಕನೆ ಅಲೆಯನ್ನು ತಡೆಗಟ್ಟಲು ಸರ್ಕಾರ ಸನ್ನದ್ಧವಾಗಿದ್ದು, ಹಿಂದಿನ ಅಲೆಗಳ ಸಂದರ್ಭದಲ್ಲಿ ಕಲಿತ ಅನುಭವಗಳಿಂದ ಈಗಾಗಲೇ ಹಲವಾರು ಪೂರ್ವ ಸಿದ್ಧತೆಗಳನ್ನು ಮಾಡಿಕೊಳ್ಳಲಾಗುತ್ತದೆ. ಮುಂದೆ ಅಗತ್ಯವಿರುವ ಸಿದ್ಧತೆಗಳನ್ನು ಮಾಡಿಕೊಳ್ಳಲಾಗುವುದು. ನಮ್ಮ ಲಸೀಕಾಕರಣ ವ್ಯಾಪಕವಾಗಿದ್ದು, ನಾಲ್ಕನೇ ಅಲೆ ತಡೆಗಟ್ಟಲು ಬಹುಮಟ್ಟಿಕೆ ಸಹಾಯಕವಾಗಲಿದೆ ಎಂದು ಸಚಿವರು ತಿಳಿಸಿದರು.
ಇದನ್ನೂ ಓದಿ:ನಿಯಮ 69 ರ ಚರ್ಚೆಗೆ ಸಮಯವೇಕಿಲ್ಲ? :ಕಾಂಗ್ರೆಸ್ ಶಾಸಕಾಂಗ ಸಭೆಯಲ್ಲಿ ಆಕ್ಷೇಪ
ರಾಜ್ಯದಲ್ಲಿ ಮೊದಲ ಡೋಸ್ ಲಿಸಿಕೆ ಪಡೆದವರ ಪ್ರಮಾಣ ಶೇ.107ರಷ್ಟಿದೆ. 4.74 ಕೋಟಿ ಮೊದಲ ಡೋಸ್ ಲಸಿಕೆ ನೀಡಲಾಗಿದ್ದು, ಶೇ. 96 ರಷ್ಟು ಜನ ಎರಡು ಡೋಸ್ ಲಸಿಕೆ ಪಡೆದಿದ್ದಾರೆ. ಜೊತೆಗೆ 12 ವರ್ಷಕ್ಕಿಂತ ಮೇಲ್ಪಟ್ಟ ಮಕ್ಕಳಿಗೆ ಈಗಾಗಲೇ 1.25 ಕೋಟಿ ಡೋಸ್ ಲಸಿಕೆ ನೀಡಲಾಗಿದೆ. ಜೊತೆಗೆ, 56 ಸಾವಿರ ಆಕ್ಸಿಜನ್ ಬೆಡ್ಗಳಿವೆ, ಆಕ್ಸಿಜನ್ ಉತ್ಪಾದನಾ ಮತ್ತು ಸಂಗ್ರಹ ಸಾಮರ್ಥಯ 300 ಮೆಟ್ರಿಕ್ ಟನ್ನಿಂದ 1,170 ಮೆಟ್ರಿಕ್ ಟನ್ಗೆ ಹೆಚ್ಚಿಸಲಾಗಿದೆ. 2.5 ಲಕ್ಷ ಕೋವಿಡ್ ಟೆಸ್ಟ್ ಸಾಮರ್ಥಯ ನಮ್ಮಲ್ಲಿದ್ದು, 265 ಲ್ಯಾಬ್ಗಳನ್ನು ಸ್ಥಾಪಿಸಲಾಗಿದೆ ಎಂದು ಸಚಿವರು ಮಾಹಿತಿ ನೀಡಿದರು.
ಕೋವಿಡ್ ನಿಯಮ ಪಾಲಿಸಿ: ನಾಲ್ಕನೇ ಅಲೆ ಎದುರಿಸಲು ಸರ್ಕಾರ ಸನ್ನದ್ಧವಾಗಿದೆ. ಎಲ್ಲಾ ಸಿದ್ದತೆಗಳನ್ನೂ ಸಹ ಮಾಡಿಕೊಳ್ಳಲಾಗಿದೆ. ಜನತೆ ಭಯಪಡುವ ಅಗತ್ಯವಿಲ್ಲ. ಆದಾಗ್ಯೂ, ಕೋವಿಡ್ ಮಾರ್ಗಸೂಚಿಗಳನ್ನು ಎಲ್ಲರೂ ಕಡ್ಡಾಯವಾಗಿ ಪಾಲಿಸಬೇಕು. ಮುಖ್ಯವಾಗಿ ಮಾಸ್ಕ್ ಕಡ್ಡಾಯವಾಗಿ ಧರಿಸಬೇಕು. ಈ ಕುರಿತು ಮುಖ್ಯಮಂತ್ರಿಯವ ಜೊತೆಗೂ ಚರ್ಚೆ ಮಾಡುವುದಾಗಿ ಸುಧಾಕರ್ ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
MUST WATCH
ಹೊಸ ಸೇರ್ಪಡೆ
ಚನ್ನಮ್ಮನ ಕಿತ್ತೂರು: ಮಹಾನ್ ಯೋಗಿಗಳು-ಸೂಫಿ ಸಂತರ ನಾಡಿದು- ಶಿಲೇದಾರ
Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ
ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ
ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ