ಮಾಜಿ ಸಿಎಂ ಪೋಸ್ಟರ್‌ ಅಂಟಿಸುವ ಘಟನೆ 75 ವರ್ಷಗಳಲ್ಲಿ ಎಲ್ಲೂ ನಡೆದಿಲ್ಲ: ಸಚಿವ ಸುಧಾಕರ್ ಟೀಕೆ


Team Udayavani, Sep 24, 2022, 2:48 PM IST

dr k sudhakar

ಬೆಂಗಳೂರು: ಪೇಸಿಎಂ ಅಭಿಯಾನದ ಮೂಲಕ ಕಾಂಗ್ರೆಸ್‌ ನಾಯಕರು ರಾಜ್ಯ ರಾಜಕೀಯದ ಘನತೆಯನ್ನು ಮಣ್ಣುಪಾಲು ಮಾಡಿದ್ದಾರೆ. ಅಧಿಕಾರ ಕಳೆದುಕೊಂಡು ಹತಾಶರಾಗಿರುವ ಕಾಂಗ್ರೆಸ್‌ ನಾಯಕರು ವೈಯಕ್ತಿಕ ಲಾಭಕ್ಕಾಗಿ ಹೀಗೆ ಮಾಡುತ್ತಿದ್ದಾರೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಇಡೀ ದೇಶದಲ್ಲಿ ಅಧಿಕಾರ ಕಳೆದುಕೊಂಡಿರುವ ಕಾಂಗ್ರೆಸ್‌ ನಾಯಕರು ಇಂತಹ ಕೀಳುಮಟ್ಟದ ರಾಜಕೀಯ ಮಾಡುವುದರಲ್ಲಿ ನಿಸ್ಸೀಮರೆಂದು ಸಾಬೀತು ಮಾಡಿ ಬೆತ್ತಲಾಗಿದ್ದಾರೆ. ಆದರೆ ಅವರು ಏನೇ ಮಾಡಿದರೂ ಮತ್ತೆ ಅಧಿಕಾರಕ್ಕೆ ಬರಲು ಸಾಧ್ಯವಿಲ್ಲ. ಅನಿಲ್‌ ಅಯ್ಯರ್‌ ಎಂಬುವರ ಹೆಸರನ್ನೂ ದುರ್ಬಳಕೆ ಮಾಡಿಕೊಂಡಿದ್ದು, ಅವರ ವಿರುದ್ಧ ಕಾನೂನು ಕ್ರಮ ವಹಿಸಲಾಗುವುದು ಎಂದು ಹೇಳಿದ್ದಾರೆ. ಕಾಂಗ್ರೆಸ್‌ನವರು ಸತ್ಯ ಹರಿಶ್ಚಂದ್ರರಂತೆ ವರ್ತನೆ ಮಾಡುತ್ತಿದ್ದಾರೆ. ಆದರೆ ಅವರ ಹಿರಿಯ ನಾಯಕರೇ ಜಾಮೀನು ಮೇಲೆ ಹೊರಗಿದ್ದಾರೆ. ಭ್ರಷ್ಟಾಚಾರದಿಂದಲೇ ಕಾಂಗ್ರೆಸ್‌ ಅಧಿಕಾರ ಕಳೆದುಕೊಂಡಿದೆ. ಇವರಿಗೆ ಯಾವ ನೈತಿಕತೆ ಇದೆ ಎಂದು ಪ್ರಶ್ನೆ ಮಾಡಿದರು.

ಪದೇ ಪದೇ 40% ಕಮಿಶನ್‌ ಬಗ್ಗೆ ಹೇಳಿದರೆ ಜನರು ನಂಬುತ್ತಾರೆ ಎಂದು ಕಾಂಗ್ರೆಸ್‌ ತಿಳಿದಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಶುದ್ಧ ಆಡಳಿತ ಜನರಿಗೆ ತಿಳಿದಿದೆ. ಅವರು ಜನಸಾಮಾನ್ಯರ ಸಿಎಂ ಎಂಬುದು ಜನರಿಗೆ ಗೊತ್ತಿದೆ. ಮುಖ್ಯಮಂತ್ರಿಗಳು ಒಳ್ಳೆಯ ಆಡಳಿತವನ್ನು ನೀಡುವುದನ್ನು ಕಾಂಗ್ರೆಸ್‌ ಗೆ ಸಹಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಮಾಜಿ ಮುಖ್ಯಮಂತ್ರಿಯೊಬ್ಬರು ಹೋಗಿ ಪೋಸ್ಟರ್‌ ಅಂಟಿಸುವುದನ್ನು 75 ವರ್ಷಗಳ ಇತಿಹಾಸದಲ್ಲೇ ನೋಡಿಲ್ಲ ಎಂದರು.

ಸಮುದಾಯದ ವಿರುದ್ಧ ನಡೆ; ಕಾಂಗ್ರೆಸ್‌ ಹಿಂದಿನಿಂದಲೂ ಪ್ರಬಲ ಸಮುದಾಯದವರ ವಿರುದ್ಧ ಕೆಲಸ ಮಾಡುತ್ತಿದೆ. ಹಿಂದೆ ವೀರೇಂದ್ರ ಪಾಟೀಲ್‌, ಕೆಂಗಲ್‌ ಹನುಮಂತಯ್ಯ ಅವರ ವಿರುದ್ಧ ಕಾಂಗ್ರೆಸ್‌ ಹೀಗೆಯೇ ಕೆಲಸ ಮಾಡಿತ್ತು. ಅದರಲ್ಲೂ ಲಿಂಗಾಯತ ಸಮುದಾಯದವರ ವಿರುದ್ಧ ಕಾಂಗ್ರೆಸ್‌ ನವರು ಕೆಲಸ ಮಾಡುತ್ತಾರೆ. ಇದರಿಂದಾಗಿಯೇ ಅಧಿಕಾರಕ್ಕೆ ಬರುವ ಅಲ್ಪ ಅವಕಾಶವನ್ನೂ ಕಳೆದುಕೊಂಡಿದ್ದಾರೆ. ಜನಸಾಮಾನ್ಯರೇ ಕಾಂಗ್ರೆಸ್‌ ಗೆ ಸರಿಯಾದ ಉತ್ತರ ನೀಡಲಿದ್ದಾರೆ. ಚುನಾವಣೆಯ ಸಮಯದಲ್ಲಿ ಜನರೇ ಕಾಂಗ್ರೆಸ್‌ ನಾಯಕರನ್ನು ಮನೆಗೆ ಕಳುಹಿಸುತ್ತಾರೆ ಎಂದರು.

ಇದನ್ನೂ ಓದಿ:ಮಥುರಾದಿಂದ ಕಂಗನಾ ಸ್ಪರ್ಧೆ?; ಸಂಸದೆ ಹೇಮಾ ಮಾಲಿನಿ ಪ್ರತಿಕ್ರಿಯೆ ಹೀಗಿದೆ

ಹಿರಿಯ ನಾಯಕ ಕೆ.ಎಚ್.ಮುನಿಯಪ್ಪ ಅವರೊಂದಿಗೆ ನನಗೆ ಉತ್ತಮ ವೈಯಕ್ತಿಕ ಸಂಬಂಧವಿದೆ. ಹೀಗಾಗಿ ಅವರನ್ನು ಭೇಟಿ ಮಾಡಲಾಗಿದೆಯೇ ಹೊರತು ಅದರಲ್ಲಿ ರಾಜಕೀಯ ಇಲ್ಲ. ಅವರು ಎಲ್ಲಿದ್ದರೂ ರಾಜಕೀಯ ಶಕ್ತಿಯಾಗಿಯೇ ಇದ್ದಾರೆ. ಯಾವುದೇ ಒಳ್ಳೆಯ ನಾಯಕರು ಬಿಜೆಪಿಗೆ ಬಂದರೆ ಸ್ವಾಗತಿಸುತ್ತೇವೆ. ಅನೇಕ ಮುಖಂಡರ ಜೊತೆ ನಾನು ಸಂಪರ್ಕದಲ್ಲಿದ್ದೇನೆ ಎಂದರು.

ಟಾಪ್ ನ್ಯೂಸ್

Srinagar: ಝೇಲಂ ನದಿಯಲ್ಲಿ ವಿದ್ಯಾರ್ಥಿಗಳಿದ್ದ ಬೋಟ್‌ ಮುಳುಗಡೆ; ಹಲವರು ನಾಪತ್ತೆ

IPL 2024; ಮುಂಬೈ ಪಂದ್ಯದ ಟಾಸ್ ಕಳ್ಳಾಟ ಬಿಚ್ಚಿಟ್ಟ ಆರ್ ಸಿಬಿ ನಾಯಕ ಫಾಫ್| Video

IPL 2024; ಮುಂಬೈ ಪಂದ್ಯದ ಟಾಸ್ ಕಳ್ಳಾಟ ಬಿಚ್ಚಿಟ್ಟ ಆರ್ ಸಿಬಿ ನಾಯಕ ಫಾಫ್| Video

Salman Khan: ನಟ ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ

Salman Khan: ನಟ ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ

RCBsvSRH; ಚಿನ್ನಸ್ವಾಮಿಯಲ್ಲಿ ರೆಕಾರ್ಡ್ಸ್ ಸುರಿಮಳೆ; ದಾಖಲೆಗಳ ವಿವರ ಇಲ್ಲಿದೆ

RCBsvSRH; ಚಿನ್ನಸ್ವಾಮಿಯಲ್ಲಿ ರೆಕಾರ್ಡ್ಸ್ ಸುರಿಮಳೆ; ದಾಖಲೆಗಳ ವಿವರ ಇಲ್ಲಿದೆ

Bus Falls From Bridge In Odisha’s Jajpur

Jajpur; ಸೇತುವೆಯಿಂದ ಬಿದ್ದ ಬಸ್; ಐವರು ಸಾವು, ಹಲವರಿಗೆ ಗಾಯ

‘Please sell the RCB team to someone else’; Tennis star appeal

IPL 2024; ‘ದಯವಿಟ್ಟು ಆರ್ ಸಿಬಿ ತಂಡವನ್ನು ಬೇರೆಯವರಿಗೆ ಮಾರಿ ಬಿಡಿ’; ಟೆನ್ನಿಸ್ ತಾರೆ ಮನವಿ

Lok Sabha Elections ಈಶ್ವರಪ್ಪ ಸ್ಪರ್ಧೆಯಿಂದ ಬಿಜೆಪಿಗೆ ಲಾಭ: ಆರ್‌. ಅಶೋಕ್‌

Lok Sabha Elections ಈಶ್ವರಪ್ಪ ಸ್ಪರ್ಧೆಯಿಂದ ಬಿಜೆಪಿಗೆ ಲಾಭ: ಆರ್‌. ಅಶೋಕ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Elections ಈಶ್ವರಪ್ಪ ಸ್ಪರ್ಧೆಯಿಂದ ಬಿಜೆಪಿಗೆ ಲಾಭ: ಆರ್‌. ಅಶೋಕ್‌

Lok Sabha Elections ಈಶ್ವರಪ್ಪ ಸ್ಪರ್ಧೆಯಿಂದ ಬಿಜೆಪಿಗೆ ಲಾಭ: ಆರ್‌. ಅಶೋಕ್‌

ಎ. 20ರಂದು ಮತ್ತೆ ರಾಜ್ಯಕ್ಕೆ ಪ್ರಧಾನಿ ಮೋದಿ?

Lok Sabha Election; ಎ. 20ರಂದು ಮತ್ತೆ ರಾಜ್ಯಕ್ಕೆ ಪ್ರಧಾನಿ ಮೋದಿ?

ಮತ್ತೆ ಸಿಎಂ ಚರ್ಚೆಗೆ ಡಿ.ಕೆ. ಶಿವಕುಮಾರ್‌ ನಾಂದಿ

Congress ಮತ್ತೆ ಸಿಎಂ ಚರ್ಚೆಗೆ ಡಿ.ಕೆ. ಶಿವಕುಮಾರ್‌ ನಾಂದಿ

K. S. Eshwarappa ಸಂಧಾನದ ಎಲ್ಲ ಬಾಗಿಲು ಬಂದ್‌

K. S. Eshwarappa ಸಂಧಾನದ ಎಲ್ಲ ಬಾಗಿಲು ಬಂದ್‌

“ಹಾದಿ ತಪ್ಪಿದ’ ಹೇಳಿಕೆಗೆ ಎಚ್‌.ಡಿ. ಕುಮಾರಸ್ವಾಮಿ ವಿಷಾದ

“ಹಾದಿ ತಪ್ಪಿದ’ ಹೇಳಿಕೆಗೆ ಎಚ್‌.ಡಿ. ಕುಮಾರಸ್ವಾಮಿ ವಿಷಾದ

MUST WATCH

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

udayavani youtube

ಕೇಕ್ ಪ್ರಿಯರಿಗೆ ಹೇಳಿ ಮಾಡಿಸಿದ ಜಾಗ ಔರಾ .

udayavani youtube

ಶ್ರೀ ವೈಷ್ಣವಿ ದುರ್ಗಾ ದೇವಾಲಯ

udayavani youtube

ಟೈಟನ್ ಕಂಪೆನಿಯ Xylys ವಾಚ್ ವಿಶೇಷತೆಗಳೇನು ?

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

ಹೊಸ ಸೇರ್ಪಡೆ

Srinagar: ಝೇಲಂ ನದಿಯಲ್ಲಿ ವಿದ್ಯಾರ್ಥಿಗಳಿದ್ದ ಬೋಟ್‌ ಮುಳುಗಡೆ; ಹಲವರು ನಾಪತ್ತೆ

IPL 2024; ಮುಂಬೈ ಪಂದ್ಯದ ಟಾಸ್ ಕಳ್ಳಾಟ ಬಿಚ್ಚಿಟ್ಟ ಆರ್ ಸಿಬಿ ನಾಯಕ ಫಾಫ್| Video

IPL 2024; ಮುಂಬೈ ಪಂದ್ಯದ ಟಾಸ್ ಕಳ್ಳಾಟ ಬಿಚ್ಚಿಟ್ಟ ಆರ್ ಸಿಬಿ ನಾಯಕ ಫಾಫ್| Video

Salman Khan: ನಟ ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ

Salman Khan: ನಟ ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ

RCBsvSRH; ಚಿನ್ನಸ್ವಾಮಿಯಲ್ಲಿ ರೆಕಾರ್ಡ್ಸ್ ಸುರಿಮಳೆ; ದಾಖಲೆಗಳ ವಿವರ ಇಲ್ಲಿದೆ

RCBsvSRH; ಚಿನ್ನಸ್ವಾಮಿಯಲ್ಲಿ ರೆಕಾರ್ಡ್ಸ್ ಸುರಿಮಳೆ; ದಾಖಲೆಗಳ ವಿವರ ಇಲ್ಲಿದೆ

Bus Falls From Bridge In Odisha’s Jajpur

Jajpur; ಸೇತುವೆಯಿಂದ ಬಿದ್ದ ಬಸ್; ಐವರು ಸಾವು, ಹಲವರಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.