ಸಾವರ್ಕರ್ ಭಾವಚಿತ್ರಕ್ಕೆ ವಿರೋಧ ಪೂರ್ವ ನಿಯೋಜಿತ ಕೃತ್ಯ: ಸುನೀಲ್ ಕುಮಾರ್
Team Udayavani, Aug 15, 2022, 8:23 PM IST
ಉಡುಪಿ: ಸಾರ್ವಕರ್ ಭಾವಚಿತ್ರಕ್ಕೆ ಆಕ್ಷೇಪಣೆ ಯಾವ ಕಾರಣಕ್ಕೂ ಸಹಿಸಲು ಸಾಧ್ಯವಿಲ್ಲ, ಸಾವರ್ಕರ್ ಎರಡು ಕರಿನೀರಿನ ಶಿಕ್ಷೆ ಅನುಭವಿಸಿರುವ ಹೋರಾಟಗಾರ. ಅವರ ಬಗ್ಗೆ ಗೊತ್ತಾಗಲು ಅಂಡಾಮಾನ್ ಗೆ ಭೇಟಿ ಮಾಡಬೇಕು. ಪಿ.ಎಫ್.ಐ ವಿರೋಧಿಸುತ್ತದೆ ಎಂಬ ಕಾರಣಕ್ಕೆ ಸಾವರ್ಕರ್ ಫೋಟೋ ತೆಗೆಯಲು ಸಾಧ್ಯವಿಲ್ಲ ಎಂದು ಇಂಧನ ಸಚಿವ ಸುನೀಲ್ ಕುಮಾರ್ ಕಿಡಿ ಕಾರಿದರು.
ಅವರು ಸೋಮವಾರ ನಗರದ ಪುರಭವನದಲ್ಲಿ ಪತ್ರಕರ್ತರ ಜೊತೆ ಮಾತನಾಡಿ, ಸಾವರ್ಕರ್ ಬಗ್ಗೆ ಆಕ್ಷೇಪಣೆ ಮಾತನಾಡುವುದನ್ನು ಸಹಿಸಲು ಸಾಧ್ಯವಿಲ್ಲ. ಸಾವರ್ಕರ್ ಆಕ್ಷೇಪಿಸುವುದು ಅಂದ್ರೆ ಸ್ವಾತಂತ್ರ್ಯವನ್ನು ಆಕ್ಷೇಪಿಸಿದಂತೆ, ಸಾವರ್ಕರ್ ಅಪ್ರತಿಮ ದೇಶಭಕ್ತ. ಟಿಪ್ಪುವನ್ನು ಸಾವರ್ಕರ್ ಅವರಿಗೆ ಹೋಲಿಕೆ ಮಾಡುವುದು ಒಂದು ವ್ಯವಸ್ಥಿತ ಷಡ್ಯಂತ್ರ ಎಂದರು
ಸಣ್ಣ ಘಟನೆ ಇಟ್ಟುಕೊಂಡು ಅಶಾಂತಿ ಸೃಷ್ಟಿಸಲು ಪಿಎಫ್ಐ ಸಂಘಟನೆ ಯತ್ನಿಸುತ್ತಿದೆ, ಸರಕಾರ ಇಂಥವರನ್ನು ಹದ್ದುಬಸ್ತಿನಲ್ಲಿ ಇಡುತ್ತದೆ. ಪೊಲೀಸ್ ಇಲಾಖೆ, ಗೃಹ ಇಲಾಖೆ ಎಚ್ಚರಿಕೆ ಹೆಜ್ಜೆ ಇಡುತ್ತದೆ. ಸಾವರ್ಕರ್ ಭಾವಚಿತ್ರಕ್ಕೆ ವಿರೋಧ ಪೂರ್ವ ನಿಯೋಜಿತ ಕೃತ್ಯ ಎಂದು ಆಕ್ರೋಶ ವ್ಯಕ್ತಪಡಿಸಿದರು